ಬ್ರೇಕಿಂಗ್ ನ್ಯೂಸ್
04-10-22 04:24 pm HK News Desk ಕ್ರೈಂ
ಗದಗ, ಅ.04: ನಗರದ ಮುಳಗುಂದ ನಾಕಾ ಬಳಿಯ ಎಸ್.ಬಿ ಬೇಕರಿ ಎದುರು ಹಾಡಹಗಲೇ ಮಹಿಳೆಯ ಕೊಲೆ ನಡೆದಿದ್ದು ಬೆಟಗೇರಿ ಜನರು ಬೆಚ್ಚಿಬಿದ್ದಿದ್ದಾರೆ.
ನಗರದ ಗಂಗಿಮಡಿ ಬಡಾವಣೆ ನಿವಾಸಿಯಾಗಿದ್ದ ಶೋಭಾ ಲಮಾಣಿ ಅಲಿಯಾಸ್ ಮಿನಾಜ್ ಬೇಪಾರಿ ಕೊಲೆಯಾದ ಮಹಿಳೆ. ಹಳೆಯ ದ್ವೇಷದ ಹಿನ್ನೆಲೆ ಚೇತನ್ ಕುಮಾರ್ ಹಾಗೂ ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ ಅಂತಾ ಎಸ್.ಪಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ.
ನ್ಯಾಯಾಲಯದ ಕಲಾಪ ಮುಗಿಸಿಕೊಂಡು ಆಟೋ ಏರಿ ಮಧ್ಯಾಹ್ನ ನಗರದ ಎಸ್.ಬಿ ಬೇಕರಿ ಬಳಿ ಬಂದಾಕೆಯ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಮೃತ ಶೋಭಾ ಮಗುವಿಗಾಗಿ ಬೇಕರಿ ತಿನಿಸು ಖರೀದಿಸಲು ಬೇಕರಿಗೆ ಬಂದಿದ್ದರು. ಅಲ್ಲೇ ಕಾಯ್ದು ಕೂತಿದ್ದ ಇಬ್ಬರು ಆರೋಪಿಗಳು ಚಾಕುವಿನಿಂದ ಕತ್ತು ಸೀಳಿಸಿದ್ದಾರೆ.
ಘಟನೆ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಅಣ್ಣನ ಹತ್ಯೆಗೆ ಪ್ರತಿಕಾರ ;
ಗದಗ ನಗರದ ಗಂಗಿಮಡಿಯಲ್ಲಿ 2020 ರಲ್ಲಿ ರಮೇಶ್ ಕುಮಾರ್ ಎಂಬಾತನ ಕೊಲೆ ನಡೆದಿದ್ದು. ಕೊಲೆ ಕೇಸ್ ವಿಚಾರವಾಗಿ ಶೋಭಾ ಅಲಿಯಾಸ್ ಮಿನಾಜ್ ಹಾಗೂ ಗಂಡ ವಾಸೀಂ ಬೇಪಾರಿ ಈ ಕೊಲೆಯಲ್ಲಿ ಭಾಗಿಯಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಜಾಮೀನಿನ ಮೇಲೆ ಇಬ್ಬರು ಹೊರ ಬಂದಿದ್ದರು. ಜಾಮೀನು ಪಡೆದ ನಂತರ ಇಬ್ಬರು ಹುಬ್ಬಳ್ಳಿಯಲ್ಲಿ ವಾಸವಿದ್ದರು.
ಕೋರ್ಟ್ ಕಲಾಪ ಇದ್ದಾಗ ಗದಗ ನಗರಕ್ಕೆ ಬರುತ್ತಿದ್ದರು. ಪ್ರಕರಣದ ವಿಚಾರಣೆಗೆ ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಶೋಭಾ ಬಂದಿದ್ದರು ಎನ್ನಲಾಗಿದೆ. ಇದೇ ವೇಳೆಗೆ ಕಾಯುತ್ತಿದ್ದ ಆರೋಪಿಗಳಾದ ಚೇತನ್ ಕುಮಾರ್, ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ.
2020 ರಮೇಶ್ ಕೊಲೆ ಹಿನ್ನೆಲೆ ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿಯನ್ನ ಪೊಲೀಸರು ಕಲೆಹಾಕುತ್ತಿದ್ದಾರೆ.
Revenge murder in Gadag, woman murdered after slitting throat in Bakery on her back from the court.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm