ಬ್ರೇಕಿಂಗ್ ನ್ಯೂಸ್
23-09-22 02:08 pm HK News Desk ಕ್ರೈಂ
ಚಿಕ್ಕಬಳ್ಳಾಪುರ, ಸೆ.23: ಲೋಕಾಯುಕ್ತ ಅಧಿಕಾರಿಗಳ ಸೋಗಿನಲ್ಲಿ ತಾಲ್ಲೂಕು ಕಚೇರಿಗೆ ದಾಳಿ ನಡೆಸಿದ ವ್ಯಕ್ತಿಯೊಬ್ಬ ಟಿಪ್ ಟಾಪ್ ಆಗಿ ಬಂದು ತಹಶೀಲ್ದಾರ್ ಅವರನ್ನೇ ವಿಚಾರಣೆಗೊಳಪಡಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು ತಹಸೀಲ್ದಾರ್ ಪೊಲೀಸ್ ದೂರು ನೀಡಿದ್ದಾರೆ.
ಫೈಲ್ ಹಿಡಿದು ಬಂದಿದ್ದ ವ್ಯಕ್ತಿ ಧಿಮಾಕಿನ ಶೈಲಿಯಲ್ಲಿ ತಹಶೀಲ್ದಾರನ್ನು ವಿಚಾರಣೆ ನಡೆಸಿದ್ದು ಲೋಕಾಯುಕ್ತರ ರೀತಿ ಪೋಸು ನೀಡಿದ್ದ. ಆದರೆ ವ್ಯಕ್ತಿಯ ಚಲನವಲನದಿಂದ ಅನುಮಾನಗೊಂಡ ಚಿಕ್ಕಬಳ್ಳಾಪುರ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಲೋಕಾಯುಕ್ತ ಅಧಿಕಾರಿ ಎನ್ನುವ ಬಗ್ಗೆ ಐಡಿ ತೋರಿಸುವಂತೆ ಹೇಳಿದ್ದಾರೆ. ದಾಖಲೆ ಕೇಳುತ್ತಿದ್ದಂತೆ ನಕಲಿ ಅಧಿಕಾರಿ ಹೊರಗೆ ಓಡಿದ್ದು ತಪ್ಪಿಸಿಕೊಂಡಿದ್ದಾನೆ.

ತಹಶೀಲ್ದಾರ್ ಗಣಪತಿ ಶಾಸ್ತ್ರಿ ಚಿಕ್ಕಬಳ್ಳಾಪುರ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಫೈಲ್ ನಲ್ಲಿ ಯಾವುದೋ ದಾಖಲೆ ಹಿಡ್ಕೊಂಡು ಬಂದಿದ್ದು ಬೆದರಿಸಿ ಹಣ ವಸೂಲಿಗಾಗಿ ಬಂದಿದ್ದನೇ ಎಂಬ ಶಂಕೆ ವ್ಯಕ್ತವಾಗಿದೆ. ಕೈಯಲ್ಲಿ ಫೈಲ್ ಹಿಡಿದು ಏನೋ ಅಕ್ರಮದ ಬಗ್ಗೆ ದಾಖಲೆ ತೋರಿಸಿ ಬೆದರಿಸುವ ತಂತ್ರ ಮಾಡಿದ್ದ. ಆದರೆ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದು ತಹಶೀಲ್ದಾರ್ ಹುದ್ದೆ ಗಿಟ್ಟಿಸಿಕೊಂಡಿದ್ದ ಗಣಪತಿ ಶಾಸ್ತ್ರಿ ಇದರಿಂದ ಧೃತಿಗೆಡದೆ ನಕಲಿ ಅಧಿಕಾರಿಯನ್ನೇ ಪ್ರಶ್ನಿಸಿದ್ದಾರೆ.
ಅಧಿಕಾರಿಯನ್ನು ಬೆದರಿಸಿ ಹಣ ಕೀಳಬಹುದೆಂದು ಬಂದಿದ್ದ ವ್ಯಕ್ತಿಯೇ ಕೊನೆಗೆ ಪೇಚಿಗೆ ಸಿಲುಕಿದ್ದು ಅಲ್ಲಿನ ಸಿಸಿಟಿವಿಯಲ್ಲಿ ದಾಖಲಾಗಿದೆ. ತಹಶೀಲ್ದಾರ್ ಗಣಪತಿಶಾಸ್ತ್ರಿ ಈ ಬಗ್ಗೆ ಚಿಕ್ಕಬಳ್ಳಾಪುರ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.
Chikkaballapur Man Poses as Lokayukta officer and investigates Thalisadar, runs when asked to show his ID card.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm