ಬ್ರೇಕಿಂಗ್ ನ್ಯೂಸ್
14-09-22 09:43 pm Mangalore Correspondent ಕ್ರೈಂ
ಬಂಟ್ವಾಳ, ಸೆ.14: ಕುಡಿದ ಮತ್ತಿನಲ್ಲಿ ತಮ್ಮನೇ ಅಣ್ಣನನ್ನು ಹೊಡೆದು ಕೊಲೆಗೈದ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ವಿಟ್ಲಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ.
ಗಣೇಶ್ ಬಂಗೇರ (54) ಎಂಬವರು ಕೊಲೆಯಾದವರು. ತಾಯಿ ಕಮಲಾ ಅವರ ಜೊತೆ ಗಣೇಶ್ ಮತ್ತು ಅವರ ತಮ್ಮ ಪದ್ಮನಾಭ ವಾಸವಿದ್ದರು. ಆಸ್ತಿ ವಿಚಾರದಲ್ಲಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಇತ್ತೀಚೆಗೆ ಜಗಳದ ವಿಚಾರದಲ್ಲಿ ವಿಟ್ಲ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಪ್ರತಿ ಬಾರಿ ತಮ್ಮ ಪದ್ಮನಾಭ ಬಂಗೇರ ಹಲ್ಲೆ ನಡೆಸುತ್ತಿದ್ದರು ಎನ್ನಲಾಗಿದೆ. ಒಂದೆರಡು ಬಾರಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

ಮಂಗಳವಾರ ರಾತ್ರಿ ಮಲಗಿದ್ದ ಗಣೇಶ್ ಬಂಗೇರ ಅವರನ್ನು ತಮ್ಮನೇ ತಲೆಗೆ ಹೊಡೆದು ಕೊಲೆ ಮಾಡಿದ್ದು, ಆನಂತರ ಏನೂ ಆಗಿರದಂತೆ ಮಲಗಿದ್ದ. ಬೆಳಗ್ಗೆ ತಾಯಿ ಹತ್ತಿರ ಬಂದು ಕರೆದಾಗ, ಮಗ ಏಳದೇ ಇರುವುದನ್ನು ಕಂಡು ಮಗಳಿಗೆ ಫೋನ್ ಮಾಡಿ ತಿಳಿಸಿದ್ದರು. ಮಗಳು, ಇತರ ಸಂಬಂಧಿಕರು ಬಂದು ನೋಡಿದಾಗ ಗಣೇಶ್ ಮಲಗಿದಲ್ಲೇ ಸಾವನ್ನಪ್ಪಿದ್ದರು. ಯಾವುದೋ ಆಯುಧದಿಂದ ಹೊಡೆದು ಕೊಲೆಗೈದಿದ್ದಾಗಿ ಮಗಳು ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಗಣೇಶ್ ಬಂಗೇರ ಅವರನ್ನು ತಲೆ, ಎದೆಯ ಭಾಗಕ್ಕೆ ಹೊಡೆದು ಕೊಲೆಗೈದು ರಕ್ತವನ್ನು ಒರೆಸಿ ಮಂಚದಲ್ಲಿ ಮಲಗಿಸಲಾಗಿತ್ತು ಎಂದು ದೂರಲಾಗಿದೆ.
ಆರೋಪಿ ಪದ್ಮನಾಭ(47)ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ – ತಮ್ಮಂದಿರಿಗೆ ಮದುವೆಯಾಗಿದ್ದು, ಇಬ್ಬರ ಪತ್ನಿಯರು ಕೂಡ ಮನೆ ಬಿಟ್ಟು ಹೋಗಿದ್ದರು. ಆನಂತರ ಕುಡಿದು ಬಂದು ಗಲಾಟೆ ನಡೆಸುತ್ತಿದ್ದು, ಇದೀಗ ತಮ್ಮನೇ ಅಣ್ಣನನ್ನು ಕೊಲೆಗೈದು ಜೈಲು ಸೇರಿದ್ದಾನೆ.
A man has reportedly killed his elder brother at Kodange Banari, Padnur village, Vittal police station limits. The police have arrested the suspect.Ganesh Bangera (54) is the victim of murder. His younger brother Padmanabha Bangera (49) is the accused. Police said that the incident occurred between 8 PM on Tuesday and 9.30 AM on Wednesday, September 14.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm