ಬ್ರೇಕಿಂಗ್ ನ್ಯೂಸ್
04-10-22 04:24 pm HK News Desk ಕ್ರೈಂ
ಗದಗ, ಅ.04: ನಗರದ ಮುಳಗುಂದ ನಾಕಾ ಬಳಿಯ ಎಸ್.ಬಿ ಬೇಕರಿ ಎದುರು ಹಾಡಹಗಲೇ ಮಹಿಳೆಯ ಕೊಲೆ ನಡೆದಿದ್ದು ಬೆಟಗೇರಿ ಜನರು ಬೆಚ್ಚಿಬಿದ್ದಿದ್ದಾರೆ.
ನಗರದ ಗಂಗಿಮಡಿ ಬಡಾವಣೆ ನಿವಾಸಿಯಾಗಿದ್ದ ಶೋಭಾ ಲಮಾಣಿ ಅಲಿಯಾಸ್ ಮಿನಾಜ್ ಬೇಪಾರಿ ಕೊಲೆಯಾದ ಮಹಿಳೆ. ಹಳೆಯ ದ್ವೇಷದ ಹಿನ್ನೆಲೆ ಚೇತನ್ ಕುಮಾರ್ ಹಾಗೂ ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ ಅಂತಾ ಎಸ್.ಪಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ.
ನ್ಯಾಯಾಲಯದ ಕಲಾಪ ಮುಗಿಸಿಕೊಂಡು ಆಟೋ ಏರಿ ಮಧ್ಯಾಹ್ನ ನಗರದ ಎಸ್.ಬಿ ಬೇಕರಿ ಬಳಿ ಬಂದಾಕೆಯ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಮೃತ ಶೋಭಾ ಮಗುವಿಗಾಗಿ ಬೇಕರಿ ತಿನಿಸು ಖರೀದಿಸಲು ಬೇಕರಿಗೆ ಬಂದಿದ್ದರು. ಅಲ್ಲೇ ಕಾಯ್ದು ಕೂತಿದ್ದ ಇಬ್ಬರು ಆರೋಪಿಗಳು ಚಾಕುವಿನಿಂದ ಕತ್ತು ಸೀಳಿಸಿದ್ದಾರೆ.
ಘಟನೆ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಅಣ್ಣನ ಹತ್ಯೆಗೆ ಪ್ರತಿಕಾರ ;
ಗದಗ ನಗರದ ಗಂಗಿಮಡಿಯಲ್ಲಿ 2020 ರಲ್ಲಿ ರಮೇಶ್ ಕುಮಾರ್ ಎಂಬಾತನ ಕೊಲೆ ನಡೆದಿದ್ದು. ಕೊಲೆ ಕೇಸ್ ವಿಚಾರವಾಗಿ ಶೋಭಾ ಅಲಿಯಾಸ್ ಮಿನಾಜ್ ಹಾಗೂ ಗಂಡ ವಾಸೀಂ ಬೇಪಾರಿ ಈ ಕೊಲೆಯಲ್ಲಿ ಭಾಗಿಯಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಜಾಮೀನಿನ ಮೇಲೆ ಇಬ್ಬರು ಹೊರ ಬಂದಿದ್ದರು. ಜಾಮೀನು ಪಡೆದ ನಂತರ ಇಬ್ಬರು ಹುಬ್ಬಳ್ಳಿಯಲ್ಲಿ ವಾಸವಿದ್ದರು.
ಕೋರ್ಟ್ ಕಲಾಪ ಇದ್ದಾಗ ಗದಗ ನಗರಕ್ಕೆ ಬರುತ್ತಿದ್ದರು. ಪ್ರಕರಣದ ವಿಚಾರಣೆಗೆ ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಶೋಭಾ ಬಂದಿದ್ದರು ಎನ್ನಲಾಗಿದೆ. ಇದೇ ವೇಳೆಗೆ ಕಾಯುತ್ತಿದ್ದ ಆರೋಪಿಗಳಾದ ಚೇತನ್ ಕುಮಾರ್, ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ.
2020 ರಮೇಶ್ ಕೊಲೆ ಹಿನ್ನೆಲೆ ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿಯನ್ನ ಪೊಲೀಸರು ಕಲೆಹಾಕುತ್ತಿದ್ದಾರೆ.
Revenge murder in Gadag, woman murdered after slitting throat in Bakery on her back from the court.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am