ಬ್ರೇಕಿಂಗ್ ನ್ಯೂಸ್
04-10-22 04:24 pm HK News Desk ಕ್ರೈಂ
ಗದಗ, ಅ.04: ನಗರದ ಮುಳಗುಂದ ನಾಕಾ ಬಳಿಯ ಎಸ್.ಬಿ ಬೇಕರಿ ಎದುರು ಹಾಡಹಗಲೇ ಮಹಿಳೆಯ ಕೊಲೆ ನಡೆದಿದ್ದು ಬೆಟಗೇರಿ ಜನರು ಬೆಚ್ಚಿಬಿದ್ದಿದ್ದಾರೆ.
ನಗರದ ಗಂಗಿಮಡಿ ಬಡಾವಣೆ ನಿವಾಸಿಯಾಗಿದ್ದ ಶೋಭಾ ಲಮಾಣಿ ಅಲಿಯಾಸ್ ಮಿನಾಜ್ ಬೇಪಾರಿ ಕೊಲೆಯಾದ ಮಹಿಳೆ. ಹಳೆಯ ದ್ವೇಷದ ಹಿನ್ನೆಲೆ ಚೇತನ್ ಕುಮಾರ್ ಹಾಗೂ ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ ಅಂತಾ ಎಸ್.ಪಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ.
ನ್ಯಾಯಾಲಯದ ಕಲಾಪ ಮುಗಿಸಿಕೊಂಡು ಆಟೋ ಏರಿ ಮಧ್ಯಾಹ್ನ ನಗರದ ಎಸ್.ಬಿ ಬೇಕರಿ ಬಳಿ ಬಂದಾಕೆಯ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಮೃತ ಶೋಭಾ ಮಗುವಿಗಾಗಿ ಬೇಕರಿ ತಿನಿಸು ಖರೀದಿಸಲು ಬೇಕರಿಗೆ ಬಂದಿದ್ದರು. ಅಲ್ಲೇ ಕಾಯ್ದು ಕೂತಿದ್ದ ಇಬ್ಬರು ಆರೋಪಿಗಳು ಚಾಕುವಿನಿಂದ ಕತ್ತು ಸೀಳಿಸಿದ್ದಾರೆ.
ಘಟನೆ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಅಣ್ಣನ ಹತ್ಯೆಗೆ ಪ್ರತಿಕಾರ ;
ಗದಗ ನಗರದ ಗಂಗಿಮಡಿಯಲ್ಲಿ 2020 ರಲ್ಲಿ ರಮೇಶ್ ಕುಮಾರ್ ಎಂಬಾತನ ಕೊಲೆ ನಡೆದಿದ್ದು. ಕೊಲೆ ಕೇಸ್ ವಿಚಾರವಾಗಿ ಶೋಭಾ ಅಲಿಯಾಸ್ ಮಿನಾಜ್ ಹಾಗೂ ಗಂಡ ವಾಸೀಂ ಬೇಪಾರಿ ಈ ಕೊಲೆಯಲ್ಲಿ ಭಾಗಿಯಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಜಾಮೀನಿನ ಮೇಲೆ ಇಬ್ಬರು ಹೊರ ಬಂದಿದ್ದರು. ಜಾಮೀನು ಪಡೆದ ನಂತರ ಇಬ್ಬರು ಹುಬ್ಬಳ್ಳಿಯಲ್ಲಿ ವಾಸವಿದ್ದರು.
ಕೋರ್ಟ್ ಕಲಾಪ ಇದ್ದಾಗ ಗದಗ ನಗರಕ್ಕೆ ಬರುತ್ತಿದ್ದರು. ಪ್ರಕರಣದ ವಿಚಾರಣೆಗೆ ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಶೋಭಾ ಬಂದಿದ್ದರು ಎನ್ನಲಾಗಿದೆ. ಇದೇ ವೇಳೆಗೆ ಕಾಯುತ್ತಿದ್ದ ಆರೋಪಿಗಳಾದ ಚೇತನ್ ಕುಮಾರ್, ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ.
2020 ರಮೇಶ್ ಕೊಲೆ ಹಿನ್ನೆಲೆ ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿಯನ್ನ ಪೊಲೀಸರು ಕಲೆಹಾಕುತ್ತಿದ್ದಾರೆ.
Revenge murder in Gadag, woman murdered after slitting throat in Bakery on her back from the court.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm