ಬ್ರೇಕಿಂಗ್ ನ್ಯೂಸ್
24-09-22 12:56 pm HK News Desk ಕ್ರೈಂ
ಕಲಬುರಗಿ, ಸೆ.24: ಮಹಾರಾಷ್ಟ್ರ ಗಡಿಭಾಗದಲ್ಲಿ ಗಾಂಜಾ ಬೆಳೆಯುತ್ತಿದ್ದ ಜಾಗಕ್ಕೆ ದಾಳಿ ನಡೆಸಿದ್ದ ಪೊಲೀಸರ ಮೇಲೆ ಗಾಂಜಾ ದಂಧೆಕೋರರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದಿದೆ.
ಕರ್ನಾಟಕ - ಮಹಾರಾಷ್ಟ್ರ ಗಡಿಯ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಭೋಸಗಾ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ವ್ಯಕ್ತಿಗಳು ಗಾಂಜಾ ಬೆಳೆದಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದು ಕಲಬುರಗಿ ಜಿಲ್ಲಾ ಗ್ರಾಮೀಣ ಠಾಣೆ ಸಿಪಿಐ ಶ್ರೀಮಂತ ಇಲ್ಲಾಳ ಅವರ ತಂಡ ಶುಕ್ರವಾರ ರಾತ್ರಿ ದಾಳಿ ನಡೆಸಿತ್ತು. ಈ ವೇಳೆ, 40ಕ್ಕೂ ಹೆಚ್ಚು ಮಂದಿಯಿದ್ದ ದಂಧೆಕೋರರು ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಸಿಪಿಐ ಇಲ್ಲಾಳ ಅವರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತಲೆ, ಮುಖ, ಹೊಟ್ಟೆಯ ಭಾಗಕ್ಕೆ ಹಲ್ಲೆ ನಡೆಸಿದ್ದು ಇಲ್ಲಾಳ ಅವರನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



ಸಿಪಿಐ ಇಲ್ಲಾಳ ನೇತೃತ್ವದ ಪೊಲೀಸರು ಎರಡು ದಿನಗಳ ಹಿಂದೆ ಪ್ರಮುಖ ಆರೋಪಿ ಸಂತೋಷ ಸೇರಿದಂತೆ ಅನೇಕ ಗಾಂಜಾ ದಂಧೆಕೋರರನ್ನೂ ಬಂಧಿಸಿದ್ದರು. 10 ಜನರ ಪೊಲೀಸ್ ತಂಡ ಶುಕ್ರವಾರ ಮಹಾರಾಷ್ಟ್ರ ಗಡಿಭಾಗಕ್ಕೆ ಹೋಗಿದ್ದು ಅಲ್ಲಿ ಗಾಂಜಾ ಬೆಳೆಯುತ್ತಿದ್ದ ಹೊಲಗಳಿಗೆ ದಾಳಿ ನಡೆಸಿತ್ತು. ರಾತ್ರಿ 9:30ರ ವೇಳೆಗೆ 40 ಮಂದಿಯಿದ್ದ ಗಾಂಜಾ ದಂಧೆಕೋರರು ಕಟ್ಟಿಗೆಗಳಿಂದ ಹಲ್ಲೆ ನಡೆಸಿದ್ದಾರೆ. ದಾಳಿ ಮಾಡುತ್ತಿದ್ದಂತೆ ಸಿಪಿಐ ಶ್ರೀಮಂತ ಇಲ್ಲಾಳ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಗಾಂಜಾ ದಂಧೆಕೋರರು ಪೊಲೀಸರನ್ನು ಅಟ್ಟಾಡಿಸಿದ್ದಾರೆ. ಕೊನೆಗೆ ಪ್ರಾಣ ಉಳಿಸಿಕೊಳ್ಳಲು ಪೊಲೀಸರು ಚೆಲ್ಲಾಪಿಲ್ಲಿಯಾಗಿ ಓಡಿಹೋಗಿದ್ದಾರೆ. ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿಪಿಐ ಇಲ್ಲಾಳ ಅವರನ್ನ ಮಧ್ಯರಾತ್ರಿ 2:30ರ ವೇಳೆಗೆ ಸಮೀಪದ ಆಸ್ಪತ್ರೆಗೆ ಒಯ್ಯಲಾಗಿತ್ತು.
Drug peddlers attack Police during raid in Kalaburgi.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm