ಬ್ರೇಕಿಂಗ್ ನ್ಯೂಸ್
06-10-22 08:01 pm Mangalore Correspondent ಕ್ರೈಂ
ಮಂಗಳೂರು, ಅ.6: ಇತ್ತೀಚೆಗೆ ಮಂಗಳೂರಿಗೆ ಬಂದಿದ್ದ ಬೆಂಗಳೂರಿನ ಟೆಕ್ಕಿಯೊಬ್ಬ ಕಾಶ್ಮೀರದ ವೈಷ್ಣೋದೇವಿ ದೇವಸ್ಥಾನಕ್ಕೆ ತೆರಳಲು ಹೆಲಿಕಾಪ್ಟರ್ ಇದೆಯಾ ಎಂದು ಗೂಗಲ್ ನಲ್ಲಿ ಸರ್ಚ್ ಮಾಡಿದ್ದರು. ಈ ವೇಳೆ, ನಕಲಿ ವ್ಯಕ್ತಿಯೊಬ್ಬ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುವ ನೆಪದಲ್ಲಿ ಹಣ ಪಡೆದು ವಂಚಿಸಿದ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಕಳೆದ ಮಾರ್ಚ್ 3ರಂದು ಬೆಂಗಳೂರಿನಲ್ಲಿ ಕೆಲಸ ಮಾಡುವ ಐಟಿ ಸಾಫ್ಟ್ ವೇರ್ ತಂತ್ರಜ್ಞರೊಬ್ಬರು ಮಂಗಳೂರಿಗೆ ಬಂದಿದ್ದರು. ಮಂಗಳೂರಿನಲ್ಲಿ ಸುತ್ತಾಡಿದ ಬಳಿಕ ಜಮ್ಮು ಕಾಶ್ಮೀರದ ವೈಷ್ಣೋದೇವಿ ದೇವಸ್ಥಾನಕ್ಕೆ ತೆರಳಲು ನೇರವಾದ ವಿಮಾನ ಸೌಲಭ್ಯ ಇದೆಯೇ ಎಂದು ಸರ್ಚ್ ನಡೆಸಿದ್ದಾರೆ. ಈ ವೇಳೆ, ವಿಮಾನ ಇಲ್ಲದೇ ಇರುವಾಗ ಖಾಸಗಿ ಹೆಲಿಕಾಪ್ಟರ್ ಇದೆಯೇ ಎಂದು ಸರ್ಚ್ ಮಾಡಿದ್ದರು.
ಗೂಗಲ್ ನಲ್ಲಿ ಸರ್ಚ್ ಮಾಡಿದ ವೇಳೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುವ ವೆಬ್ ಸೈಟ್ ತೆರೆದುಕೊಂಡಿದ್ದು, ಸಂಪರ್ಕಿಸಿದಾಗ ನಿತಿನ್ ಎಂದು ತನ್ನನ್ನು ಪರಿಚಯಿಸಿದ್ದ ವ್ಯಕ್ತಿ ಫೋನ್ ಕರೆಗೆ ಸಿಕ್ಕಿದ್ದಾನೆ. ಆತ ಕಾಪ್ಟರ್ ಬುಕ್ಕಿಂಗ್ ಮಾಡಲು ಹಣ ನೀಡಬೇಕೆಂದು ಹೇಳಿದ್ದು, ಕ್ಯೂಆರ್ ಕೋಡ್ ಕಳಿಸಿದ್ದಾನೆ. ಬುಕ್ಕಿಂಗ್ ಅಡ್ವಾನ್ಸ್ ಎಂದು 38,060 ರೂಪಾಯಿ ಕಳಿಸಿಕೊಡಲು ಹೇಳಿದ್ದು, ಹಣವನ್ನು ಈ ವ್ಯಕ್ತಿ ಕಳಿಸಿದ್ದಾರೆ. ಆನಂತರ, ಫೋನ್ ಕರೆ ಮಾಡಿದಾಗ ನಿತಿನ್ ಎಂದು ಹೇಳಿಕೊಂಡಿದ್ದ ವ್ಯಕ್ತಿಯ ಫೋನ್ ಸ್ವಿಚ್ ಆಫ್ ಆಗಿತ್ತು. ಆತ ತನ್ನನ್ನು ವೈಷ್ಣೋದೇವಿ ದೇವಸ್ಥಾನದ ಪ್ರತಿನಿಧಿಯೆಂದೂ ಹೇಳಿಕೊಂಡಿದ್ದ. ಮೋಸ ಹೋದ ಟೆಕ್ಕಿ ಆನಂತರ ವೈಷ್ಣೋದೇವಿ ದೇವಸ್ಥಾನದಲ್ಲಿ ಸಂಪರ್ಕಿಸಿದಾಗ, ತಮಗೆ ಯಾವುದೇ ಅಂತಹ ಪ್ರತಿನಿಧಿ ಇಲ್ಲವೆಂದು ಉತ್ತರ ನೀಡಿದ್ದಾರೆ. ಅದರಂತೆ, ಐಟಿ ಉದ್ಯೋಗಿ ತಾನು ಮೋಸ ಹೋಗಿದ್ದು ಅರಿವಿಗೆ ಬಂದಿದ್ದು ಮಂಗಳೂರಿನಲ್ಲಿಯೇ ಬಂದು ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.
An IT consultant working in Bengaluru, who searched internet for booking a helicopter for Vaishno Devi Temple visit on Google, was cheated by an online fraud. The complainant had arrived in Mangaluru on March 3, and the next day he had searched for information regarding helicopter booking, for travel to the Vaishno Devi Temple on Google. From the search results, he got in touch with one Nithin, who introduced himself as a representative of the Vaishno Devi Temple Board.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm