ಬ್ರೇಕಿಂಗ್ ನ್ಯೂಸ್
04-10-22 04:24 pm HK News Desk ಕ್ರೈಂ
ಗದಗ, ಅ.04: ನಗರದ ಮುಳಗುಂದ ನಾಕಾ ಬಳಿಯ ಎಸ್.ಬಿ ಬೇಕರಿ ಎದುರು ಹಾಡಹಗಲೇ ಮಹಿಳೆಯ ಕೊಲೆ ನಡೆದಿದ್ದು ಬೆಟಗೇರಿ ಜನರು ಬೆಚ್ಚಿಬಿದ್ದಿದ್ದಾರೆ.
ನಗರದ ಗಂಗಿಮಡಿ ಬಡಾವಣೆ ನಿವಾಸಿಯಾಗಿದ್ದ ಶೋಭಾ ಲಮಾಣಿ ಅಲಿಯಾಸ್ ಮಿನಾಜ್ ಬೇಪಾರಿ ಕೊಲೆಯಾದ ಮಹಿಳೆ. ಹಳೆಯ ದ್ವೇಷದ ಹಿನ್ನೆಲೆ ಚೇತನ್ ಕುಮಾರ್ ಹಾಗೂ ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ ಅಂತಾ ಎಸ್.ಪಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ.
ನ್ಯಾಯಾಲಯದ ಕಲಾಪ ಮುಗಿಸಿಕೊಂಡು ಆಟೋ ಏರಿ ಮಧ್ಯಾಹ್ನ ನಗರದ ಎಸ್.ಬಿ ಬೇಕರಿ ಬಳಿ ಬಂದಾಕೆಯ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಮೃತ ಶೋಭಾ ಮಗುವಿಗಾಗಿ ಬೇಕರಿ ತಿನಿಸು ಖರೀದಿಸಲು ಬೇಕರಿಗೆ ಬಂದಿದ್ದರು. ಅಲ್ಲೇ ಕಾಯ್ದು ಕೂತಿದ್ದ ಇಬ್ಬರು ಆರೋಪಿಗಳು ಚಾಕುವಿನಿಂದ ಕತ್ತು ಸೀಳಿಸಿದ್ದಾರೆ.
ಘಟನೆ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಅಣ್ಣನ ಹತ್ಯೆಗೆ ಪ್ರತಿಕಾರ ;
ಗದಗ ನಗರದ ಗಂಗಿಮಡಿಯಲ್ಲಿ 2020 ರಲ್ಲಿ ರಮೇಶ್ ಕುಮಾರ್ ಎಂಬಾತನ ಕೊಲೆ ನಡೆದಿದ್ದು. ಕೊಲೆ ಕೇಸ್ ವಿಚಾರವಾಗಿ ಶೋಭಾ ಅಲಿಯಾಸ್ ಮಿನಾಜ್ ಹಾಗೂ ಗಂಡ ವಾಸೀಂ ಬೇಪಾರಿ ಈ ಕೊಲೆಯಲ್ಲಿ ಭಾಗಿಯಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಜಾಮೀನಿನ ಮೇಲೆ ಇಬ್ಬರು ಹೊರ ಬಂದಿದ್ದರು. ಜಾಮೀನು ಪಡೆದ ನಂತರ ಇಬ್ಬರು ಹುಬ್ಬಳ್ಳಿಯಲ್ಲಿ ವಾಸವಿದ್ದರು.
ಕೋರ್ಟ್ ಕಲಾಪ ಇದ್ದಾಗ ಗದಗ ನಗರಕ್ಕೆ ಬರುತ್ತಿದ್ದರು. ಪ್ರಕರಣದ ವಿಚಾರಣೆಗೆ ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಶೋಭಾ ಬಂದಿದ್ದರು ಎನ್ನಲಾಗಿದೆ. ಇದೇ ವೇಳೆಗೆ ಕಾಯುತ್ತಿದ್ದ ಆರೋಪಿಗಳಾದ ಚೇತನ್ ಕುಮಾರ್, ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ.
2020 ರಮೇಶ್ ಕೊಲೆ ಹಿನ್ನೆಲೆ ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿಯನ್ನ ಪೊಲೀಸರು ಕಲೆಹಾಕುತ್ತಿದ್ದಾರೆ.
Revenge murder in Gadag, woman murdered after slitting throat in Bakery on her back from the court.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm