ಬ್ರೇಕಿಂಗ್ ನ್ಯೂಸ್
09-10-20 12:56 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 09 : ಆನ್ ಲೈನ್ ವಂಚನೆ ಬಗ್ಗೆ ಎಷ್ಟೇ ಪ್ರಕರಣಗಳು ವರದಿಯಾದರೂ, ಜನ ಎಚ್ಚತ್ತುಕೊಳ್ಳಲ್ಲ. ಇಲ್ಲೊಬ್ಬರು ನ್ಯಾಪ್ಟಾಲ್ ಕಂಪೆನಿ ಹೆಸರಿನಲ್ಲಿ 12 ಲಕ್ಷದ ಆಸೆಗೆ ಬಿದ್ದು ಬರೋಬ್ಬರಿ 26,47,650 ರೂಪಾಯಿ ಕಳಕೊಂಡಿದ್ದಾರೆ.
ಉಡುಪಿಯ ನಾಗರಾಜ್ ಭಟ್ ಅವರ ವಿಳಾಸಕ್ಕೆ ನ್ಯಾಪ್ಟಾಲ್ ಕಂಪನಿ ಹೆಸರಿನಲ್ಲಿ ಸ್ಕ್ರಾಚ್ ಕೂಪನ್ ಬಂದಿತ್ತು. ಅದರಲ್ಲಿ ನೀವು ರೂಪಾಯಿ 12 ಲಕ್ಷ ಬಹುಮಾನ ಗೆದ್ದಿದ್ದೀರಿ, ಅದನ್ನು ಪಡೆಯಲು ನಮ್ಮನ್ನು ಸಂಪರ್ಕಿಸುವಂತೆ ತಿಳಿಸಿದ್ದರು. ಪತ್ರದಲ್ಲಿದ್ದ ಮೊಬೈಲ್ ಸಂಖ್ಯೆಗೆ ನಾಗರಾಜ್ ಕರೆ ಮಾಡಿದ್ದು ಬಹುಮಾನದ ಹಣ ಪಡೆಯಲು ನೋಂದಣಿ ಶುಲ್ಕ 12,೦೦೦ ರೂ. ತೆರಬೇಕು ಎಂದು ತಿಳಿಸಿದ್ದರು.
ಅದರಂತೆ, 2019ರ ಎ.4ರಂದು ನಾಗರಾಜ್, 12 ಸಾವಿರ ರೂ. ಖಾತೆಗೆ ಪಾವತಿಸಿದ್ದರು. ಅನಂತರ ಅಮಿತ್ ಬಿಸ್ವಾಸ್, ಚೇತನ್ ಕುಮಾರ್ ಎಂಬವರು, ಬೇರೆ ಸಂಖ್ಯೆಗಳಿಂದ ಕರೆ ಮಾಡಿ ತಾವು ನ್ಯಾಪ್ಟಲ್ ಕಂಪೆನಿಯಿಂದ ಮಾತನಾಡುತ್ತಿರುವುದಾಗಿ ನಂಬಿಸಿದ್ದರು. ಅಲ್ಲದೆ, 12 ಲಕ್ಷ ಬಹುಮಾನದ ಮೊತ್ತ ಪಡೆಯಲು ಜಿಎಸ್ ಟಿ, ಚಾರ್ಜ್ ಅಂತ ಶುಲ್ಕ ಕಟ್ಟಬೇಕು ಎಂದು ನಂಬಿಸಿದ್ದರು. ಹೀಗೆ ನಾಗರಾಜ್ ಭಟ್, 2019ರ ಎ.4ರಿಂದ ಜು.28ರ ನಡುವೆ ಜಿ.ಎಸ್.ಟಿ. ತೆರಿಗೆ, ವೆರಿಫಿಕೇಶನ್ ಚಾರ್ಜ್, ಸಬ್ಚಾರ್ಜ್ ಎಂದು ಒಟ್ಟು 26,47,650 ರೂ. ಮೊತ್ತವನ್ನು ವಿವಿಧ ಖಾತೆಗಳಿಗೆ ಜಮೆ ಮಾಡಿದ್ದಾರೆ.

ಕೊನೆಗೆ, ನಾಗರಾಜ್ ಭಟ್ ತಾನು ಮೋಸ ಹೋಗಿದ್ದು ಅರಿವಾಗಿದ್ದು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ವಂಚಕರ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Man looses 26 lakhs in online fraud later registers case in cyber crime. The victim has been identified as Nagraj Bhat from Udupi.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:59 pm
Mangaluru Staffer
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm