ಬ್ರೇಕಿಂಗ್ ನ್ಯೂಸ್
15-09-22 12:08 pm HK Desk ಕ್ರೈಂ
ಲಕ್ನೋ, ಸೆ.15: ಇಬ್ಬರು ಅಪ್ರಾಪ್ತ ದಲಿತ ಸಹೋದರಿಯರನ್ನು ಅತ್ಯಾಚಾರಗೈದು ಕತ್ತು ಹಿಸುಕಿ ಕೊಲೆಗೈದಿದ್ದಲ್ಲದೆ, ಶವಗಳನ್ನು ಮರಕ್ಕೆ ನೇತು ಹಾಕಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆ ಮತ್ತೆ ದೇಶದ ಗಮನ ಸೆಳೆದಿದೆ.
ಬಾಲಕಿಯರನ್ನು ಅಪಹರಿಸಿ, ಅತ್ಯಾಚಾರ ಎಸಗಿ, ನಂತರ ಕೊಲೆ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಸ್ಥಳೀಯರು ಮತ್ತು ಸಂತ್ರಸ್ತರ ಸಂಬಂಧಿಕರು ಶವ ಮುಂದಿಟ್ಟು ರಸ್ತೆ ತಡೆದು ತನಿಖೆಗೆ ಒತ್ತಾಯಿಸಿದ್ದಾರೆ. 17 ಮತ್ತು 15 ವರ್ಷದ ಇಬ್ಬರು ದಲಿತ ಸಹೋದರಿಯರ ಶವ ಪತ್ತೆಯಾದ ಕೆಲವೇ ಗಂಟೆಗಳಲ್ಲಿ ಆರು ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯರ ಕತ್ತು ಹಿಸುಕಿ ನಾಲ್ವರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರನ್ನು ಸುಹೇಲ್, ಜುನೈದ್, ಹಫೀಜುಲ್ ರೆಹಮಾನ್, ಕರಿಮುದ್ದೀನ್ ಮತ್ತು ಆರಿಫ್ ಎಂದು ಪೊಲೀಸರು ಗುರುತಿಸಿದ್ದಾರೆ. ಆರೋಪಿಗಳಿಗೆ ಬಾಲಕಿಯರನ್ನು ಪರಿಚಯಿಸಿದ ಆರನೇ ವ್ಯಕ್ತಿ ಚೋಟು ಎಂಬಾತನನ್ನೂ ಬಂಧಿಸಲಾಗಿದೆ.
ಬಾಲಕಿಯರನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಸುಹೇಲ್, ಜುನೈದ್ ಮತ್ತು ಹಫೀಜುಲ್ ರೆಹಮಾನ್ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ, ಬಾಲಕಿಯರು ತಮ್ಮನ್ನು ಮದುವೆಯಾಗುವಂತೆ ಒತ್ತಾಯ ಮಾಡಿದ್ದಾರೆ. ಅದಕ್ಕೊಪ್ಪದೆ, ಕತ್ತು ಹಿಸುಕಿ ಸಾಯಿಸಿದ್ದಾರೆ ಎನ್ನಲಾಗುತ್ತಿದೆ. ಇಬ್ಬರು ಬಂಧಿತರು ಬಾಲಕಿಯರಿಗೆ ಪರಿಚಿತರೇ ಆಗಿದ್ದಾರೆ. ಆರೋಪಿಗಳ ಬೈಕ್ನಲ್ಲಿಯೇ ಬಾಲಕಿಯರು ತೆರಳಿದ್ದಾರೆ. ಆರೋಪಿಗಳಿಗೆ ಮದುವೆಯಾಗುವಂತೆ ಒತ್ತಾಯಿಸಿದಾಗ ಆರೋಪಿಗಳು ಕತ್ತುಹಿಸುಕಿ ಕೊಲೆಗೈದಿದ್ದಾರೆ.

ಅವರು ಧರಿಸಿದ್ದ ದುಪಟ್ಟಾದಿಂದಲೇ ಕತ್ತು ಹಿಸುಕಿ ಕೊಲ್ಲಲಾಗಿದೆ. ನಂತರ ಕರೀಮುದ್ದೀನ್ ಮತ್ತು ಆರೀಫ್ ಶವಗಳನ್ನು ಮುಚ್ಚಿಡಲು ಸಹಾಯ ಮಾಡಿದ್ದಾರೆ. ಬಳಿಕ ಆತ್ಮಹತ್ಯೆ ಎಂದು ತೋರಿಸಲು ಶವಗಳನ್ನು ಮರಕ್ಕೆ ನೇಣು ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In yet another nerve-racking incident from Uttar Pradesh’s Lakhimpur Kheri, two Dalit teenage sisters were found hanging from a tree in a sugarcane field in Lalpur Majra Tamoli Purva village under the Nighasan police station on Wednesday evening, police said. So far, four accused in the matter have been arrested and investigation is underway, added police.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm