ಬ್ರೇಕಿಂಗ್ ನ್ಯೂಸ್
15-09-22 12:08 pm HK Desk ಕ್ರೈಂ
ಲಕ್ನೋ, ಸೆ.15: ಇಬ್ಬರು ಅಪ್ರಾಪ್ತ ದಲಿತ ಸಹೋದರಿಯರನ್ನು ಅತ್ಯಾಚಾರಗೈದು ಕತ್ತು ಹಿಸುಕಿ ಕೊಲೆಗೈದಿದ್ದಲ್ಲದೆ, ಶವಗಳನ್ನು ಮರಕ್ಕೆ ನೇತು ಹಾಕಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆ ಮತ್ತೆ ದೇಶದ ಗಮನ ಸೆಳೆದಿದೆ.
ಬಾಲಕಿಯರನ್ನು ಅಪಹರಿಸಿ, ಅತ್ಯಾಚಾರ ಎಸಗಿ, ನಂತರ ಕೊಲೆ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಸ್ಥಳೀಯರು ಮತ್ತು ಸಂತ್ರಸ್ತರ ಸಂಬಂಧಿಕರು ಶವ ಮುಂದಿಟ್ಟು ರಸ್ತೆ ತಡೆದು ತನಿಖೆಗೆ ಒತ್ತಾಯಿಸಿದ್ದಾರೆ. 17 ಮತ್ತು 15 ವರ್ಷದ ಇಬ್ಬರು ದಲಿತ ಸಹೋದರಿಯರ ಶವ ಪತ್ತೆಯಾದ ಕೆಲವೇ ಗಂಟೆಗಳಲ್ಲಿ ಆರು ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯರ ಕತ್ತು ಹಿಸುಕಿ ನಾಲ್ವರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರನ್ನು ಸುಹೇಲ್, ಜುನೈದ್, ಹಫೀಜುಲ್ ರೆಹಮಾನ್, ಕರಿಮುದ್ದೀನ್ ಮತ್ತು ಆರಿಫ್ ಎಂದು ಪೊಲೀಸರು ಗುರುತಿಸಿದ್ದಾರೆ. ಆರೋಪಿಗಳಿಗೆ ಬಾಲಕಿಯರನ್ನು ಪರಿಚಯಿಸಿದ ಆರನೇ ವ್ಯಕ್ತಿ ಚೋಟು ಎಂಬಾತನನ್ನೂ ಬಂಧಿಸಲಾಗಿದೆ.
ಬಾಲಕಿಯರನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಸುಹೇಲ್, ಜುನೈದ್ ಮತ್ತು ಹಫೀಜುಲ್ ರೆಹಮಾನ್ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ, ಬಾಲಕಿಯರು ತಮ್ಮನ್ನು ಮದುವೆಯಾಗುವಂತೆ ಒತ್ತಾಯ ಮಾಡಿದ್ದಾರೆ. ಅದಕ್ಕೊಪ್ಪದೆ, ಕತ್ತು ಹಿಸುಕಿ ಸಾಯಿಸಿದ್ದಾರೆ ಎನ್ನಲಾಗುತ್ತಿದೆ. ಇಬ್ಬರು ಬಂಧಿತರು ಬಾಲಕಿಯರಿಗೆ ಪರಿಚಿತರೇ ಆಗಿದ್ದಾರೆ. ಆರೋಪಿಗಳ ಬೈಕ್ನಲ್ಲಿಯೇ ಬಾಲಕಿಯರು ತೆರಳಿದ್ದಾರೆ. ಆರೋಪಿಗಳಿಗೆ ಮದುವೆಯಾಗುವಂತೆ ಒತ್ತಾಯಿಸಿದಾಗ ಆರೋಪಿಗಳು ಕತ್ತುಹಿಸುಕಿ ಕೊಲೆಗೈದಿದ್ದಾರೆ.

ಅವರು ಧರಿಸಿದ್ದ ದುಪಟ್ಟಾದಿಂದಲೇ ಕತ್ತು ಹಿಸುಕಿ ಕೊಲ್ಲಲಾಗಿದೆ. ನಂತರ ಕರೀಮುದ್ದೀನ್ ಮತ್ತು ಆರೀಫ್ ಶವಗಳನ್ನು ಮುಚ್ಚಿಡಲು ಸಹಾಯ ಮಾಡಿದ್ದಾರೆ. ಬಳಿಕ ಆತ್ಮಹತ್ಯೆ ಎಂದು ತೋರಿಸಲು ಶವಗಳನ್ನು ಮರಕ್ಕೆ ನೇಣು ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In yet another nerve-racking incident from Uttar Pradesh’s Lakhimpur Kheri, two Dalit teenage sisters were found hanging from a tree in a sugarcane field in Lalpur Majra Tamoli Purva village under the Nighasan police station on Wednesday evening, police said. So far, four accused in the matter have been arrested and investigation is underway, added police.
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm