ಬ್ರೇಕಿಂಗ್ ನ್ಯೂಸ್
12-09-22 01:15 pm HK News Desk ಕ್ರೈಂ
ಲಕ್ನೋ, ಸೆ.12: ಹಿಂದುಳಿದ ವರ್ಗದ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ 19 ವರ್ಷದ ತನ್ನ ಮಗಳನ್ನು ತಂದೆಯೇ ಮರ್ಯಾದಾ ಹತ್ಯೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಪೈಶಾಚಿಕ ಘಟನೆ ನಡೆದಿದೆ.
ಆರೋಪಿ ತಂದೆ ಪ್ರಮೋದ್ ಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಮಗಳನ್ನು ಕತ್ತು ಹಿಸುಕಿ ಕೊಂದು ಆಕೆಯ ಮೃತದೇಹಕ್ಕೆ ಬೆಂಕಿ ಹಚ್ಚಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಮೋದ್ ಕುಮಾರ್ ಮೇಲ್ಜಾತಿಯ ವ್ಯಕ್ತಿಯಾಗಿದ್ದು ಆತನ ಮಗಳು 19 ವರ್ಷದ ಕಾಜಲ್, ಅದೇ ಊರಿನ ಹಿಂದುಳಿದ ಜಾತಿಯ ಯುವಕ ಅಜಯ್ ಕಶ್ಯಪ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ತಂದೆ ಬೈದು ಬುದ್ಧಿ ಹೇಳಿದರೂ, ಸಂಬಂಧ ಕಡಿದುಕೊಳ್ಳಲು ನಿರಾಕರಿಸಿದ್ದಳು. ಅಲ್ಲದೆ, ಅಜಯ್ ಕಶ್ಯಪ್ ಜೊತೆಗೆ ಕಾಜಲ್ ತನ್ನ ಮನೆಯವರಿಗೆ ತಿಳಿಸದೆ ಮನೆಯಿಂದ ಹೊರಟು ಹೋಗಿದ್ದಳು. ಇದರಿಂದ ಬೇಸತ್ತ ತಂದೆ ಪ್ರಮೋದ್ ಕುಮಾರ್ ತನ್ನ ಮರ್ಯಾದೆ ಹೋಗುತ್ತೆ ಎಂದು ಹೇಳಿ ಮಗಳನ್ನೇ ಕುತ್ತಿಗೆ ಹಿಸುಕಿ ಕೊಂದಿದ್ದಾನೆ. ಅಲ್ಲದೆ, ಶವವನ್ನು ಹಸುವಿನ ಸೆಗಣಿಯ ಗೊಬ್ಬರದ ಮಧ್ಯೆ ಹೂತು ಬೆಂಕಿ ಹಚ್ಚಿದ್ದಾನೆ.
ಸೆಪ್ಟೆಂಬರ್ 9 ರಂದು ರಾತ್ರಿ ಪಕ್ಕದ ಹೊಲದಲ್ಲಿ ಏನೋ ಕೆಲಸ ಇದೆಯೆಂದು ಹೇಳಿ ಮಗಳನ್ನು ಕರೆದೊಯ್ದು ಕೃತ್ಯ ಎಸಗಿದ್ದಾನೆ. ಮನೆಗೆ ಮರಳಿದ ನಂತರ, ಮಗಳನ್ನು ಪಾಣಿಪತ್ನಲ್ಲಿ ತನ್ನ ಸಹೋದರನಲ್ಲಿ ಬಿಟ್ಟು ಬಂದಿರುವುದಾಗಿ ಪ್ರಮೋದ್ ಮನೆಯಲ್ಲಿ ತಿಳಿಸಿದ್ದ. ಆದರೆ, ಶುಕ್ರವಾರ ರಾತ್ರಿ ಹೊಲದಲ್ಲಿ ಶವ ಸುಟ್ಟು ಹಾಕಿರುವ ಬಗ್ಗೆ ಸ್ಥಳೀಯರು ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಸ್ಥಳದಲ್ಲಿದ್ದ ಮೂಳೆಗಳನ್ನು ಸಂಗ್ರಹಿಸಿದ್ದು ಪ್ರಮೋದ್ ಕುಮಾರ್ ಬಗ್ಗೆ ಸಂಶಯ ಉಂಟಾಗಿ ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
In a case of honour killing, a 57-year-old man has been arrested for allegedly strangling his 19-year-old daughter to death over an inter-caste relationship.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm