ಬ್ರೇಕಿಂಗ್ ನ್ಯೂಸ್
17-09-22 12:56 pm HK News Desk ಕ್ರೈಂ
ಮೈಸೂರು, ಸೆ.17 : ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳ ಮಾರಾಟ ಪ್ರಕರಣದಲ್ಲಿ ಪೊಲೀಸರು, ಮೈಸೂರು ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧಿಸಿ ದಾಳಿ ನಡೆಸಿದ ಕುವೆಂಪು ನಗರ ಪೊಲೀಸರು, ರಾಮಕೃಷ್ಣ ನಗರದ ಐ ಬ್ಲಾಕ್ ನಲ್ಲಿರುವ ಗೋಲ್ಡನ್ ಬೆಲ್ಸ್ ಸರ್ವೀಸ್ ಅಪಾರ್ಟ್ ಮೆಂಟ್ ನಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದ ಸೀಲ್, ಇ-ಸ್ಟಾಂಪ್ ಪೇಪರ್, ಸ್ಕ್ಯಾನರ್, ಪ್ರಿಂಟರ್ ಗಳನ್ನು ಪತ್ತೆ ಮಾಡಿದ್ದಾರೆ. ಬೆಂಗಳೂರಿನ ಕಟ್ಟಿಗೇನಹಳ್ಳಿ ನಿವಾಸಿ ಮಹಮ್ಮದ್ ನಯೀಮ್, ಮೈಸೂರಿನ ಮೊಹಮ್ಮದ್ ಶಹಭಾಜ್ ಮಲ್ಲಿಕ್ ಹಾಗೂ ಗಾಂಧಿನಗರ ನಿವಾಸಿ ಭಾಸ್ಕರ್ ಬಂಧಿತ ಇತರ ಆರೋಪಿಗಳಾಗಿದ್ದಾರೆ.

ಇದೇ ಆರೋಪಿಗಳು ಶಾಸಕ ರಿಜ್ವಾನ್ ಅರ್ಷದ್ ಅವರ ತಂದೆಗೆ ಮಕ್ಮಲ್ ಟೋಪಿ ಹಾಕಿದ್ದಾರೆ. ನಗರದ ಉದಯಗಿರಿ ಎಂಬಲ್ಲಿನ 80*100 ಅಡಿ ವಿಸ್ತೀರ್ಣದ ನಿವೇಶನದ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನಿಸಿದ್ದಾರೆ. ಮುಡಾಗೆ ಸೇರಿದ ನಿವೇಶನದ ದಾಖಲೆಯನ್ನು ಕಾಂಗ್ರೆಸ್ ಮುಖಂಡ ರಾಜಾರಾಂ ಅಂಡ್ ಟೀಂ ಪೋರ್ಜರಿ ಮಾಡಿರುವುದು ಕಂಡುಬಂದಿದೆ. ಅದಲ್ಲದೆ, ಅದೇ ನಿವೇಶನ ತೋರಿಸಿ ಬ್ಯಾಂಕ್ ನಲ್ಲಿ ಸಾಲ ಪಡೆಯಲು ಯತ್ನಿಸಿದ್ದೂ ಪತ್ತೆಯಾಗಿದೆ. ಈಗಾಗಲೇ ಹಲವು ನಿವೇಶನಗಳ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಲಾಗಿದೆ.

ಪೊಲೀಸರ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳು ಬಹಿರಂಗವಾಗಿದ್ದು ಅಕ್ರಮ ದಾಖಲೆಗಳ ಮೂಲಕ ಆಸ್ತಿಗಳನ್ನ ಮಾರಾಟ ಮಾಡಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಕಾಂಗ್ರೆಸ್ ಮುಖಂಡ ರಾಜಾರಾಂ ವಿರುದ್ಧ ಕೊಲೆ ಆರೋಪದ ಮೇಲೆ ವಿಜಯನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಖಾಸಗಿ ಗನ್ ಮ್ಯಾನ್ ಪಡೆದು ಸಮಾಜದಲ್ಲಿ ಪ್ರತಿಷ್ಠಿತ ವ್ಯಕ್ತಿಯೆಂದು ರಾಜಾರಾಂ ಬಿಲ್ಡ್ ಅಪ್ ನೀಡುತ್ತಿದ್ದ. ಮೈಸೂರು ನಗರದ ಪ್ರಭಾವಿ ಕಾಂಗ್ರೆಸ್ ಮುಖಂಡನಾಗಿರುವ ರಾಜಾರಾಮ್, ಪಕ್ಷ ಸೇರ್ಪಡೆಯಾದ ಒಂದೇ ವರ್ಷಕ್ಕೆ ಕಾಂಗ್ರೆಸ್ ನಗರ ಉಪಾಧ್ಯಕ್ಷ ಸ್ಥಾನ ಪಡೆದಿದ್ದ.

ಪೋರ್ಜರಿ ದಾಖಲೆ ಸೃಷ್ಟಿಸುವುದಕ್ಕಾಗಿ ನಕಲಿ ಸೀಲ್, ಇ-ಸ್ಟ್ಯಾಂಪ್ ಪೇಪರ್ ಸೇರಿದಂತೆ ಇನ್ನಿತರ ವಸ್ತುಗಳನ್ನ ಬೆಂಗಳೂರಿನಿಂದ ತರುತ್ತಿದ್ದರು. ಎರಡು ದಿನಗಳ ಹಿಂದೆ ಪ್ರಕರಣದಲ್ಲಿ ಮೂವರನ್ನು ಬಂಧಿಸಿದ್ದ ಪೊಲೀಸರು, ಕಾಂಗ್ರೆಸ್ ಮುಖಂಡನ ಬಗ್ಗೆ ಗುರುತರ ಆರೋಪ ಕಂಡುಬಂದಿದ್ದರಿಂದ ಬಂಧಿಸಿದ್ದಾರೆ.
Fake government document racket busted, Five including congress Mysuru vice president Rajaram arrested.
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm