ಬ್ರೇಕಿಂಗ್ ನ್ಯೂಸ್
11-09-22 03:31 pm HK News Desk ಕ್ರೈಂ
ಸುಳ್ಯ, ಸೆ.11: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಶಫೀಕ್ ಸೋದರ, ಇನ್ನೊಬ್ಬ ಹಿಂದು ಸಂಘಟನೆಯ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ್ದು ಈ ಬಗ್ಗೆ ಪ್ರಕರಣ ದಾಖಲಾದ ಬೆನ್ನಲ್ಲೇ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಳ್ಳಾರೆ ನಿವಾಸಿ ಅಬ್ದುಲ್ ಸಫ್ರಿದ್(21) ಬಂಧಿತ ಆರೋಪಿ. ಶನಿವಾರ ಸಂಜೆ ಈತ, ಬೆಳ್ಳಾರೆಯ ದೇವಿ ಹೈಟ್ಸ್ ಲಾಡ್ಜ್ ನಲ್ಲಿ ಮ್ಯಾನೇಜರ್ ಆಗಿರುವ ಪ್ರಶಾಂತ್ ಪೂಂಜ ಎಂಬವರಿಗೆ ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. ಈ ಬಗ್ಗೆ ಪ್ರಶಾಂತ್, ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಬೆಳ್ಳಾರೆ ಠಾಣೆ ಬಳಿ ಸೇರಿದ್ದರು.

ಅಬ್ದುಲ್ ಸಫ್ರಿದ್, ಕೊಲೆಯಾದ ಪ್ರವೀಣ್ ನೆಟ್ಟಾರ್ ಅವರ ಕೋಳಿ ಮಾರಾಟದ ಅಂಗಡಿಯಲ್ಲಿ ಕ್ಲಿನಿಂಗ್ ಕೆಲಸ ಮಾಡುತ್ತಿದ್ದ ಇಬ್ರಾಹಿಂ ಎಂಬವರ ಪುತ್ರನಾಗಿದ್ದು, ಕೊಲೆ ಆರೋಪಿ ಮಹಮ್ಮದ್ ಶಫೀಕ್ ಸಹೋದರ. ಪ್ರವೀಣ್ ಕೊಲೆಯಾದ ಬಳಿಕ ಬೆಳ್ಳಾರೆ ಬೂದಿ ಮುಚ್ಚಿದ ಕೆಂಡದಂತೇ ಇದೆ. ಇದೀಗ ಫೋನ್ ಮಾಡಿ ಬೆದರಿಸಿದ ಘಟನೆ ಬೆನ್ನಲ್ಲೇ ಪೊಲೀಸ್ ದೂರು ದಾಖಲಾಗಿತ್ತು. ಅಲ್ಲದೆ, ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸಬೇಕು. ಇಲ್ಲದಿದ್ದರೆ ಬೆಳ್ಳಾರೆ ಬಂದ್ ಗೆ ಕರೆ ನಡೆಸುವುದಾಗಿ ಹಿಂದು ಸಂಘಟನೆಗಳ ನಾಯಕರು ಎಚ್ಚರಿಕೆ ನೀಡಿದ್ದರು. ಎಸ್ಪಿ ಸೂಚನೆ ಮೇರೆಗೆ ತುರ್ತು ಕ್ರಮ ವಹಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
A tense situation prevailed on the night of Saturday for some time near Bellare police station as hundreds of Hindu workers gathered and demanded the arrest of the brother of the accused in Praveen Nettaru murder on the accusation of posing life threat to one of them.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm