ಬ್ರೇಕಿಂಗ್ ನ್ಯೂಸ್
11-09-22 11:14 am HK News Desk ಕ್ರೈಂ
ಉಡುಪಿ, ಸೆ.11: ಬೆಂಗಳೂರು ನೋಂದಣಿಯ ಇನ್ನೋವಾ ಕಾರಿನಲ್ಲಿ ಬಂದಿದ್ದ ತಂಡವೊಂದು ಉಡುಪಿ ಕೃಷ್ಣ ಮಠದ ಬಳಿ ವ್ಯಕ್ತಿಯೊಬ್ಬರನ್ನು ಅಪಹರಿಸಿದ ಘಟನೆ ನಡೆದಿದ್ದು, ಕೆಲಕಾಲ ಆತಂಕಕ್ಕೀಡು ಮಾಡಿದ್ದಲ್ಲದೆ ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರನ್ನು ಬೇಸ್ತು ಬೀಳುವಂತೆ ಮಾಡಿತ್ತು.
ಇನ್ನೋವಾ ಕಾರಿನಲ್ಲಿ ಬಂದಿದ್ದ ನಾಲ್ವರ ತಂಡ ಕಾರಿನಿಂದ ಇಳಿದು ಕೃಷ್ಣ ಮಠಕ್ಕೆ ನಡೆದುಕೊಂಡು ಹೋಗುತ್ತಿದ್ದ ಒಬ್ಬರನ್ನು ಬಲವಂತದಿಂದ ಕಾರಿನಲ್ಲಿ ಒಳಕ್ಕೆಳೆದು ಕರೆದೊಯ್ದಿದ್ದರು. ಇದನ್ನು ಕಂಡ ಸ್ಥಳೀಯರು ಅಪಹರಣದ ಬಗ್ಗೆ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದರು. ಕೂಡಲೇ ಉಡುಪಿ ನಗರ ಪೊಲೀಸರು ಅಲರ್ಟ್ ಆಗಿದ್ದು ವಿವಿಧ ಠಾಣೆಗಳಿಗೆ ಎಚ್ಚರಿಕೆ ರವಾನಿಸಿದ್ದರು. ವಾಹನ ಕಲ್ಸಂಕ ಮಾರ್ಗವಾಗಿ ಕರಾವಳಿ ಬೈಪಾಸ್ ತಲುಪಿ, ಅಲ್ಲಿಂದ ಹೆಜಮಾಡಿ ಟೋಲ್ಗೇಟ್ ದಾಟಿ ಮುಂದೆ ಹೋಗಿರುವುದು ಟ್ರಾಫಿಕ್ ಪೊಲೀಸರಿಗೆ ತಿಳಿದುಬಂದಿತ್ತು.
ಬಳಿಕ ಉಡುಪಿ ಪೊಲೀಸರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದು ನಂಬರ್ ಪ್ಲೇಟ್ ಆಧರಿಸಿ ಹಿಂದೆ ಬಿದ್ದ ಪೊಲೀಸರು ಕೂಳೂರು ಬಳಿ ಇನ್ನೋವಾ ಕಾರನ್ನು ಅಡ್ಡಹಾಕಿ, ಕಾರಿನಲ್ಲಿದ್ದವರನ್ನು ವಿಚಾರಣೆ ನಡೆಸಿದ್ದಾರೆ. ಕಿಡ್ನಾಪ್ ಮಾಹಿತಿ ಪಡೆದು ವಿಚಾರಣೆ ನಡೆಸಿದ ಪೊಲೀಸರಿಗೆ ಕಾರಿನಲ್ಲಿದ್ದವರ ಮಾತು ಕೇಳಿ ಶಾಕ್ ಆಗಿತ್ತು. ಅಲ್ಲದೆ, ಅಪಹರಣ ಕತೆಯೇ ಉಲ್ಟಾ ಆಗಿ ಪೊಲೀಸರೇ ತಮ್ಮ ಕಣ್ಣನ್ನು ನಂಬದಾಗಿದ್ದರು. ಯಾಕಂದ್ರೆ, ಅಲ್ಲಿ ನಿಜಕ್ಕೂ ಅಪಹರಣ ಆಗಿರಲಿಲ್ಲ.
ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನಲ್ಲಿ ದಾಖಲಾಗಿದ್ದ ಮಾನಸಿಕ ಅಸ್ವಸ್ಥ ರೋಗಿ ತಪ್ಪಿಸಿಕೊಂಡು ಉಡುಪಿಗೆ ಬಂದಿದ್ದು ಮನೆಯವರ ಕೋರಿಕೆಯಂತೆ ರಕ್ಷಣೆ ಮಾಡಿದ್ದರು. ಕಾರಿನಲ್ಲಿ ಬಲವಂತದಿಂದ ಕುಳ್ಳಿರಿಸಿ ಹೊತ್ತೊಯ್ದಿದ್ದು ಸ್ಥಳೀಯರಿಗೆ ಯಾರನ್ನೋ ಅಪಹರಿಸಲಾಗಿದೆ ಎನ್ನುವ ಸಂದೇಶ ಹೋಗಿತ್ತು. ಸೆ.8ರಂದು ಯೋಗೀಶ್ ಭಟ್ (54) ಎಂಬ ವ್ಯಕ್ತಿ ಬೆಂಗಳೂರಿನ ಮಾನಸಿಕ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದು ಉಡುಪಿಯ ಎಂಜಿಎಂ ಕಾಲೇಜು ಸಮೀಪದ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಈ ಬಗ್ಗೆ ಮನೆಯವರೇ ಆಸ್ಪತ್ರೆಯವರಿಗೆ ಮಾಹಿತಿ ನೀಡಿದ್ದರು. ಶನಿವಾರ ಬೆಳಗ್ಗೆ ಯೋಗೀಶ್ ಭಟ್ ಅವರು ಮನೆಯಿಂದ ಕೃಷ್ಣ ಮಠದತ್ತ ತೆರಳಿದ್ದರು. ಇದೇ ವೇಳೆ, ಬೆಂಗಳೂರಿನಿಂದ ಬಂದಿದ್ದ ಮಾನಸಿಕ ವೈದ್ಯರ ತಂಡ ಉಡುಪಿಯಲ್ಲಿ ಹುಡುಕಾಟ ನಡೆಸಿದ್ದು ಬಳಿಕ ಕನಕದಾಸ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅವರನ್ನ ಪತ್ತೆಹಚ್ಚಿ ಇನ್ನೋವಾ ಕಾರಿನಲ್ಲಿ ಬಲವಂತದಿಂದ ಕೂರಿಸಿದ್ದರು. ಇದನ್ನು ಕಂಡ ಸ್ಥಳೀಯರು ಪೊಲೀಸ್ ಕಂಟ್ರೋಲ್ ರೂಮ್ಗೆ ಮಾಹಿತಿ ನೀಡಿದ್ದರು. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಇನೋವಾ ಕಾರು ಜಿಲ್ಲೆಯ ಗಡಿ ದಾಟುತ್ತಲೇ ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿ ಕೂಳೂರಿನಲ್ಲಿ ಅಡ್ಡಹಾಕಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದ ಬಳಿಕ ವೈದ್ಯರ ತಂಡವನ್ನು ಬೆಂಗಳೂರಿಗೆ ತೆರಳಲು ಅನುಮತಿ ನೀಡಿದ್ದಾರೆ.
Metally retired man who had escaped from Bangalore hospital was caught in Udupi near Krishna temple as he was forced to sit inside the car people who were seeing it complained to the police that some person was kidnapped, High alert was issued all over Udupi and Mangalore, later the car was stopped at Kulur in Mangalore we're the police came to know that it was not a kidnap but it was a rescue to nab the mentally retired man.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm