ಬ್ರೇಕಿಂಗ್ ನ್ಯೂಸ್
15-09-22 12:55 pm Mangalore Correspondent ಕ್ರೈಂ
ಮಂಗಳೂರು, ಸೆ.15: ಕಾರು ಕಳವು ಪ್ರಕರಣ ನಡೆದು 25 ವರ್ಷಗಳ ಬಳಿಕ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಪಿರಿಯಾಪಟ್ಟಣದ ಆರೇನಹಳ್ಳಿ ನಿವಾಸಿಯಾಗಿದ್ದ ಅಸ್ಲಂ ಪಾಷಾ ಬಂಧಿತನಾಗಿದ್ದು ಈತ 1997ರಲ್ಲಿ ನಡೆದಿದ್ದ ಕಾರು ಕಳವು ಪ್ರಕರಣದಲ್ಲಿ ಆರೋಪಿಯಾಗಿದ್ದ.
ಅಸ್ಲಾಂ ಪಾಷಾ, 1997ರ ನವೆಂಬರ್ 11ರಂದು ಅಂಬಾಸಿಡರ್ ಕಾರು ಕಳವು ಮಾಡಿದ್ದಾನೆ. ಈ ಬಗ್ಗೆ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಆದರೆ ಜಾಮೀನು ಪಡೆದ ಬಳಿಕ 2000 ಫೆಬ್ರವರಿ 8 ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಇದನ್ನು 2015 ರಲ್ಲಿ ಪತ್ತೆಯಾಗದ ಪ್ರಕರಣವೆಂದು ಪೊಲೀಸರು ಘೋಷಿಸಿದ್ದರು.
ಇತ್ತೀಚೆಗೆ, ಆತನ ವಿರುದ್ಧ ಕೋರ್ಟಿನಿಂದ ಎಲ್ ಪಿಸಿ ವಾರೆಂಟ್ ಪಡೆದು ಸೆಪ್ಟೆಂಬರ್ 12ರಂದು ಈತನನ್ನು ಪಿರಿಯಾಪಟ್ಟಣದ ಆರೇನಹಳ್ಳಿಯಲ್ಲಿ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಜೈಲಿಗೆ ಹಾಕಲಾಗಿದೆ. ಆರೋಪಿ ಅಸ್ಲಂ ಪಾಷಾ ವಿರುದ್ಧ ಪಿರಿಯಾಪಟ್ಟಣದ ಬೆಟ್ಟದಪುರ, ಉದಯಪುರ, ಭದ್ರಾವತಿ, ಮಂಡ್ಯ, ಮೈಸೂರು ನಗರ, ಬೆಂಗಳೂರು ನಗರ ಹೀಗೆ ಹಲವಾರು ಠಾಣೆಗಳಲ್ಲಿ ಕಳವು ಪ್ರಕರಣ ದಾಖಲಾಗಿದೆ. ಆರೋಪಿಯು ಮನೆ ಮುಂದೆ ನಿಲ್ಲಿಸಿದ್ದ ಕಾರುಗಳನ್ನು ಕಳವುಗೈದು ಅದರ ಚೇಸ್ ನಂಬರನ್ನು ಜಜ್ಜಿ ಕಾರಿನ ಬಣ್ಣ ಹಾಗೂ ನಂಬರ್ ಪ್ಲೇಟನ್ನು ಬದಲಾಯಿಸಿ ಕಡಿಮೆ ಬೆಲೆಗೆ ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
The city police have arrested a man accused of car theft 25 years after the crime took place. The accused is Aslam alias Aslam Pasha who was wanted in an Ambassador car theft case registered on 11 November 1997. The police have registered a case under IPC section 379.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm