ಬ್ರೇಕಿಂಗ್ ನ್ಯೂಸ್
15-09-22 12:08 pm HK Desk ಕ್ರೈಂ
ಲಕ್ನೋ, ಸೆ.15: ಇಬ್ಬರು ಅಪ್ರಾಪ್ತ ದಲಿತ ಸಹೋದರಿಯರನ್ನು ಅತ್ಯಾಚಾರಗೈದು ಕತ್ತು ಹಿಸುಕಿ ಕೊಲೆಗೈದಿದ್ದಲ್ಲದೆ, ಶವಗಳನ್ನು ಮರಕ್ಕೆ ನೇತು ಹಾಕಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆ ಮತ್ತೆ ದೇಶದ ಗಮನ ಸೆಳೆದಿದೆ.
ಬಾಲಕಿಯರನ್ನು ಅಪಹರಿಸಿ, ಅತ್ಯಾಚಾರ ಎಸಗಿ, ನಂತರ ಕೊಲೆ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಸ್ಥಳೀಯರು ಮತ್ತು ಸಂತ್ರಸ್ತರ ಸಂಬಂಧಿಕರು ಶವ ಮುಂದಿಟ್ಟು ರಸ್ತೆ ತಡೆದು ತನಿಖೆಗೆ ಒತ್ತಾಯಿಸಿದ್ದಾರೆ. 17 ಮತ್ತು 15 ವರ್ಷದ ಇಬ್ಬರು ದಲಿತ ಸಹೋದರಿಯರ ಶವ ಪತ್ತೆಯಾದ ಕೆಲವೇ ಗಂಟೆಗಳಲ್ಲಿ ಆರು ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯರ ಕತ್ತು ಹಿಸುಕಿ ನಾಲ್ವರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರನ್ನು ಸುಹೇಲ್, ಜುನೈದ್, ಹಫೀಜುಲ್ ರೆಹಮಾನ್, ಕರಿಮುದ್ದೀನ್ ಮತ್ತು ಆರಿಫ್ ಎಂದು ಪೊಲೀಸರು ಗುರುತಿಸಿದ್ದಾರೆ. ಆರೋಪಿಗಳಿಗೆ ಬಾಲಕಿಯರನ್ನು ಪರಿಚಯಿಸಿದ ಆರನೇ ವ್ಯಕ್ತಿ ಚೋಟು ಎಂಬಾತನನ್ನೂ ಬಂಧಿಸಲಾಗಿದೆ.
ಬಾಲಕಿಯರನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಸುಹೇಲ್, ಜುನೈದ್ ಮತ್ತು ಹಫೀಜುಲ್ ರೆಹಮಾನ್ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ, ಬಾಲಕಿಯರು ತಮ್ಮನ್ನು ಮದುವೆಯಾಗುವಂತೆ ಒತ್ತಾಯ ಮಾಡಿದ್ದಾರೆ. ಅದಕ್ಕೊಪ್ಪದೆ, ಕತ್ತು ಹಿಸುಕಿ ಸಾಯಿಸಿದ್ದಾರೆ ಎನ್ನಲಾಗುತ್ತಿದೆ. ಇಬ್ಬರು ಬಂಧಿತರು ಬಾಲಕಿಯರಿಗೆ ಪರಿಚಿತರೇ ಆಗಿದ್ದಾರೆ. ಆರೋಪಿಗಳ ಬೈಕ್ನಲ್ಲಿಯೇ ಬಾಲಕಿಯರು ತೆರಳಿದ್ದಾರೆ. ಆರೋಪಿಗಳಿಗೆ ಮದುವೆಯಾಗುವಂತೆ ಒತ್ತಾಯಿಸಿದಾಗ ಆರೋಪಿಗಳು ಕತ್ತುಹಿಸುಕಿ ಕೊಲೆಗೈದಿದ್ದಾರೆ.

ಅವರು ಧರಿಸಿದ್ದ ದುಪಟ್ಟಾದಿಂದಲೇ ಕತ್ತು ಹಿಸುಕಿ ಕೊಲ್ಲಲಾಗಿದೆ. ನಂತರ ಕರೀಮುದ್ದೀನ್ ಮತ್ತು ಆರೀಫ್ ಶವಗಳನ್ನು ಮುಚ್ಚಿಡಲು ಸಹಾಯ ಮಾಡಿದ್ದಾರೆ. ಬಳಿಕ ಆತ್ಮಹತ್ಯೆ ಎಂದು ತೋರಿಸಲು ಶವಗಳನ್ನು ಮರಕ್ಕೆ ನೇಣು ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In yet another nerve-racking incident from Uttar Pradesh’s Lakhimpur Kheri, two Dalit teenage sisters were found hanging from a tree in a sugarcane field in Lalpur Majra Tamoli Purva village under the Nighasan police station on Wednesday evening, police said. So far, four accused in the matter have been arrested and investigation is underway, added police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm