ಬ್ರೇಕಿಂಗ್ ನ್ಯೂಸ್
14-09-22 09:43 pm Mangalore Correspondent ಕ್ರೈಂ
ಬಂಟ್ವಾಳ, ಸೆ.14: ಕುಡಿದ ಮತ್ತಿನಲ್ಲಿ ತಮ್ಮನೇ ಅಣ್ಣನನ್ನು ಹೊಡೆದು ಕೊಲೆಗೈದ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ವಿಟ್ಲಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ.
ಗಣೇಶ್ ಬಂಗೇರ (54) ಎಂಬವರು ಕೊಲೆಯಾದವರು. ತಾಯಿ ಕಮಲಾ ಅವರ ಜೊತೆ ಗಣೇಶ್ ಮತ್ತು ಅವರ ತಮ್ಮ ಪದ್ಮನಾಭ ವಾಸವಿದ್ದರು. ಆಸ್ತಿ ವಿಚಾರದಲ್ಲಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಇತ್ತೀಚೆಗೆ ಜಗಳದ ವಿಚಾರದಲ್ಲಿ ವಿಟ್ಲ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಪ್ರತಿ ಬಾರಿ ತಮ್ಮ ಪದ್ಮನಾಭ ಬಂಗೇರ ಹಲ್ಲೆ ನಡೆಸುತ್ತಿದ್ದರು ಎನ್ನಲಾಗಿದೆ. ಒಂದೆರಡು ಬಾರಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
ಮಂಗಳವಾರ ರಾತ್ರಿ ಮಲಗಿದ್ದ ಗಣೇಶ್ ಬಂಗೇರ ಅವರನ್ನು ತಮ್ಮನೇ ತಲೆಗೆ ಹೊಡೆದು ಕೊಲೆ ಮಾಡಿದ್ದು, ಆನಂತರ ಏನೂ ಆಗಿರದಂತೆ ಮಲಗಿದ್ದ. ಬೆಳಗ್ಗೆ ತಾಯಿ ಹತ್ತಿರ ಬಂದು ಕರೆದಾಗ, ಮಗ ಏಳದೇ ಇರುವುದನ್ನು ಕಂಡು ಮಗಳಿಗೆ ಫೋನ್ ಮಾಡಿ ತಿಳಿಸಿದ್ದರು. ಮಗಳು, ಇತರ ಸಂಬಂಧಿಕರು ಬಂದು ನೋಡಿದಾಗ ಗಣೇಶ್ ಮಲಗಿದಲ್ಲೇ ಸಾವನ್ನಪ್ಪಿದ್ದರು. ಯಾವುದೋ ಆಯುಧದಿಂದ ಹೊಡೆದು ಕೊಲೆಗೈದಿದ್ದಾಗಿ ಮಗಳು ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಗಣೇಶ್ ಬಂಗೇರ ಅವರನ್ನು ತಲೆ, ಎದೆಯ ಭಾಗಕ್ಕೆ ಹೊಡೆದು ಕೊಲೆಗೈದು ರಕ್ತವನ್ನು ಒರೆಸಿ ಮಂಚದಲ್ಲಿ ಮಲಗಿಸಲಾಗಿತ್ತು ಎಂದು ದೂರಲಾಗಿದೆ.
ಆರೋಪಿ ಪದ್ಮನಾಭ(47)ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ – ತಮ್ಮಂದಿರಿಗೆ ಮದುವೆಯಾಗಿದ್ದು, ಇಬ್ಬರ ಪತ್ನಿಯರು ಕೂಡ ಮನೆ ಬಿಟ್ಟು ಹೋಗಿದ್ದರು. ಆನಂತರ ಕುಡಿದು ಬಂದು ಗಲಾಟೆ ನಡೆಸುತ್ತಿದ್ದು, ಇದೀಗ ತಮ್ಮನೇ ಅಣ್ಣನನ್ನು ಕೊಲೆಗೈದು ಜೈಲು ಸೇರಿದ್ದಾನೆ.
A man has reportedly killed his elder brother at Kodange Banari, Padnur village, Vittal police station limits. The police have arrested the suspect.Ganesh Bangera (54) is the victim of murder. His younger brother Padmanabha Bangera (49) is the accused. Police said that the incident occurred between 8 PM on Tuesday and 9.30 AM on Wednesday, September 14.
29-07-25 01:31 pm
Bangalore Correspondent
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
29-07-25 09:56 pm
Mangalore Correspondent
Dharmasthala case, SIT Begins Excavation, Upd...
29-07-25 02:20 pm
Dharmasthala Burial Case, 13 Suspected Grave...
28-07-25 10:41 pm
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
29-07-25 08:54 pm
HK News Desk
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm
ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆಲು...
28-07-25 11:20 pm
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm