ಬ್ರೇಕಿಂಗ್ ನ್ಯೂಸ್
04-10-22 04:24 pm HK News Desk ಕ್ರೈಂ
ಗದಗ, ಅ.04: ನಗರದ ಮುಳಗುಂದ ನಾಕಾ ಬಳಿಯ ಎಸ್.ಬಿ ಬೇಕರಿ ಎದುರು ಹಾಡಹಗಲೇ ಮಹಿಳೆಯ ಕೊಲೆ ನಡೆದಿದ್ದು ಬೆಟಗೇರಿ ಜನರು ಬೆಚ್ಚಿಬಿದ್ದಿದ್ದಾರೆ.
ನಗರದ ಗಂಗಿಮಡಿ ಬಡಾವಣೆ ನಿವಾಸಿಯಾಗಿದ್ದ ಶೋಭಾ ಲಮಾಣಿ ಅಲಿಯಾಸ್ ಮಿನಾಜ್ ಬೇಪಾರಿ ಕೊಲೆಯಾದ ಮಹಿಳೆ. ಹಳೆಯ ದ್ವೇಷದ ಹಿನ್ನೆಲೆ ಚೇತನ್ ಕುಮಾರ್ ಹಾಗೂ ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ ಅಂತಾ ಎಸ್.ಪಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ.
ನ್ಯಾಯಾಲಯದ ಕಲಾಪ ಮುಗಿಸಿಕೊಂಡು ಆಟೋ ಏರಿ ಮಧ್ಯಾಹ್ನ ನಗರದ ಎಸ್.ಬಿ ಬೇಕರಿ ಬಳಿ ಬಂದಾಕೆಯ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಮೃತ ಶೋಭಾ ಮಗುವಿಗಾಗಿ ಬೇಕರಿ ತಿನಿಸು ಖರೀದಿಸಲು ಬೇಕರಿಗೆ ಬಂದಿದ್ದರು. ಅಲ್ಲೇ ಕಾಯ್ದು ಕೂತಿದ್ದ ಇಬ್ಬರು ಆರೋಪಿಗಳು ಚಾಕುವಿನಿಂದ ಕತ್ತು ಸೀಳಿಸಿದ್ದಾರೆ.
ಘಟನೆ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಅಣ್ಣನ ಹತ್ಯೆಗೆ ಪ್ರತಿಕಾರ ;
ಗದಗ ನಗರದ ಗಂಗಿಮಡಿಯಲ್ಲಿ 2020 ರಲ್ಲಿ ರಮೇಶ್ ಕುಮಾರ್ ಎಂಬಾತನ ಕೊಲೆ ನಡೆದಿದ್ದು. ಕೊಲೆ ಕೇಸ್ ವಿಚಾರವಾಗಿ ಶೋಭಾ ಅಲಿಯಾಸ್ ಮಿನಾಜ್ ಹಾಗೂ ಗಂಡ ವಾಸೀಂ ಬೇಪಾರಿ ಈ ಕೊಲೆಯಲ್ಲಿ ಭಾಗಿಯಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಜಾಮೀನಿನ ಮೇಲೆ ಇಬ್ಬರು ಹೊರ ಬಂದಿದ್ದರು. ಜಾಮೀನು ಪಡೆದ ನಂತರ ಇಬ್ಬರು ಹುಬ್ಬಳ್ಳಿಯಲ್ಲಿ ವಾಸವಿದ್ದರು.
ಕೋರ್ಟ್ ಕಲಾಪ ಇದ್ದಾಗ ಗದಗ ನಗರಕ್ಕೆ ಬರುತ್ತಿದ್ದರು. ಪ್ರಕರಣದ ವಿಚಾರಣೆಗೆ ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಶೋಭಾ ಬಂದಿದ್ದರು ಎನ್ನಲಾಗಿದೆ. ಇದೇ ವೇಳೆಗೆ ಕಾಯುತ್ತಿದ್ದ ಆರೋಪಿಗಳಾದ ಚೇತನ್ ಕುಮಾರ್, ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ.
2020 ರಮೇಶ್ ಕೊಲೆ ಹಿನ್ನೆಲೆ ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿಯನ್ನ ಪೊಲೀಸರು ಕಲೆಹಾಕುತ್ತಿದ್ದಾರೆ.
Revenge murder in Gadag, woman murdered after slitting throat in Bakery on her back from the court.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm