ಬ್ರೇಕಿಂಗ್ ನ್ಯೂಸ್
23-09-22 06:35 pm Bangalore Correspondent ಕ್ರೈಂ
ಬೆಂಗಳೂರು, ಸೆ.23 : ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿಕೊಂಡು ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮಲಯಾಳಿ ಕಿರುತೆರೆ ನಟ ಸೇರಿ ಮೂವರನ್ನು ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಮಲಯಾಳಂ ನಟ ಶಿಯಾಜ್ ಮತ್ತು ಈತನ ಸ್ನೇಹಿತರಾದ ಮೊಹಮ್ಮದ್ ಶಾಹಿದ್ ಹಾಗೂ ಮಂಗಲ್ ತೋಡಿ ಜಿತೀನ್ ಬಂಧಿತರು. ಆರೋಪಿಗಳಿಂದ 13 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳು ಹೆಚ್ಎಸ್ಆರ್, ಕೋರಮಂಗಲ ಭಾಗದಲ್ಲಿನ ಪ್ರತಿಷ್ಠಿತ ಕಾಲೇಜುಗಳನ್ನು ಗುರಿಯಾಗಿಸಿಕೊಂಡು ಡ್ರಗ್ ವ್ಯವಹಾರ ನಡೆಸುತ್ತಿದ್ದರು. ಕೇರಳದಿಂದ ಗಾಂಜಾ ಮತ್ತು ಎಂಡಿಎಂಎ ತರಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು ಎಂಬುದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಡ್ರಗ್ ಪೆಡ್ಲರ್ ನ 1.6 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಬೆಂಗಳೂರು ನಗರ ಸಿಸಿಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳವು ನಗರದಲ್ಲಿ ಡ್ರಗ್ ಪೆಡ್ಲರ್ ಓರ್ವನಿಗೆ ಸೇರಿದ 1.60 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಸಿಸಿಬಿ ಪ್ರಕಾರ, ಆರೋಪಿ ಮಾದಕ ವಸ್ತು ದಂಧೆಯಲ್ಲಿ ತೊಡಗಿಸಿಕೊಂಡು ಚರ ಮತ್ತು ಸ್ಥಿರ ಆಸ್ತಿಗಳನ್ನು ಖರೀದಿಸಿದ್ದ. ಎನ್ಡಿಪಿಎಸ್ ಕಾಯಿದೆ 5ಎ, ಕಾಲಮ್ 68 (e) ಮತ್ತು (f) ಅಡಿಯಲ್ಲಿ ಆಸ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಡ್ರಗ್ ಪೆಡ್ಲರ್ನನ್ನು ಮೃತ್ಯುಂಜಯ, ಅಲಿಯಾಸ್ ಜಯಣ್ಣ ಎಂದು ಗುರುತಿಸಲಾಗಿದೆ. ಈತನನ್ನು ಪೊಲೀಸ್ ಇನ್ಸ್ಪೆಕ್ಟರ್ ಬಿ.ಎಸ್. ಅಶೋಕ್ ಅವರು ಜುಲೈನಲ್ಲಿ ಬಂಧಿಸಿ 80 ಲಕ್ಷ ಮೌಲ್ಯದ ಹಾಶಿಶ್ ಆಯಿಲ್ ಮತ್ತು ಗಾಂಜಾ ವಶಕ್ಕೆ ಪಡೆದಿದ್ದರು.
The Karnataka police have arrested three drug peddlers, including a small screen actor in Kerala, and seized 191 grams of MDMA and 2.80 kilograms of ganja valued at Rs 13 lakh from them on Friday.The accused are identified as Siyaz, Mohammad Shahid and Mangal Thodi Jathin. All the accused are from Kerala and accused Shiyaz worked as an actor in Malayalam television.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm