ಬ್ರೇಕಿಂಗ್ ನ್ಯೂಸ್
14-09-22 09:43 pm Mangalore Correspondent ಕ್ರೈಂ
ಬಂಟ್ವಾಳ, ಸೆ.14: ಕುಡಿದ ಮತ್ತಿನಲ್ಲಿ ತಮ್ಮನೇ ಅಣ್ಣನನ್ನು ಹೊಡೆದು ಕೊಲೆಗೈದ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ವಿಟ್ಲಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ.
ಗಣೇಶ್ ಬಂಗೇರ (54) ಎಂಬವರು ಕೊಲೆಯಾದವರು. ತಾಯಿ ಕಮಲಾ ಅವರ ಜೊತೆ ಗಣೇಶ್ ಮತ್ತು ಅವರ ತಮ್ಮ ಪದ್ಮನಾಭ ವಾಸವಿದ್ದರು. ಆಸ್ತಿ ವಿಚಾರದಲ್ಲಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಇತ್ತೀಚೆಗೆ ಜಗಳದ ವಿಚಾರದಲ್ಲಿ ವಿಟ್ಲ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಪ್ರತಿ ಬಾರಿ ತಮ್ಮ ಪದ್ಮನಾಭ ಬಂಗೇರ ಹಲ್ಲೆ ನಡೆಸುತ್ತಿದ್ದರು ಎನ್ನಲಾಗಿದೆ. ಒಂದೆರಡು ಬಾರಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

ಮಂಗಳವಾರ ರಾತ್ರಿ ಮಲಗಿದ್ದ ಗಣೇಶ್ ಬಂಗೇರ ಅವರನ್ನು ತಮ್ಮನೇ ತಲೆಗೆ ಹೊಡೆದು ಕೊಲೆ ಮಾಡಿದ್ದು, ಆನಂತರ ಏನೂ ಆಗಿರದಂತೆ ಮಲಗಿದ್ದ. ಬೆಳಗ್ಗೆ ತಾಯಿ ಹತ್ತಿರ ಬಂದು ಕರೆದಾಗ, ಮಗ ಏಳದೇ ಇರುವುದನ್ನು ಕಂಡು ಮಗಳಿಗೆ ಫೋನ್ ಮಾಡಿ ತಿಳಿಸಿದ್ದರು. ಮಗಳು, ಇತರ ಸಂಬಂಧಿಕರು ಬಂದು ನೋಡಿದಾಗ ಗಣೇಶ್ ಮಲಗಿದಲ್ಲೇ ಸಾವನ್ನಪ್ಪಿದ್ದರು. ಯಾವುದೋ ಆಯುಧದಿಂದ ಹೊಡೆದು ಕೊಲೆಗೈದಿದ್ದಾಗಿ ಮಗಳು ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಗಣೇಶ್ ಬಂಗೇರ ಅವರನ್ನು ತಲೆ, ಎದೆಯ ಭಾಗಕ್ಕೆ ಹೊಡೆದು ಕೊಲೆಗೈದು ರಕ್ತವನ್ನು ಒರೆಸಿ ಮಂಚದಲ್ಲಿ ಮಲಗಿಸಲಾಗಿತ್ತು ಎಂದು ದೂರಲಾಗಿದೆ.
ಆರೋಪಿ ಪದ್ಮನಾಭ(47)ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ – ತಮ್ಮಂದಿರಿಗೆ ಮದುವೆಯಾಗಿದ್ದು, ಇಬ್ಬರ ಪತ್ನಿಯರು ಕೂಡ ಮನೆ ಬಿಟ್ಟು ಹೋಗಿದ್ದರು. ಆನಂತರ ಕುಡಿದು ಬಂದು ಗಲಾಟೆ ನಡೆಸುತ್ತಿದ್ದು, ಇದೀಗ ತಮ್ಮನೇ ಅಣ್ಣನನ್ನು ಕೊಲೆಗೈದು ಜೈಲು ಸೇರಿದ್ದಾನೆ.
A man has reportedly killed his elder brother at Kodange Banari, Padnur village, Vittal police station limits. The police have arrested the suspect.Ganesh Bangera (54) is the victim of murder. His younger brother Padmanabha Bangera (49) is the accused. Police said that the incident occurred between 8 PM on Tuesday and 9.30 AM on Wednesday, September 14.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am