ಬ್ರೇಕಿಂಗ್ ನ್ಯೂಸ್
15-09-22 12:08 pm HK Desk ಕ್ರೈಂ
ಲಕ್ನೋ, ಸೆ.15: ಇಬ್ಬರು ಅಪ್ರಾಪ್ತ ದಲಿತ ಸಹೋದರಿಯರನ್ನು ಅತ್ಯಾಚಾರಗೈದು ಕತ್ತು ಹಿಸುಕಿ ಕೊಲೆಗೈದಿದ್ದಲ್ಲದೆ, ಶವಗಳನ್ನು ಮರಕ್ಕೆ ನೇತು ಹಾಕಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆ ಮತ್ತೆ ದೇಶದ ಗಮನ ಸೆಳೆದಿದೆ.
ಬಾಲಕಿಯರನ್ನು ಅಪಹರಿಸಿ, ಅತ್ಯಾಚಾರ ಎಸಗಿ, ನಂತರ ಕೊಲೆ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಸ್ಥಳೀಯರು ಮತ್ತು ಸಂತ್ರಸ್ತರ ಸಂಬಂಧಿಕರು ಶವ ಮುಂದಿಟ್ಟು ರಸ್ತೆ ತಡೆದು ತನಿಖೆಗೆ ಒತ್ತಾಯಿಸಿದ್ದಾರೆ. 17 ಮತ್ತು 15 ವರ್ಷದ ಇಬ್ಬರು ದಲಿತ ಸಹೋದರಿಯರ ಶವ ಪತ್ತೆಯಾದ ಕೆಲವೇ ಗಂಟೆಗಳಲ್ಲಿ ಆರು ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯರ ಕತ್ತು ಹಿಸುಕಿ ನಾಲ್ವರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ಸುಹೇಲ್, ಜುನೈದ್, ಹಫೀಜುಲ್ ರೆಹಮಾನ್, ಕರಿಮುದ್ದೀನ್ ಮತ್ತು ಆರಿಫ್ ಎಂದು ಪೊಲೀಸರು ಗುರುತಿಸಿದ್ದಾರೆ. ಆರೋಪಿಗಳಿಗೆ ಬಾಲಕಿಯರನ್ನು ಪರಿಚಯಿಸಿದ ಆರನೇ ವ್ಯಕ್ತಿ ಚೋಟು ಎಂಬಾತನನ್ನೂ ಬಂಧಿಸಲಾಗಿದೆ.
ಬಾಲಕಿಯರನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಸುಹೇಲ್, ಜುನೈದ್ ಮತ್ತು ಹಫೀಜುಲ್ ರೆಹಮಾನ್ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ, ಬಾಲಕಿಯರು ತಮ್ಮನ್ನು ಮದುವೆಯಾಗುವಂತೆ ಒತ್ತಾಯ ಮಾಡಿದ್ದಾರೆ. ಅದಕ್ಕೊಪ್ಪದೆ, ಕತ್ತು ಹಿಸುಕಿ ಸಾಯಿಸಿದ್ದಾರೆ ಎನ್ನಲಾಗುತ್ತಿದೆ. ಇಬ್ಬರು ಬಂಧಿತರು ಬಾಲಕಿಯರಿಗೆ ಪರಿಚಿತರೇ ಆಗಿದ್ದಾರೆ. ಆರೋಪಿಗಳ ಬೈಕ್ನಲ್ಲಿಯೇ ಬಾಲಕಿಯರು ತೆರಳಿದ್ದಾರೆ. ಆರೋಪಿಗಳಿಗೆ ಮದುವೆಯಾಗುವಂತೆ ಒತ್ತಾಯಿಸಿದಾಗ ಆರೋಪಿಗಳು ಕತ್ತುಹಿಸುಕಿ ಕೊಲೆಗೈದಿದ್ದಾರೆ.
ಅವರು ಧರಿಸಿದ್ದ ದುಪಟ್ಟಾದಿಂದಲೇ ಕತ್ತು ಹಿಸುಕಿ ಕೊಲ್ಲಲಾಗಿದೆ. ನಂತರ ಕರೀಮುದ್ದೀನ್ ಮತ್ತು ಆರೀಫ್ ಶವಗಳನ್ನು ಮುಚ್ಚಿಡಲು ಸಹಾಯ ಮಾಡಿದ್ದಾರೆ. ಬಳಿಕ ಆತ್ಮಹತ್ಯೆ ಎಂದು ತೋರಿಸಲು ಶವಗಳನ್ನು ಮರಕ್ಕೆ ನೇಣು ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In yet another nerve-racking incident from Uttar Pradesh’s Lakhimpur Kheri, two Dalit teenage sisters were found hanging from a tree in a sugarcane field in Lalpur Majra Tamoli Purva village under the Nighasan police station on Wednesday evening, police said. So far, four accused in the matter have been arrested and investigation is underway, added police.
28-03-24 11:00 pm
HK News Desk
DK Suresh, Assets : ಡಿಕೆಶಿ ಸೋದರ ಡಿ.ಕೆ.ಸುರೇಶ್...
28-03-24 09:45 pm
Yathindra Siddaramaiah, Amit Shah Gunda, rowd...
28-03-24 09:36 pm
Bangalore NIA arrest, Cafe blast, terror: ರಾಮ...
28-03-24 08:44 pm
Davangere Congress, Shamanur family, Vinay ku...
28-03-24 04:14 pm
28-03-24 10:51 pm
HK News Desk
Arawind Kejriwal, Delhi HC: ಬಂಧಿತ ಕೇಜ್ರಿವಾಲ್...
28-03-24 04:36 pm
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
28-03-24 10:56 pm
Mangalore Correspondent
ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಕ...
28-03-24 07:12 pm
Manjunath Bhandary, KPCC working president: ಕ...
28-03-24 05:20 pm
Fire at seafood factory in Baikampady, Mangal...
28-03-24 04:52 pm
Naxalites in Koojimale, Woman Naxalite, Puttu...
28-03-24 03:25 pm
28-03-24 10:30 pm
Mangalore Correspondent
Udupi murder Nejar, Praveen Chowgule news: ಉಡ...
28-03-24 02:18 pm
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm
Bank vehicle robbery, ATM in Kasaragod: ಕಾಸರಗ...
27-03-24 06:20 pm
CA arrested by Bengalore police, Rs 168 crore...
27-03-24 12:48 pm