ಬ್ರೇಕಿಂಗ್ ನ್ಯೂಸ್
02-10-22 08:19 pm HK News Desk ಕ್ರೈಂ
ನವದೆಹಲಿ, ಅ.2: ದಕ್ಷಿಣ ದೆಹಲಿಯ ಲೋಧಿ ಕಾಲೋನಿಯಲ್ಲಿ ಆರು ವರ್ಷದ ಬಾಲಕನನ್ನು ಕತ್ತು ಕೊಯ್ದು, ತಲೆ ಒಡೆದು ಕೊಲ್ಲಲಾಗಿದ್ದು ವಾಮಾಚಾರಕ್ಕಾಗಿ 'ನರ ಬಲಿ' ನೀಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧಿಸಿ ಪೊಲೀಸರು ವಿಜಯ್ ಕುಮಾರ್, ಅಮರ್ ಕುಮಾರ್ ಎಂಬವರನ್ನು ಬಂಧಿಸಿದ್ದಾರೆ. ಇವರಿಬ್ಬರು ಬಿಹಾರದವರಾಗಿದ್ದು ಕುಡಿದ ಮತ್ತಿನಲ್ಲಿ ವಾಮಾಚಾರದ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.
ಆರೋಪಿಗಳು ಮತ್ತು ಬಾಲಕನ ತಂದೆ-ತಾಯಿ ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಒಂದೇ ಕೊಳೆಗೇರಿಯಲ್ಲಿ ವಾಸಿಸುತ್ತಿದ್ದರು. ತಮ್ಮವರ ಹಿತಕ್ಕಾಗಿ ಈ ಕೃತ್ಯ ನಡೆಸಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ತಂದೆ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. 'ಭಾನುವಾರ ಕೆಲವು ಮಹಿಳೆಯರು ಸೇರಿ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಭಜನೆ ಹಾಡುತ್ತಿದ್ದರು. ಆಗ ಬಾಲಕ ಅಲ್ಲಿಯೇ ಓಡಾಡಿಕೊಂಡಿದ್ದ. ಕೆಲಹೊತ್ತಿನ ಬಳಿಕ ಎಲ್ಲರೂ ತಮ್ಮ ಮನೆಗೆ ಹೋಗಿದ್ದಾಗ ಬಾಲಕ ನಾಪತ್ತೆಯಾಗಿದ್ದ. ಗುಡಿಸಲೊಂದರ ಬಳಿ ರಕ್ತದ ಕಲೆ ಕಂಡುಬಂದಿದ್ದು, ತೆರೆದು ನೋಡಿದಾಗ ಕೊಲೆ ಕೃತ್ಯ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಹಂತಕರು ಯಾವುದೋ ಉದ್ದೇಶದಿಂದ ವಾಮಾಚಾರ ನಡೆಸಿ ಮಗುವನ್ನು ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ.
Two men allegedly killed a six-year-old boy as "human sacrifice" by slitting his throat and attacking him on the head in South Delhi's Lodhi Colony, police said on Sunday.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm