ಬ್ರೇಕಿಂಗ್ ನ್ಯೂಸ್
12-09-22 10:37 pm Mangalore Correspondent ಕ್ರೈಂ
ಉಳ್ಳಾಲ, ಸೆ.12 : ಸೋಮೇಶ್ವರ ದೇವಸ್ಥಾನದ ರಥಬೀದಿಯ ಕಡಲ ಕಿನಾರೆಯಲ್ಲಿ ಮರಳು ಕಳ್ಳತನ ತಡೆಯಲು ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾವನ್ನು ಧ್ವಂಸಗೈದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಮಡ್ಯಾರು ಸಾಯಿನಗರ ನಿವಾಸಿ ಸೂರಜ್, ಕುರ್ನಾಡು ಮುಡಿಪು ಮದ್ಯನಡ್ಕ ನಿವಾಸಿ ಇಕ್ಬಾಲ್, ತಲಪಾಡಿ ನಿವಾಸಿ ಅಖಿಲ್ ಹಾಗೂ ಸೋಮೇಶ್ವರ ಮೂಡ ನಿವಾಸಿ ಪ್ರಜ್ವಲ್ ಎಂಬ ಆರೋಪಿಗಳನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದು, ಸಿಸಿಟಿವಿ ಪುಡಿಗೈದ ಟಿಪ್ಪರನ್ನ ಜಪ್ತಿಗೊಳಿಸಿದ್ದಾರೆ.

ಸಾರ್ವಜನಿಕ ಆಸ್ತಿಯಾದ ಸಿಸಿಟಿವಿಯನ್ನ ಮರಳು ಕಳ್ಳರು ಧ್ವಂಸಗೈದು ಅಟ್ಟಹಾಸ ಮೆರೆದ ಎರಡು ದಿವಸಗಳ ಬಳಿಕ ಉಳ್ಳಾಲ ವಲಯ ಕಂದಾಯ ನಿರೀಕ್ಷಕ ಮಂಜುನಾಥ್ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಂಜುನಾಥ್ ಅವರ ದೂರು ದಾಖಲಿಸಿಕೊಂಡ ಉಳ್ಳಾಲ ಠಾಣೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ತರಾತುರಿಯಲ್ಲಿ ಬಂಧಿಸಿದ್ದಾರೆ.

ಶನಿವಾರ ನಸುಕಿನ ವೇಳೆ ಸೋಮೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯನ್ನು ಆರೋಪಿಗಳು ಟಿಪ್ಪರ್ ಲಾರಿಯನ್ನ ಹಿಮ್ಮುಖವಾಗಿ ಚಲಾಯಿಸಿ ಧ್ವಂಸಗೊಳಿಸಿದ್ದರು. ಇಷ್ಟೇ ಅಲ್ಲದೆ ಪಕ್ಕದ ಸೋಮೇಶ್ವರ ಮೂಡ ಲೇ ಔಟ್ ನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಮರಳು ಕಳ್ಳತನ ತಡೆಯಲು ಹಾಕಿದ್ದ ತಂತಿ ತಡೆ ಬೇಲಿಯನ್ನೂ ಮರಳು ಕಳ್ಳರು ಧ್ವಂಸಗೈದಿದ್ದರು. ಕಳೆದ ಎರಡು ವರುಷಗಳಿಂದಲೂ ಈ ಭಾಗದಲ್ಲಿ ಮರಳು ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದ್ದರೂ ಉಳ್ಳಾಲ ಪೊಲೀಸರು ಏನೂ ಗೊತ್ತಿಲ್ಲದ ರೀತಿಯಲ್ಲಿ ವರ್ತಿಸುತ್ತಿದ್ದರು. ಇದೀಗ ಸಿಸಿಟಿವಿ ಧ್ವಂಸ ಪ್ರಕರಣ ರಾಜ್ಯ ಮಟ್ಟದ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತು ಅಂಗೈ ಹುಣ್ಣಿಗೆ ಮುಲಾಮು ಹಚ್ಚುವ ಕೆಲಸ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.
Illegal sand miners destroy cc camera and fence at ullal, four arrested and even the truck used for mining sand also has been seized by police in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm