ಬ್ರೇಕಿಂಗ್ ನ್ಯೂಸ್
12-09-22 01:15 pm HK News Desk ಕ್ರೈಂ
ಲಕ್ನೋ, ಸೆ.12: ಹಿಂದುಳಿದ ವರ್ಗದ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ 19 ವರ್ಷದ ತನ್ನ ಮಗಳನ್ನು ತಂದೆಯೇ ಮರ್ಯಾದಾ ಹತ್ಯೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಪೈಶಾಚಿಕ ಘಟನೆ ನಡೆದಿದೆ.
ಆರೋಪಿ ತಂದೆ ಪ್ರಮೋದ್ ಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಮಗಳನ್ನು ಕತ್ತು ಹಿಸುಕಿ ಕೊಂದು ಆಕೆಯ ಮೃತದೇಹಕ್ಕೆ ಬೆಂಕಿ ಹಚ್ಚಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಮೋದ್ ಕುಮಾರ್ ಮೇಲ್ಜಾತಿಯ ವ್ಯಕ್ತಿಯಾಗಿದ್ದು ಆತನ ಮಗಳು 19 ವರ್ಷದ ಕಾಜಲ್, ಅದೇ ಊರಿನ ಹಿಂದುಳಿದ ಜಾತಿಯ ಯುವಕ ಅಜಯ್ ಕಶ್ಯಪ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ತಂದೆ ಬೈದು ಬುದ್ಧಿ ಹೇಳಿದರೂ, ಸಂಬಂಧ ಕಡಿದುಕೊಳ್ಳಲು ನಿರಾಕರಿಸಿದ್ದಳು. ಅಲ್ಲದೆ, ಅಜಯ್ ಕಶ್ಯಪ್ ಜೊತೆಗೆ ಕಾಜಲ್ ತನ್ನ ಮನೆಯವರಿಗೆ ತಿಳಿಸದೆ ಮನೆಯಿಂದ ಹೊರಟು ಹೋಗಿದ್ದಳು. ಇದರಿಂದ ಬೇಸತ್ತ ತಂದೆ ಪ್ರಮೋದ್ ಕುಮಾರ್ ತನ್ನ ಮರ್ಯಾದೆ ಹೋಗುತ್ತೆ ಎಂದು ಹೇಳಿ ಮಗಳನ್ನೇ ಕುತ್ತಿಗೆ ಹಿಸುಕಿ ಕೊಂದಿದ್ದಾನೆ. ಅಲ್ಲದೆ, ಶವವನ್ನು ಹಸುವಿನ ಸೆಗಣಿಯ ಗೊಬ್ಬರದ ಮಧ್ಯೆ ಹೂತು ಬೆಂಕಿ ಹಚ್ಚಿದ್ದಾನೆ.
ಸೆಪ್ಟೆಂಬರ್ 9 ರಂದು ರಾತ್ರಿ ಪಕ್ಕದ ಹೊಲದಲ್ಲಿ ಏನೋ ಕೆಲಸ ಇದೆಯೆಂದು ಹೇಳಿ ಮಗಳನ್ನು ಕರೆದೊಯ್ದು ಕೃತ್ಯ ಎಸಗಿದ್ದಾನೆ. ಮನೆಗೆ ಮರಳಿದ ನಂತರ, ಮಗಳನ್ನು ಪಾಣಿಪತ್ನಲ್ಲಿ ತನ್ನ ಸಹೋದರನಲ್ಲಿ ಬಿಟ್ಟು ಬಂದಿರುವುದಾಗಿ ಪ್ರಮೋದ್ ಮನೆಯಲ್ಲಿ ತಿಳಿಸಿದ್ದ. ಆದರೆ, ಶುಕ್ರವಾರ ರಾತ್ರಿ ಹೊಲದಲ್ಲಿ ಶವ ಸುಟ್ಟು ಹಾಕಿರುವ ಬಗ್ಗೆ ಸ್ಥಳೀಯರು ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಸ್ಥಳದಲ್ಲಿದ್ದ ಮೂಳೆಗಳನ್ನು ಸಂಗ್ರಹಿಸಿದ್ದು ಪ್ರಮೋದ್ ಕುಮಾರ್ ಬಗ್ಗೆ ಸಂಶಯ ಉಂಟಾಗಿ ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
In a case of honour killing, a 57-year-old man has been arrested for allegedly strangling his 19-year-old daughter to death over an inter-caste relationship.
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm