ಬ್ರೇಕಿಂಗ್ ನ್ಯೂಸ್
04-10-22 04:24 pm HK News Desk ಕ್ರೈಂ
ಗದಗ, ಅ.04: ನಗರದ ಮುಳಗುಂದ ನಾಕಾ ಬಳಿಯ ಎಸ್.ಬಿ ಬೇಕರಿ ಎದುರು ಹಾಡಹಗಲೇ ಮಹಿಳೆಯ ಕೊಲೆ ನಡೆದಿದ್ದು ಬೆಟಗೇರಿ ಜನರು ಬೆಚ್ಚಿಬಿದ್ದಿದ್ದಾರೆ.
ನಗರದ ಗಂಗಿಮಡಿ ಬಡಾವಣೆ ನಿವಾಸಿಯಾಗಿದ್ದ ಶೋಭಾ ಲಮಾಣಿ ಅಲಿಯಾಸ್ ಮಿನಾಜ್ ಬೇಪಾರಿ ಕೊಲೆಯಾದ ಮಹಿಳೆ. ಹಳೆಯ ದ್ವೇಷದ ಹಿನ್ನೆಲೆ ಚೇತನ್ ಕುಮಾರ್ ಹಾಗೂ ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ ಅಂತಾ ಎಸ್.ಪಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ.
ನ್ಯಾಯಾಲಯದ ಕಲಾಪ ಮುಗಿಸಿಕೊಂಡು ಆಟೋ ಏರಿ ಮಧ್ಯಾಹ್ನ ನಗರದ ಎಸ್.ಬಿ ಬೇಕರಿ ಬಳಿ ಬಂದಾಕೆಯ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಮೃತ ಶೋಭಾ ಮಗುವಿಗಾಗಿ ಬೇಕರಿ ತಿನಿಸು ಖರೀದಿಸಲು ಬೇಕರಿಗೆ ಬಂದಿದ್ದರು. ಅಲ್ಲೇ ಕಾಯ್ದು ಕೂತಿದ್ದ ಇಬ್ಬರು ಆರೋಪಿಗಳು ಚಾಕುವಿನಿಂದ ಕತ್ತು ಸೀಳಿಸಿದ್ದಾರೆ.
ಘಟನೆ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಅಣ್ಣನ ಹತ್ಯೆಗೆ ಪ್ರತಿಕಾರ ;
ಗದಗ ನಗರದ ಗಂಗಿಮಡಿಯಲ್ಲಿ 2020 ರಲ್ಲಿ ರಮೇಶ್ ಕುಮಾರ್ ಎಂಬಾತನ ಕೊಲೆ ನಡೆದಿದ್ದು. ಕೊಲೆ ಕೇಸ್ ವಿಚಾರವಾಗಿ ಶೋಭಾ ಅಲಿಯಾಸ್ ಮಿನಾಜ್ ಹಾಗೂ ಗಂಡ ವಾಸೀಂ ಬೇಪಾರಿ ಈ ಕೊಲೆಯಲ್ಲಿ ಭಾಗಿಯಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಜಾಮೀನಿನ ಮೇಲೆ ಇಬ್ಬರು ಹೊರ ಬಂದಿದ್ದರು. ಜಾಮೀನು ಪಡೆದ ನಂತರ ಇಬ್ಬರು ಹುಬ್ಬಳ್ಳಿಯಲ್ಲಿ ವಾಸವಿದ್ದರು.
ಕೋರ್ಟ್ ಕಲಾಪ ಇದ್ದಾಗ ಗದಗ ನಗರಕ್ಕೆ ಬರುತ್ತಿದ್ದರು. ಪ್ರಕರಣದ ವಿಚಾರಣೆಗೆ ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಶೋಭಾ ಬಂದಿದ್ದರು ಎನ್ನಲಾಗಿದೆ. ಇದೇ ವೇಳೆಗೆ ಕಾಯುತ್ತಿದ್ದ ಆರೋಪಿಗಳಾದ ಚೇತನ್ ಕುಮಾರ್, ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ.
2020 ರಮೇಶ್ ಕೊಲೆ ಹಿನ್ನೆಲೆ ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿಯನ್ನ ಪೊಲೀಸರು ಕಲೆಹಾಕುತ್ತಿದ್ದಾರೆ.
Revenge murder in Gadag, woman murdered after slitting throat in Bakery on her back from the court.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 06:51 pm
Mangalore Correspondent
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm