ಬ್ರೇಕಿಂಗ್ ನ್ಯೂಸ್
17-09-22 08:47 pm Mangalore Correspondent ಕ್ರೈಂ
ಮಂಗಳೂರು, ಸೆ.17: ನಗರದ ಕಾಲೇಜೊಂದರ ವಿದ್ಯಾರ್ಥಿಗೆ ಮತ್ತೊಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಘಟನೆ ನಂತೂರು ಜಂಕ್ಷನ್ ಬಳಿ ನಡೆದಿದೆ.
ನಂತೂರು ಬಳಿಯ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸೆ.15ರಂದು ಸಂಜೆ ಕಾಲೇಜು ಬಿಟ್ಟು ತನ್ನ ಗೆಳೆಯರೊಂದಿಗೆ ನಂತೂರು ಜಂಕ್ಷನ್ ಕಡೆಗೆ ನಡೆದುಕೊಡು ಹೋಗುತ್ತಿದ್ದಾಗ ಮತ್ತೊಂದು ಪ.ಪೂ. ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಗಮಿಸಿ ‘ಮಾತನಾಡಲು ಇದೆ’ ಎಂದು ಹೇಳಿ ದೈವಸ್ಥಾನದ ಹಿಂಬದಿಗೆ ಕರೆದೊಯ್ದು ಹೊಟ್ಟೆ, ಎಡಕೈ, ಬೆನ್ನಿಗೆ ಚೂರಿಯಿಂದ ತಿವಿದು ಗಾಯಗೊಳಿಸಿದ್ದಾರೆ. ಗಾಯಗೊಂಡ 17 ವರ್ಷದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿಯು ಮತ್ತೊಂದು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ತನ್ನ ಗೆಳೆಯನಿಗೆ ಅದೇ ಕಾಲೇಜಿನ ಮೂವರು ವಿದ್ಯಾರ್ಥಿಗಳು ಬೆದರಿಕೆ ಹಾಕಿದ ಬಗ್ಗೆ ಸಮಾಧಾನ ಮಾಡಿದ್ದ ಎನ್ನಲಾಗಿದೆ. ಇದರಿಂದ ಕೋಪಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳು ಕೊಲೆ ಮಾಡುವ ಉದ್ದೇಶದಿಂದ ಚೂರಿಯಿಂದ ತಿವಿದಿದ್ದಾರೆ ಎಂಬುದಾಗಿ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಗೊಂಡ ಮತ್ತು ಹಲ್ಲೆ ನಡೆಸಿದ ವಿದ್ಯಾರ್ಥಿಗಳು 17 ವರ್ಷ ಪ್ರಾಯದವರಾಗಿದ್ದು, ಕಾನೂನು ಸಂಕರ್ಷಕ್ಕೊಳಗಾದ ಬಾಲಕರಾದ ಹಿನ್ನೆಲೆಯಲ್ಲಿ ಅವರನ್ನು ಪೋಷಕರೊಂದಿಗೆ ವಿಚಾರಿಸಿ ಕಾನೂನು ಕ್ರಮ ಕೈಗೊಂಡು ಬಾಲ ನ್ಯಾಯ ಮಂಡಳಿಗೆ ವರದಿ ಸಲ್ಲಿಸಲಾಗಿದೆ ಎಂದು ಕದ್ರಿ ಪೊಲೀಸರು ತಿಳಿಸಿದ್ದಾರೆ.
Padua College students fight ends in stabbing, two minors produced to juvenile court in Mangalore
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm