ಬ್ರೇಕಿಂಗ್ ನ್ಯೂಸ್
08-10-20 07:02 pm Bangalore Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 8: ಐಸಿಸ್ ಉಗ್ರರ ಜೊತೆಗೆ ಸಂಪರ್ಕ ಹೊಂದಿರುವ ಆರೋಪದಲ್ಲಿ ಇಬ್ಬರು ಉಗ್ರರನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ. ಅಹ್ಮದ್ ಅಬ್ದುಲ್ ಸಿದರ್ (40) ಮತ್ತು ಇರ್ಫಾನ್ ನಾಸಿರ್(33) ಬಂಧಿತರು. ಅಬ್ದುಲ್ ನಾಸಿರ್ ನನ್ನು ತಮಿಳುನಾಡಿನ ರಾಮನಾಥಪುರಂನಲ್ಲಿ ಬಂಧಿಸಿದ್ದರೆ, ಮತ್ತೊಬ್ಬ ಆರೋಪಿ ಇರ್ಫಾನ್ ನಾಸಿರ್ನನ್ನು ಬೆಂಗಳೂರಿನ ಫ್ರೇಜರ್ ಟೌನ್ನಲ್ಲಿ ಬಂಧಿಸಲಾಗಿದೆ.
ಅಹ್ಮದ್ ಅಬ್ದುಲ್ ಸಿದರ್, ಚೆನ್ನೈನ ಬ್ಯಾಂಕ್ ಒಂದರಲ್ಲಿ ಬ್ಯುಸಿನೆಸ್ ಅನಾಲಿಸ್ಟ್ ಆಗಿದ್ದ. ಇರ್ಫಾನ್ ನಾಸಿರ್, ಬೆಂಗಳೂರಿನಲ್ಲಿ ಅಕ್ಕಿ ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಉಗ್ರರು ಬೆಂಗಳೂರು ಕೇಂದ್ರೀಕರಿಸಿ ಕಾರ್ಯಾಚರಣೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಎನ್ಐಎಗೆ ಐಸಿಸ್ ಸಂಪರ್ಕದ ಸುಳಿವು ಲಭಿಸಿತ್ತು. ಇತ್ತೀಚೆಗೆ ಬೆಂಗಳೂರು ಮೂಲದ ಡಾ.ಅಬ್ದುರ್ ರೆಹಮಾನ್ ಎಂಬಾತನನ್ನು ಬಂಧಿಸಿದ್ದ ವೇಳೆ, ಆತ ಆರೋಪಿಗಳ ಸುಳಿವು ನೀಡಿದ್ದ. 2014ರಲ್ಲಿ ಡಾ.ಅಬ್ದುರ್ ರೆಹಮಾನ್ ಜೊತೆಗೆ ಇವರೂ ಪ್ರಯಾಣಿಸಿದ್ದರು ಎಂದು ಮಾಹಿತಿ ಸಿಕ್ಕಿತ್ತು.
ಈ ಕುರಿತಂತೆ ಇನ್ನಷ್ಟು ತನಿಖೆ ನಡೆಸಿದ ವೇಳೆ, ಬೆಂಗಳೂರಿನಲ್ಲಿ ಖುರಾನ್ ಸರ್ಕಲ್ ಎಂದು ಗ್ರೂಪ್ ಮಾಡಿಕೊಂಡು ಯುವಕರನ್ನು ಸಿರಿಯಾದ ಐಸಿಸ್ ನೆಟ್ವರ್ಕ್ ಸೇರುವಂತೆ ಪ್ರೇರೇಪಣೆ ನೀಡುತ್ತಿದ್ದರು ಎನ್ನುವುದು ಬೆಳಕಿಗೆ ಬಂದಿದೆ. ಅಲ್ಲದೆ, ಇವರಿಬ್ಬರು ಹಿಜ್ಬ್-ಉತ್-ತಾಹಿರ್ ಎಂಬ ಉಗ್ರ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ತಿಳಿದುಬಂದಿದೆ. ಇದರ ಜೊತೆಯಲ್ಲೇ, ತಮ್ಮ ತಂಡದ ಸದಸ್ಯರು ಹಾಗೂ ಗುಂಪುಗಳ ಮೂಲಕ ಹಣ ಸಂಗ್ರಹ ಕಾರ್ಯದಲ್ಲಿ ಸಕ್ರಿಯರಾಗಿದ್ದರು.
ಅಹ್ಮದ್ ಅಬ್ದುಲ್ ಹಾಗೂ ಇರ್ಫಾನ್ ನಾಸಿರ್ ಮನೆಗಳಲ್ಲಿ ಎನ್ಐಎ ಶೋಧ ಕಾರ್ಯ ನಡೆಸಿದೆ. ಗುರುಪ್ಪನ ಪಾಳ್ಯ ಹಾಗೂ ಫ್ರೇಜರ್ ಟೌನ್ ನಿವಾಸದಲ್ಲಿ ಶೋಧ ಕಾರ್ಯಾಚರಣೆ ವೇಳೆ ಧಾರ್ಮಿಕ ಭಾವನೆ ಪ್ರಚೋದಿಸುವ ಲೇಖನಗಳು, ವಿದ್ಯುನ್ಮಾನ ಉಪಕರಣಗಳು ಲಭ್ಯವಾಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
NIA arrests two suspected IS terrorists, Ahamed Abdul Cader, 40, and Irfan Nasir, 33, from Bengaluru
19-09-24 10:42 pm
Bangalore Correspondent
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
Shobha Karandlaje, R Ashok, Nagamangala riot...
19-09-24 06:48 pm
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
19-09-24 11:12 pm
Mangalore Correspondent
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
18-09-24 10:08 pm
Mangalore Correspondent
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm