ಬ್ರೇಕಿಂಗ್ ನ್ಯೂಸ್
14-09-22 09:43 pm Mangalore Correspondent ಕ್ರೈಂ
ಬಂಟ್ವಾಳ, ಸೆ.14: ಕುಡಿದ ಮತ್ತಿನಲ್ಲಿ ತಮ್ಮನೇ ಅಣ್ಣನನ್ನು ಹೊಡೆದು ಕೊಲೆಗೈದ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ವಿಟ್ಲಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ.
ಗಣೇಶ್ ಬಂಗೇರ (54) ಎಂಬವರು ಕೊಲೆಯಾದವರು. ತಾಯಿ ಕಮಲಾ ಅವರ ಜೊತೆ ಗಣೇಶ್ ಮತ್ತು ಅವರ ತಮ್ಮ ಪದ್ಮನಾಭ ವಾಸವಿದ್ದರು. ಆಸ್ತಿ ವಿಚಾರದಲ್ಲಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಇತ್ತೀಚೆಗೆ ಜಗಳದ ವಿಚಾರದಲ್ಲಿ ವಿಟ್ಲ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಪ್ರತಿ ಬಾರಿ ತಮ್ಮ ಪದ್ಮನಾಭ ಬಂಗೇರ ಹಲ್ಲೆ ನಡೆಸುತ್ತಿದ್ದರು ಎನ್ನಲಾಗಿದೆ. ಒಂದೆರಡು ಬಾರಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
ಮಂಗಳವಾರ ರಾತ್ರಿ ಮಲಗಿದ್ದ ಗಣೇಶ್ ಬಂಗೇರ ಅವರನ್ನು ತಮ್ಮನೇ ತಲೆಗೆ ಹೊಡೆದು ಕೊಲೆ ಮಾಡಿದ್ದು, ಆನಂತರ ಏನೂ ಆಗಿರದಂತೆ ಮಲಗಿದ್ದ. ಬೆಳಗ್ಗೆ ತಾಯಿ ಹತ್ತಿರ ಬಂದು ಕರೆದಾಗ, ಮಗ ಏಳದೇ ಇರುವುದನ್ನು ಕಂಡು ಮಗಳಿಗೆ ಫೋನ್ ಮಾಡಿ ತಿಳಿಸಿದ್ದರು. ಮಗಳು, ಇತರ ಸಂಬಂಧಿಕರು ಬಂದು ನೋಡಿದಾಗ ಗಣೇಶ್ ಮಲಗಿದಲ್ಲೇ ಸಾವನ್ನಪ್ಪಿದ್ದರು. ಯಾವುದೋ ಆಯುಧದಿಂದ ಹೊಡೆದು ಕೊಲೆಗೈದಿದ್ದಾಗಿ ಮಗಳು ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಗಣೇಶ್ ಬಂಗೇರ ಅವರನ್ನು ತಲೆ, ಎದೆಯ ಭಾಗಕ್ಕೆ ಹೊಡೆದು ಕೊಲೆಗೈದು ರಕ್ತವನ್ನು ಒರೆಸಿ ಮಂಚದಲ್ಲಿ ಮಲಗಿಸಲಾಗಿತ್ತು ಎಂದು ದೂರಲಾಗಿದೆ.
ಆರೋಪಿ ಪದ್ಮನಾಭ(47)ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ – ತಮ್ಮಂದಿರಿಗೆ ಮದುವೆಯಾಗಿದ್ದು, ಇಬ್ಬರ ಪತ್ನಿಯರು ಕೂಡ ಮನೆ ಬಿಟ್ಟು ಹೋಗಿದ್ದರು. ಆನಂತರ ಕುಡಿದು ಬಂದು ಗಲಾಟೆ ನಡೆಸುತ್ತಿದ್ದು, ಇದೀಗ ತಮ್ಮನೇ ಅಣ್ಣನನ್ನು ಕೊಲೆಗೈದು ಜೈಲು ಸೇರಿದ್ದಾನೆ.
A man has reportedly killed his elder brother at Kodange Banari, Padnur village, Vittal police station limits. The police have arrested the suspect.Ganesh Bangera (54) is the victim of murder. His younger brother Padmanabha Bangera (49) is the accused. Police said that the incident occurred between 8 PM on Tuesday and 9.30 AM on Wednesday, September 14.
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm