ಬ್ರೇಕಿಂಗ್ ನ್ಯೂಸ್
19-09-22 06:46 pm HK News Desk ಕ್ರೈಂ
ಚಂಡೀಗಢ, ಸೆ.19: ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ಹುಡುಗಿಯರು ಸ್ನಾನ ಮಾಡುವ ಆಕ್ಷೇಪಾರ್ಹ ವಿಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಓರ್ವ ವಿದ್ಯಾರ್ಥಿನಿ ಮತ್ತು ಮತ್ತಿಬ್ಬರನ್ನು ನ್ಯಾಯಾಲಯದ ಮುಂದೆ ಇಂದು ಹಾಜರುಪಡಿಸಲಾಯಿತು. ಬಳಿಕ ಅವರನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಮೂವರು ಆರೋಪಿಗಳನ್ನು ಭಾರೀ ಭದ್ರತೆಯೊಂದಿಗೆ ಖರಾರ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಬಳಿಕ ಎಂಎಂಎಸ್ ಪ್ರಕರಣದಲ್ಲಿ ಬಂಧಿತರಾದ ಮೂವರು ಆರೋಪಿಗಳನ್ನು ವಿಚಾರಣೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಲಾಯಿತು.
![]()
ಆರೋಪಿಗಳಾದ ಸನ್ನಿ, ರಂಕಜ್ರನ್ನು ಹಿಮಾಚಲಪ್ರದೇಶದ ಶಿಮ್ಲಾದಲ್ಲಿ ಬಂಧಿಸಲಾಗಿದೆ. ವಿಡಿಯೋ ಲೀಕ್ ಮಾಡಿದ್ದಾಳೆ ಎಂಬ ಆರೋಪ ಹೊತ್ತಿರುವ ಯುವತಿಯನ್ನೂ ಪೊಲೀಸರು ಘಟನೆ ನಡೆದ ದಿನವೇ ವಶಕ್ಕೆ ಪಡೆದಿದ್ದಾರೆ. ಮೂವರ ವಿರುದ್ಧವೂ ಸೆಕ್ಷನ್ 354 ಸಿ ಮತ್ತು ಐಟಿ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರತಿಭಟನಾಕಾರರಿಗೆ ಕೆನಡಾದಿಂದ ಬೆದರಿಕೆ:
ಎಂಎಂಎಸ್ ವಿಡಿಯೋ ಲೀಕ್ ವಿರುದ್ಧ ಪ್ರತಿಭಟಿಸುತ್ತಿರುವ ವಿದ್ಯಾರ್ಥಿನಿಯರಿಗೆ ಕೆನಡಾದಿಂದ ಬೆದರಿಕೆ ಕರೆ ಬಂದಿದ್ದು, ಪ್ರತಿಭಟನೆ ಕೈಬಿಡುವಂತೆ ಧಮ್ಕಿ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಎಂಎಂಎಸ್ ವಿಡಿಯೋ ಸೋರಿಕೆ ವಿರುದ್ಧ ಚಂಡೀಗಢ ವಿಶ್ವವಿದ್ಯಾಲಯದ ಹೊರಗೆ ಹುಡುಗಿಯರು ಭಾರಿ ಪ್ರತಿಭಟನೆ ನಡೆಸಿದ್ದರು. ಇದು ವಿವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಿಸಲು ಭಾರಿ ಪೊಲೀಸ್ ಪಡೆಯನ್ನು ಕರೆಸಲಾಗಿತ್ತು.
![]()
ಈ ಪ್ರತಿಭಟನೆಯನ್ನು ಕೈಬಿಡುವಂತೆ ಸೂಚಿಸಿ ಕೆನಡಾದಿಂದ ಅನಾಮಿಕ ಕರೆಗಳು ಬಂದಿವೆ. ಧರಣಿ ನಡೆಸಿದರೆ ತಮ್ಮ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುವುದು ಎಂದು ಬ್ಲ್ಯಾಕ್ಮೇಲ್ ಮಾಡಲಾಗಿದೆ ಎಂದು ಕೆಲ ವಿದ್ಯಾರ್ಥಿನಿಯರು ದೂರಿದ್ದಾರೆ.
A foreign link in the Chandigarh University video scandal case came to light after girl students at the varsity alleged that they had received threatening calls from Canada, urging them to stop protests. The caller from the foreign number has allegedly asked the girls to stop protesting or their videos will be made viral.Meanwhile, students of Chandigarh University have planned a mega protest at 4 pm on Monday, said reports.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am