ಬ್ರೇಕಿಂಗ್ ನ್ಯೂಸ್
24-09-22 12:56 pm HK News Desk ಕ್ರೈಂ
ಕಲಬುರಗಿ, ಸೆ.24: ಮಹಾರಾಷ್ಟ್ರ ಗಡಿಭಾಗದಲ್ಲಿ ಗಾಂಜಾ ಬೆಳೆಯುತ್ತಿದ್ದ ಜಾಗಕ್ಕೆ ದಾಳಿ ನಡೆಸಿದ್ದ ಪೊಲೀಸರ ಮೇಲೆ ಗಾಂಜಾ ದಂಧೆಕೋರರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದಿದೆ.
ಕರ್ನಾಟಕ - ಮಹಾರಾಷ್ಟ್ರ ಗಡಿಯ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಭೋಸಗಾ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ವ್ಯಕ್ತಿಗಳು ಗಾಂಜಾ ಬೆಳೆದಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದು ಕಲಬುರಗಿ ಜಿಲ್ಲಾ ಗ್ರಾಮೀಣ ಠಾಣೆ ಸಿಪಿಐ ಶ್ರೀಮಂತ ಇಲ್ಲಾಳ ಅವರ ತಂಡ ಶುಕ್ರವಾರ ರಾತ್ರಿ ದಾಳಿ ನಡೆಸಿತ್ತು. ಈ ವೇಳೆ, 40ಕ್ಕೂ ಹೆಚ್ಚು ಮಂದಿಯಿದ್ದ ದಂಧೆಕೋರರು ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಸಿಪಿಐ ಇಲ್ಲಾಳ ಅವರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತಲೆ, ಮುಖ, ಹೊಟ್ಟೆಯ ಭಾಗಕ್ಕೆ ಹಲ್ಲೆ ನಡೆಸಿದ್ದು ಇಲ್ಲಾಳ ಅವರನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



ಸಿಪಿಐ ಇಲ್ಲಾಳ ನೇತೃತ್ವದ ಪೊಲೀಸರು ಎರಡು ದಿನಗಳ ಹಿಂದೆ ಪ್ರಮುಖ ಆರೋಪಿ ಸಂತೋಷ ಸೇರಿದಂತೆ ಅನೇಕ ಗಾಂಜಾ ದಂಧೆಕೋರರನ್ನೂ ಬಂಧಿಸಿದ್ದರು. 10 ಜನರ ಪೊಲೀಸ್ ತಂಡ ಶುಕ್ರವಾರ ಮಹಾರಾಷ್ಟ್ರ ಗಡಿಭಾಗಕ್ಕೆ ಹೋಗಿದ್ದು ಅಲ್ಲಿ ಗಾಂಜಾ ಬೆಳೆಯುತ್ತಿದ್ದ ಹೊಲಗಳಿಗೆ ದಾಳಿ ನಡೆಸಿತ್ತು. ರಾತ್ರಿ 9:30ರ ವೇಳೆಗೆ 40 ಮಂದಿಯಿದ್ದ ಗಾಂಜಾ ದಂಧೆಕೋರರು ಕಟ್ಟಿಗೆಗಳಿಂದ ಹಲ್ಲೆ ನಡೆಸಿದ್ದಾರೆ. ದಾಳಿ ಮಾಡುತ್ತಿದ್ದಂತೆ ಸಿಪಿಐ ಶ್ರೀಮಂತ ಇಲ್ಲಾಳ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಗಾಂಜಾ ದಂಧೆಕೋರರು ಪೊಲೀಸರನ್ನು ಅಟ್ಟಾಡಿಸಿದ್ದಾರೆ. ಕೊನೆಗೆ ಪ್ರಾಣ ಉಳಿಸಿಕೊಳ್ಳಲು ಪೊಲೀಸರು ಚೆಲ್ಲಾಪಿಲ್ಲಿಯಾಗಿ ಓಡಿಹೋಗಿದ್ದಾರೆ. ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿಪಿಐ ಇಲ್ಲಾಳ ಅವರನ್ನ ಮಧ್ಯರಾತ್ರಿ 2:30ರ ವೇಳೆಗೆ ಸಮೀಪದ ಆಸ್ಪತ್ರೆಗೆ ಒಯ್ಯಲಾಗಿತ್ತು.
Drug peddlers attack Police during raid in Kalaburgi.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am