ಬ್ರೇಕಿಂಗ್ ನ್ಯೂಸ್
12-09-22 01:15 pm HK News Desk ಕ್ರೈಂ
ಲಕ್ನೋ, ಸೆ.12: ಹಿಂದುಳಿದ ವರ್ಗದ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ 19 ವರ್ಷದ ತನ್ನ ಮಗಳನ್ನು ತಂದೆಯೇ ಮರ್ಯಾದಾ ಹತ್ಯೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಪೈಶಾಚಿಕ ಘಟನೆ ನಡೆದಿದೆ.
ಆರೋಪಿ ತಂದೆ ಪ್ರಮೋದ್ ಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಮಗಳನ್ನು ಕತ್ತು ಹಿಸುಕಿ ಕೊಂದು ಆಕೆಯ ಮೃತದೇಹಕ್ಕೆ ಬೆಂಕಿ ಹಚ್ಚಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಮೋದ್ ಕುಮಾರ್ ಮೇಲ್ಜಾತಿಯ ವ್ಯಕ್ತಿಯಾಗಿದ್ದು ಆತನ ಮಗಳು 19 ವರ್ಷದ ಕಾಜಲ್, ಅದೇ ಊರಿನ ಹಿಂದುಳಿದ ಜಾತಿಯ ಯುವಕ ಅಜಯ್ ಕಶ್ಯಪ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ತಂದೆ ಬೈದು ಬುದ್ಧಿ ಹೇಳಿದರೂ, ಸಂಬಂಧ ಕಡಿದುಕೊಳ್ಳಲು ನಿರಾಕರಿಸಿದ್ದಳು. ಅಲ್ಲದೆ, ಅಜಯ್ ಕಶ್ಯಪ್ ಜೊತೆಗೆ ಕಾಜಲ್ ತನ್ನ ಮನೆಯವರಿಗೆ ತಿಳಿಸದೆ ಮನೆಯಿಂದ ಹೊರಟು ಹೋಗಿದ್ದಳು. ಇದರಿಂದ ಬೇಸತ್ತ ತಂದೆ ಪ್ರಮೋದ್ ಕುಮಾರ್ ತನ್ನ ಮರ್ಯಾದೆ ಹೋಗುತ್ತೆ ಎಂದು ಹೇಳಿ ಮಗಳನ್ನೇ ಕುತ್ತಿಗೆ ಹಿಸುಕಿ ಕೊಂದಿದ್ದಾನೆ. ಅಲ್ಲದೆ, ಶವವನ್ನು ಹಸುವಿನ ಸೆಗಣಿಯ ಗೊಬ್ಬರದ ಮಧ್ಯೆ ಹೂತು ಬೆಂಕಿ ಹಚ್ಚಿದ್ದಾನೆ.
ಸೆಪ್ಟೆಂಬರ್ 9 ರಂದು ರಾತ್ರಿ ಪಕ್ಕದ ಹೊಲದಲ್ಲಿ ಏನೋ ಕೆಲಸ ಇದೆಯೆಂದು ಹೇಳಿ ಮಗಳನ್ನು ಕರೆದೊಯ್ದು ಕೃತ್ಯ ಎಸಗಿದ್ದಾನೆ. ಮನೆಗೆ ಮರಳಿದ ನಂತರ, ಮಗಳನ್ನು ಪಾಣಿಪತ್ನಲ್ಲಿ ತನ್ನ ಸಹೋದರನಲ್ಲಿ ಬಿಟ್ಟು ಬಂದಿರುವುದಾಗಿ ಪ್ರಮೋದ್ ಮನೆಯಲ್ಲಿ ತಿಳಿಸಿದ್ದ. ಆದರೆ, ಶುಕ್ರವಾರ ರಾತ್ರಿ ಹೊಲದಲ್ಲಿ ಶವ ಸುಟ್ಟು ಹಾಕಿರುವ ಬಗ್ಗೆ ಸ್ಥಳೀಯರು ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಸ್ಥಳದಲ್ಲಿದ್ದ ಮೂಳೆಗಳನ್ನು ಸಂಗ್ರಹಿಸಿದ್ದು ಪ್ರಮೋದ್ ಕುಮಾರ್ ಬಗ್ಗೆ ಸಂಶಯ ಉಂಟಾಗಿ ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
In a case of honour killing, a 57-year-old man has been arrested for allegedly strangling his 19-year-old daughter to death over an inter-caste relationship.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm