ಬ್ರೇಕಿಂಗ್ ನ್ಯೂಸ್
04-10-22 04:24 pm HK News Desk ಕ್ರೈಂ
ಗದಗ, ಅ.04: ನಗರದ ಮುಳಗುಂದ ನಾಕಾ ಬಳಿಯ ಎಸ್.ಬಿ ಬೇಕರಿ ಎದುರು ಹಾಡಹಗಲೇ ಮಹಿಳೆಯ ಕೊಲೆ ನಡೆದಿದ್ದು ಬೆಟಗೇರಿ ಜನರು ಬೆಚ್ಚಿಬಿದ್ದಿದ್ದಾರೆ.
ನಗರದ ಗಂಗಿಮಡಿ ಬಡಾವಣೆ ನಿವಾಸಿಯಾಗಿದ್ದ ಶೋಭಾ ಲಮಾಣಿ ಅಲಿಯಾಸ್ ಮಿನಾಜ್ ಬೇಪಾರಿ ಕೊಲೆಯಾದ ಮಹಿಳೆ. ಹಳೆಯ ದ್ವೇಷದ ಹಿನ್ನೆಲೆ ಚೇತನ್ ಕುಮಾರ್ ಹಾಗೂ ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ ಅಂತಾ ಎಸ್.ಪಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ.
ನ್ಯಾಯಾಲಯದ ಕಲಾಪ ಮುಗಿಸಿಕೊಂಡು ಆಟೋ ಏರಿ ಮಧ್ಯಾಹ್ನ ನಗರದ ಎಸ್.ಬಿ ಬೇಕರಿ ಬಳಿ ಬಂದಾಕೆಯ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಮೃತ ಶೋಭಾ ಮಗುವಿಗಾಗಿ ಬೇಕರಿ ತಿನಿಸು ಖರೀದಿಸಲು ಬೇಕರಿಗೆ ಬಂದಿದ್ದರು. ಅಲ್ಲೇ ಕಾಯ್ದು ಕೂತಿದ್ದ ಇಬ್ಬರು ಆರೋಪಿಗಳು ಚಾಕುವಿನಿಂದ ಕತ್ತು ಸೀಳಿಸಿದ್ದಾರೆ.
ಘಟನೆ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಅಣ್ಣನ ಹತ್ಯೆಗೆ ಪ್ರತಿಕಾರ ;
ಗದಗ ನಗರದ ಗಂಗಿಮಡಿಯಲ್ಲಿ 2020 ರಲ್ಲಿ ರಮೇಶ್ ಕುಮಾರ್ ಎಂಬಾತನ ಕೊಲೆ ನಡೆದಿದ್ದು. ಕೊಲೆ ಕೇಸ್ ವಿಚಾರವಾಗಿ ಶೋಭಾ ಅಲಿಯಾಸ್ ಮಿನಾಜ್ ಹಾಗೂ ಗಂಡ ವಾಸೀಂ ಬೇಪಾರಿ ಈ ಕೊಲೆಯಲ್ಲಿ ಭಾಗಿಯಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಜಾಮೀನಿನ ಮೇಲೆ ಇಬ್ಬರು ಹೊರ ಬಂದಿದ್ದರು. ಜಾಮೀನು ಪಡೆದ ನಂತರ ಇಬ್ಬರು ಹುಬ್ಬಳ್ಳಿಯಲ್ಲಿ ವಾಸವಿದ್ದರು.
ಕೋರ್ಟ್ ಕಲಾಪ ಇದ್ದಾಗ ಗದಗ ನಗರಕ್ಕೆ ಬರುತ್ತಿದ್ದರು. ಪ್ರಕರಣದ ವಿಚಾರಣೆಗೆ ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಶೋಭಾ ಬಂದಿದ್ದರು ಎನ್ನಲಾಗಿದೆ. ಇದೇ ವೇಳೆಗೆ ಕಾಯುತ್ತಿದ್ದ ಆರೋಪಿಗಳಾದ ಚೇತನ್ ಕುಮಾರ್, ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ.
2020 ರಮೇಶ್ ಕೊಲೆ ಹಿನ್ನೆಲೆ ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿಯನ್ನ ಪೊಲೀಸರು ಕಲೆಹಾಕುತ್ತಿದ್ದಾರೆ.
Revenge murder in Gadag, woman murdered after slitting throat in Bakery on her back from the court.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm