ಬ್ರೇಕಿಂಗ್ ನ್ಯೂಸ್
15-09-22 12:55 pm Mangalore Correspondent ಕ್ರೈಂ
ಮಂಗಳೂರು, ಸೆ.15: ಕಾರು ಕಳವು ಪ್ರಕರಣ ನಡೆದು 25 ವರ್ಷಗಳ ಬಳಿಕ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಪಿರಿಯಾಪಟ್ಟಣದ ಆರೇನಹಳ್ಳಿ ನಿವಾಸಿಯಾಗಿದ್ದ ಅಸ್ಲಂ ಪಾಷಾ ಬಂಧಿತನಾಗಿದ್ದು ಈತ 1997ರಲ್ಲಿ ನಡೆದಿದ್ದ ಕಾರು ಕಳವು ಪ್ರಕರಣದಲ್ಲಿ ಆರೋಪಿಯಾಗಿದ್ದ.
ಅಸ್ಲಾಂ ಪಾಷಾ, 1997ರ ನವೆಂಬರ್ 11ರಂದು ಅಂಬಾಸಿಡರ್ ಕಾರು ಕಳವು ಮಾಡಿದ್ದಾನೆ. ಈ ಬಗ್ಗೆ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಆದರೆ ಜಾಮೀನು ಪಡೆದ ಬಳಿಕ 2000 ಫೆಬ್ರವರಿ 8 ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಇದನ್ನು 2015 ರಲ್ಲಿ ಪತ್ತೆಯಾಗದ ಪ್ರಕರಣವೆಂದು ಪೊಲೀಸರು ಘೋಷಿಸಿದ್ದರು.
ಇತ್ತೀಚೆಗೆ, ಆತನ ವಿರುದ್ಧ ಕೋರ್ಟಿನಿಂದ ಎಲ್ ಪಿಸಿ ವಾರೆಂಟ್ ಪಡೆದು ಸೆಪ್ಟೆಂಬರ್ 12ರಂದು ಈತನನ್ನು ಪಿರಿಯಾಪಟ್ಟಣದ ಆರೇನಹಳ್ಳಿಯಲ್ಲಿ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಜೈಲಿಗೆ ಹಾಕಲಾಗಿದೆ. ಆರೋಪಿ ಅಸ್ಲಂ ಪಾಷಾ ವಿರುದ್ಧ ಪಿರಿಯಾಪಟ್ಟಣದ ಬೆಟ್ಟದಪುರ, ಉದಯಪುರ, ಭದ್ರಾವತಿ, ಮಂಡ್ಯ, ಮೈಸೂರು ನಗರ, ಬೆಂಗಳೂರು ನಗರ ಹೀಗೆ ಹಲವಾರು ಠಾಣೆಗಳಲ್ಲಿ ಕಳವು ಪ್ರಕರಣ ದಾಖಲಾಗಿದೆ. ಆರೋಪಿಯು ಮನೆ ಮುಂದೆ ನಿಲ್ಲಿಸಿದ್ದ ಕಾರುಗಳನ್ನು ಕಳವುಗೈದು ಅದರ ಚೇಸ್ ನಂಬರನ್ನು ಜಜ್ಜಿ ಕಾರಿನ ಬಣ್ಣ ಹಾಗೂ ನಂಬರ್ ಪ್ಲೇಟನ್ನು ಬದಲಾಯಿಸಿ ಕಡಿಮೆ ಬೆಲೆಗೆ ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
The city police have arrested a man accused of car theft 25 years after the crime took place. The accused is Aslam alias Aslam Pasha who was wanted in an Ambassador car theft case registered on 11 November 1997. The police have registered a case under IPC section 379.
29-07-25 01:31 pm
Bangalore Correspondent
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
29-07-25 09:56 pm
Mangalore Correspondent
Dharmasthala case, SIT Begins Excavation, Upd...
29-07-25 02:20 pm
Dharmasthala Burial Case, 13 Suspected Grave...
28-07-25 10:41 pm
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
29-07-25 08:54 pm
HK News Desk
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm
ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆಲು...
28-07-25 11:20 pm
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm