ಬ್ರೇಕಿಂಗ್ ನ್ಯೂಸ್
12-09-22 10:37 pm Mangalore Correspondent ಕ್ರೈಂ
ಉಳ್ಳಾಲ, ಸೆ.12 : ಸೋಮೇಶ್ವರ ದೇವಸ್ಥಾನದ ರಥಬೀದಿಯ ಕಡಲ ಕಿನಾರೆಯಲ್ಲಿ ಮರಳು ಕಳ್ಳತನ ತಡೆಯಲು ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾವನ್ನು ಧ್ವಂಸಗೈದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಮಡ್ಯಾರು ಸಾಯಿನಗರ ನಿವಾಸಿ ಸೂರಜ್, ಕುರ್ನಾಡು ಮುಡಿಪು ಮದ್ಯನಡ್ಕ ನಿವಾಸಿ ಇಕ್ಬಾಲ್, ತಲಪಾಡಿ ನಿವಾಸಿ ಅಖಿಲ್ ಹಾಗೂ ಸೋಮೇಶ್ವರ ಮೂಡ ನಿವಾಸಿ ಪ್ರಜ್ವಲ್ ಎಂಬ ಆರೋಪಿಗಳನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದು, ಸಿಸಿಟಿವಿ ಪುಡಿಗೈದ ಟಿಪ್ಪರನ್ನ ಜಪ್ತಿಗೊಳಿಸಿದ್ದಾರೆ.

ಸಾರ್ವಜನಿಕ ಆಸ್ತಿಯಾದ ಸಿಸಿಟಿವಿಯನ್ನ ಮರಳು ಕಳ್ಳರು ಧ್ವಂಸಗೈದು ಅಟ್ಟಹಾಸ ಮೆರೆದ ಎರಡು ದಿವಸಗಳ ಬಳಿಕ ಉಳ್ಳಾಲ ವಲಯ ಕಂದಾಯ ನಿರೀಕ್ಷಕ ಮಂಜುನಾಥ್ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಂಜುನಾಥ್ ಅವರ ದೂರು ದಾಖಲಿಸಿಕೊಂಡ ಉಳ್ಳಾಲ ಠಾಣೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ತರಾತುರಿಯಲ್ಲಿ ಬಂಧಿಸಿದ್ದಾರೆ.

ಶನಿವಾರ ನಸುಕಿನ ವೇಳೆ ಸೋಮೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯನ್ನು ಆರೋಪಿಗಳು ಟಿಪ್ಪರ್ ಲಾರಿಯನ್ನ ಹಿಮ್ಮುಖವಾಗಿ ಚಲಾಯಿಸಿ ಧ್ವಂಸಗೊಳಿಸಿದ್ದರು. ಇಷ್ಟೇ ಅಲ್ಲದೆ ಪಕ್ಕದ ಸೋಮೇಶ್ವರ ಮೂಡ ಲೇ ಔಟ್ ನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಮರಳು ಕಳ್ಳತನ ತಡೆಯಲು ಹಾಕಿದ್ದ ತಂತಿ ತಡೆ ಬೇಲಿಯನ್ನೂ ಮರಳು ಕಳ್ಳರು ಧ್ವಂಸಗೈದಿದ್ದರು. ಕಳೆದ ಎರಡು ವರುಷಗಳಿಂದಲೂ ಈ ಭಾಗದಲ್ಲಿ ಮರಳು ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದ್ದರೂ ಉಳ್ಳಾಲ ಪೊಲೀಸರು ಏನೂ ಗೊತ್ತಿಲ್ಲದ ರೀತಿಯಲ್ಲಿ ವರ್ತಿಸುತ್ತಿದ್ದರು. ಇದೀಗ ಸಿಸಿಟಿವಿ ಧ್ವಂಸ ಪ್ರಕರಣ ರಾಜ್ಯ ಮಟ್ಟದ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತು ಅಂಗೈ ಹುಣ್ಣಿಗೆ ಮುಲಾಮು ಹಚ್ಚುವ ಕೆಲಸ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.
Illegal sand miners destroy cc camera and fence at ullal, four arrested and even the truck used for mining sand also has been seized by police in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm