ಬ್ರೇಕಿಂಗ್ ನ್ಯೂಸ್
11-09-22 07:23 pm HK News Desk ಕ್ರೈಂ
ಚೆನ್ನೈ, ಸೆ.11: ಬೆಕ್ಕಿನ ಮರಿಗಳಿಗೆ ಹುಲಿಯ ಬಣ್ಣ ಬಳಿದು, ಹುಲಿ ಮರಿಗಳು ಮಾರಾಟಕ್ಕಿವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಯುವಕನನ್ನು ತಮಿಳುನಾಡಿನ ವೆಲ್ಲೂರು ಪೊಲೀಸರು ಬಂಧಿಸಿದ್ದಾರೆ.
ತಿರುವಣ್ಣಾಮಲೈ ಮೂಲದ ಪಾರ್ಥಿಪನ್ (24) ಎಂಬಾತ ತನ್ನಲ್ಲಿ ಮೂರು ತಿಂಗಳ ಹುಲಿ ಮರಿಗಳಿವೆ. ಮಾರಾಟಕ್ಕಿದ್ದು, 25 ಲಕ್ಷ ರೂ.ಗೆ ಯಾರಿಗಾದರೂ ಬೇಕಾದರೆ ತಿಳಿಸಿ, 10 ದಿನಗಳ ಒಳಗೆ ನಿಮ್ಮ ವಿಳಾಸಕ್ಕೆ ಹುಲಿ ಮರಿಗಳನ್ನು ತಲುಪಿಸಲಾಗುವುದು ಎಂದು ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಶೇರ್ ಮಾಡಿದ್ದ.
ಈ ವಿಷಯ ಅರಣ್ಯಾಧಿಕಾರಿಗಳಿಗೆ ತಲುಪಿದ್ದು, ಕೂಡಲೇ ಸ್ಟೇಟಸ್ ಹಾಕಿದವನನ್ನು ಹುಡುಕಲು ಆರಂಭಿಸಿದ್ದಾರೆ. ಇದನ್ನು ತಿಳಿದ ಪಾರ್ಥಿಪನ್ ಪರಾರಿ ಆಗಲು ಯತ್ನಿಸಿದ್ದ. ಕೊನೆಗೂ ಅರಣ್ಯಾಧಿಕಾರಿಗಳು ವೆಲ್ಲೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿಸಿದ ಬಳಿಕ, ಪಾರ್ಥಿಪನ್ ಮನೆಗೆ ಹೋಗಿ ಪರಿಶೀಲನೆ ನಡೆಸಿದಾಗ, ಅಲ್ಲಿ ಯಾವುದೇ ಹುಲಿ ಮರಿ ಇರಲಿಲ್ಲ. ವಿಚಾರಣೆ ನಡೆಸಿದಾಗ, ಬೆಕ್ಕಿನ ಮರಿಗಳಿಗೆ ಹುಲಿಯ ಬಣ್ಣ ಬಳಿದು ಅವುಗಳನ್ನು ಮಾರಾಟ ಮಾಡಲು ಯತ್ನಿಸಿದ್ದಾನೆ ಎನ್ನುವ ವಿಷಯ ಬೆಳಕಿಗೆ ಬಂದಿದೆ.
ವರದಿಯ ಪ್ರಕಾರ ಅಂಬತ್ತೂರಿನ ಸ್ನೇಹಿತ ತಮಿಜ್ ಈ ರೀತಿ ಮಾಡುವ ಯೋಜನೆಯನ್ನು ಕೊಟ್ಟಿದ್ದ. ಆತನೇ ಈ ಫೋಟೋವನ್ನು ಪಾರ್ಥಿಪನ್ ಗೆ ನೀಡಿದ್ದ ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿ ತಮಿಜ್ ನನ್ನು ಕೂಡ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
In Idukki, a young man was arrested for trying to extort money by painting a kitten as a tiger. Parthipan (24), a native of Tiruvannamala Arani, was arrested by the forest department. The forest department picked up the young man who advertised tiger cubs for sale through WhatsApp. The incident took place in Tamil Nadu border village near Marayur.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm