ಬ್ರೇಕಿಂಗ್ ನ್ಯೂಸ್
23-09-22 02:08 pm HK News Desk ಕ್ರೈಂ
ಚಿಕ್ಕಬಳ್ಳಾಪುರ, ಸೆ.23: ಲೋಕಾಯುಕ್ತ ಅಧಿಕಾರಿಗಳ ಸೋಗಿನಲ್ಲಿ ತಾಲ್ಲೂಕು ಕಚೇರಿಗೆ ದಾಳಿ ನಡೆಸಿದ ವ್ಯಕ್ತಿಯೊಬ್ಬ ಟಿಪ್ ಟಾಪ್ ಆಗಿ ಬಂದು ತಹಶೀಲ್ದಾರ್ ಅವರನ್ನೇ ವಿಚಾರಣೆಗೊಳಪಡಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು ತಹಸೀಲ್ದಾರ್ ಪೊಲೀಸ್ ದೂರು ನೀಡಿದ್ದಾರೆ.
ಫೈಲ್ ಹಿಡಿದು ಬಂದಿದ್ದ ವ್ಯಕ್ತಿ ಧಿಮಾಕಿನ ಶೈಲಿಯಲ್ಲಿ ತಹಶೀಲ್ದಾರನ್ನು ವಿಚಾರಣೆ ನಡೆಸಿದ್ದು ಲೋಕಾಯುಕ್ತರ ರೀತಿ ಪೋಸು ನೀಡಿದ್ದ. ಆದರೆ ವ್ಯಕ್ತಿಯ ಚಲನವಲನದಿಂದ ಅನುಮಾನಗೊಂಡ ಚಿಕ್ಕಬಳ್ಳಾಪುರ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಲೋಕಾಯುಕ್ತ ಅಧಿಕಾರಿ ಎನ್ನುವ ಬಗ್ಗೆ ಐಡಿ ತೋರಿಸುವಂತೆ ಹೇಳಿದ್ದಾರೆ. ದಾಖಲೆ ಕೇಳುತ್ತಿದ್ದಂತೆ ನಕಲಿ ಅಧಿಕಾರಿ ಹೊರಗೆ ಓಡಿದ್ದು ತಪ್ಪಿಸಿಕೊಂಡಿದ್ದಾನೆ.

ತಹಶೀಲ್ದಾರ್ ಗಣಪತಿ ಶಾಸ್ತ್ರಿ ಚಿಕ್ಕಬಳ್ಳಾಪುರ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಫೈಲ್ ನಲ್ಲಿ ಯಾವುದೋ ದಾಖಲೆ ಹಿಡ್ಕೊಂಡು ಬಂದಿದ್ದು ಬೆದರಿಸಿ ಹಣ ವಸೂಲಿಗಾಗಿ ಬಂದಿದ್ದನೇ ಎಂಬ ಶಂಕೆ ವ್ಯಕ್ತವಾಗಿದೆ. ಕೈಯಲ್ಲಿ ಫೈಲ್ ಹಿಡಿದು ಏನೋ ಅಕ್ರಮದ ಬಗ್ಗೆ ದಾಖಲೆ ತೋರಿಸಿ ಬೆದರಿಸುವ ತಂತ್ರ ಮಾಡಿದ್ದ. ಆದರೆ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದು ತಹಶೀಲ್ದಾರ್ ಹುದ್ದೆ ಗಿಟ್ಟಿಸಿಕೊಂಡಿದ್ದ ಗಣಪತಿ ಶಾಸ್ತ್ರಿ ಇದರಿಂದ ಧೃತಿಗೆಡದೆ ನಕಲಿ ಅಧಿಕಾರಿಯನ್ನೇ ಪ್ರಶ್ನಿಸಿದ್ದಾರೆ.
ಅಧಿಕಾರಿಯನ್ನು ಬೆದರಿಸಿ ಹಣ ಕೀಳಬಹುದೆಂದು ಬಂದಿದ್ದ ವ್ಯಕ್ತಿಯೇ ಕೊನೆಗೆ ಪೇಚಿಗೆ ಸಿಲುಕಿದ್ದು ಅಲ್ಲಿನ ಸಿಸಿಟಿವಿಯಲ್ಲಿ ದಾಖಲಾಗಿದೆ. ತಹಶೀಲ್ದಾರ್ ಗಣಪತಿಶಾಸ್ತ್ರಿ ಈ ಬಗ್ಗೆ ಚಿಕ್ಕಬಳ್ಳಾಪುರ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.
Chikkaballapur Man Poses as Lokayukta officer and investigates Thalisadar, runs when asked to show his ID card.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm