ಬ್ರೇಕಿಂಗ್ ನ್ಯೂಸ್
11-09-22 12:29 pm HK News Desk ಕ್ರೈಂ
ಉಳ್ಳಾಲ, ಸೆ.11: ಸೋಮೇಶ್ವರ ಸಮುದ್ರ ತೀರದಿಂದ ನಿರಂತರವಾಗಿ ಮರಳು ಕಳ್ಳತನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮರಳು ಕಳ್ಳತನ ತಡೆಯಲು ಹಾಕಿದ್ದ ಸಿಸಿಟಿವಿ ಮತ್ತು ತಂತಿ ತಡೆ ಬೇಲಿಯನ್ನೇ ಮರಳು ಕಳ್ಳರು ಧ್ವಂಸಗೈದು ಅಟ್ಟಹಾಸ ಮೆರೆದಿದ್ದಾರೆ.
ಮರಳು ಕಳ್ಳತನ ತಡೆಯಲು ಸೋಮೇಶ್ವರ ಸಮುದ್ರ ತೀರ, ಕೋಟೆಪುರ, ತಲಪಾಡಿ ಇನ್ನಿತರ ಪ್ರದೇಶಗಳಲ್ಲಿ ಜಿಲ್ಲಾಡಳಿತವು ಇಂಟರ್ನೆಟ್ ಆಧಾರಿತ ಸಿಸಿಟಿವಿ ಗಳನ್ನ ಅಳವಡಿಸಿತ್ತು. ನಿನ್ನೆ ಸೆ.10 ರ ಮುಂಜಾನೆ ನಸುಕಿನ 1ರಿಂದ ಎರಡು ಗಂಟೆ ಸುಮಾರಿಗೆ ಸೋಮೇಶ್ವರ ದೇವಸ್ಥಾನದ ರಥ ಬೀದಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯನ್ನ ಟಿಪ್ಪರ್ ಒಂದು ಹಿಮ್ಮುಖವಾಗಿ ಚಲಿಸಿ ಧ್ವಂಸ ಮಾಡಿದೆ. ಮರಳು ಕಳ್ಳರು ಸಿಸಿ ಕ್ಯಾಮೆರಾವನ್ನ ಟಿಪ್ಪರ್ ಮುಖೇನ ಪುಡಿಗೈದ ವೀಡಿಯೋ ಫೂಟೇಜ್ ದಾಖಲಾಗಿದೆ.








ತಿಂಗಳ ಹಿಂದಷ್ಟೆ ತಲಪಾಡಿಯಲ್ಲೂ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾವನ್ನ ಒಂದೇ ದಿವಸದಲ್ಲಿ ಪುಡಿಗೈಯಲಾಗಿತ್ತು. ಮರಳು ಕಳ್ಳತನ ತಡೆಗೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಸೋಮೇಶ್ವರ ಸಮುದ್ರ ತೀರದುದ್ದಕ್ಕೂ ಹಾಕಿದ್ದ ತಂತಿ ಬೇಲಿಯನ್ನೂ ಮುರಿದು ಹಾಕಲಾಗಿದೆ. ಉಳ್ಳಾಲ ನಗರಸಭೆ ವ್ಯಾಪ್ತಿಗೆ ಬರುವ ಸೋಮೇಶ್ವರ ಮೂಡಾ ಲೇ ಔಟಲ್ಲಿ ಹಾಕಲಾಗಿದ್ದ ತಂತಿ ಬೇಲಿಯನ್ನೇ ಮರಳು ಕಳ್ಳರು ಧ್ವಂಸಗೊಳಿಸಿದ್ದಾರೆ.
ಸರಕಾರಿ ಆಸ್ತಿ ನಷ್ಟಗೊಳಿಸಿದ ನಿಶಾಚರಿ ಮರಳು ಕಳ್ಳರ ವಿರುದ್ಧ ಈವರೆಗೂ ದೂರು ದಾಖಲಾಗಿಲ್ಲ. ನೂತನವಾಗಿ ಅಧಿಕಾರ ಸ್ವೀಕರಿಸಿರುವ ಉಳ್ಳಾಲ ತಹಶೀಲ್ದಾರ್ ಪುಟ್ಟರಾಜು ಡಿ.ಎ ಅವರು ಸಿಸಿಟಿವಿ ಕ್ಯಾಮೆರಾ ಮತ್ತು ತಂತಿ ತಡೆ ಬೇಲಿ ಧ್ವಂಸದ ಬಗ್ಗೆ ಕಂದಾಯ ನಿರೀಕ್ಷಕರಲ್ಲಿ ಪೊಲೀಸ್ ದೂರು ನೀಡಲು ಸೂಚಿಸಿರುವುದಾಗಿ ಹೇಳಿದ್ದಾರೆ.
Ullal Illegal sand extraction continues in Someshwar Beach, CC camera and fences destroyed by trucks in Mangalore in order to extract sand fearlessly.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm