ಬ್ರೇಕಿಂಗ್ ನ್ಯೂಸ್
07-10-22 10:00 pm Mangalore Correspondent ಕ್ರೈಂ
ಉಳ್ಳಾಲ, ಅ.7 : ನಿನ್ನೆ ಮಧ್ಯರಾತ್ರಿ ಉಳ್ಳಾಲದ ಫಿಶ್ ಮೀಲ್ ಫ್ಯಾಕ್ಟರಿಗೆ ಮರಗಳನ್ನ ಸಾಗಿಸುತ್ತಿದ್ದ ಎರಡು ಲಾರಿಗಳನ್ನ ಅರಣ್ಯಾಧಿಕಾರಿಗಳು ಉಳ್ಳಾಲ ಬೈಲಿನಲ್ಲಿ ತಡೆದು ವಶಕ್ಕೆ ಪಡೆದಿದ್ದರು. ಆದರೆ, ಈ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ಕೇಳಿದಾಗ ಲಾರಿಗಳನ್ನ ರಾತ್ರಿಯೇ ಬಿಟ್ಟು ಕಳಿಸಿದ್ದಾಗಿ ತಿಳಿಸಿದ್ದಾರೆ.
ಈ ಬಗ್ಗೆ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಕುಮಾರ್ ಪೈ ಅವರಲ್ಲಿ ಕೇಳಿದಾಗ, ಆರಂಭದಲ್ಲಿ ಯಾವ ಮರ, ಎಲ್ಲಿ ಸೀಜ್ ಮಾಡಿದ್ದು ಎಂದು ಮರು ಪ್ರಶ್ನೆ ಹಾಕಿದ್ದರು. ಫೋಟೊ ಸಹಿತಿ ಮಾಹಿತಿ ಕೇಳಿದಾಗ, ಉಳ್ಳಾಲ ಬೈಲಿನಲ್ಲಿ ವಶಕ್ಕೆ ಪಡೆದ ಎರಡು ಲಾರಿಗಳಲ್ಲಿ ಮ್ಯಾಂಜಿಯಮ್ ಮರಗಳನ್ನ ಸಾಗಿಸುತ್ತಿದ್ದರು. ಅಧಿಕಾರಿಗಳು ಅಕೇಶಿಯ ಮರಗಳೆಂದು ಭಾವಿಸಿ ಲಾರಿಗಳನ್ನ ವಶಕ್ಕೆ ಪಡೆದಿದ್ದರು. ಪಟ್ಟಾ ಜಾಗದಿಂದ ಮ್ಯಾಂಜಿಯಮ್ ಮರಗಳನ್ನ ಕಡಿದು ಸಾಗಿಸಲು ಇಲಾಖೆಯ ಯಾವುದೇ ಪರವಾನಿಗೆ, ಅನುಮತಿ ಬೇಕಾಗಿಲ್ಲ. ಸರಕಾರಿ ಜಾಗದಿಂದ ಕಡಿದು ಕೊಂಡೊಯ್ಯುತ್ತಿದ್ದರೆ ಮಾತ್ರ ಕ್ರಮ ಕೈಗೊಳ್ಳಬಹುದೆಂದು ಸ್ಪಷ್ಟನೆ ನೀಡಿದ್ದಾರೆ. ಉಳ್ಳಾಲದಲ್ಲಿ ವಶಕ್ಕೆ ಪಡೆದ ಮರಗಳು ಉಡುಪಿಯಿಂದ ಉಳ್ಳಾಲಕ್ಕೆ ತರಲಾಗಿದ್ದು ಪಟ್ಟಾ ಜಾಗದಿಂದ ತಂದಿದ್ದರು ಎಂದು ಅದರ ರೆಕಾರ್ಡ್ ಕೈಯಲ್ಲಿ ಇಟ್ಕೊಂಡ ರೀತಿ ತಿಳಿಸಿದ್ದಾರೆ.


ಆದರೆ ಎರಡು ಲಾರಿಗಳಲ್ಲಿ ಲೋಡ್ ಮಾಡಿದ್ದ ಮರಗಳ ಮೂಟೆಯಲ್ಲಿ ಯಾವೆಲ್ಲ ಮರಗಳಿವೆಯೆಂದು ಅಧಿಕಾರಿಗಳು ರಾತೋರಾತ್ರಿ ಏನೆಂದು ಪರಿಶೀಲನೆ ಮಾಡಿದ್ದರೋ ಗೊತ್ತಿಲ್ಲ. ಫಿಶ್ ಮೀಲ್ ಫ್ಯಾಕ್ಟರಿಗಳ ಬಾಯ್ಲರ್ ಗಳಿಗೆ ಸೌದೆಯನ್ನಾಗಿ ಬಳಸಲು ಮರಗಳನ್ನು ಉಪಯೋಗಿಸುತ್ತಾರೆ. ಅಲ್ಲಿದ್ದುದು ಮ್ಯಾಂಜಿಯಮ್ ಮರ, ಅದಕ್ಕೆ ಪರವಾನಗಿ ಬೇಡ ಎಂದಿದ್ದರೆ ಅಧಿಕಾರಿಗಳು ಜಪ್ತಿ ಮಾಡುತ್ತಿದ್ದರೇ ಎನ್ನುವ ಅನುಮಾನವೂ ಬರುತ್ತದೆ. ಅದಲ್ಲದೆ ಸೂಕ್ತ ದಾಖಲೆ ಇಟ್ಟುಕೊಂಡು ಸಕ್ರಮವಾಗಿಯೇ ಮರ ಸಾಗಿಸುತ್ತಿದ್ದರೆ ಮಧ್ಯರಾತ್ರಿಯಲ್ಲಿ ಎಸ್ಕಾರ್ಟ್ ವಾಹನಗಳನ್ನ ಬಳಸಿ ತರಬೇಕಿತ್ತೇ..? ಗುರುವಾರ ರಾತ್ರಿ ಅರಣ್ಯ ಅಧಿಕಾರಿಗಳು ಲಾರಿಯನ್ನ ಅಡ್ಡ ಹಾಕಿದಾಗ ಎಸ್ಕಾರ್ಟ್ ವಾಹನದಲ್ಲಿದ್ದವರು ಅಧಿಕಾರಿಗಳಲ್ಲಿ ಮಾತುಕತೆ ನಡೆಸುತ್ತಿದ್ದುದನ್ನು ನೋಡಿದ ಸಾರ್ವಜನಿಕರು ಮಾಧ್ಯಮಕ್ಕೆ ತಿಳಿಸಿದ್ದರು. ಆನಂತರ ಮಾಧ್ಯಮ ಪ್ರತಿನಿಧಿಯನ್ನ ಕಂಡು ಎರಡೂ ಲಾರಿಗಳನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

ಬೇರೆ ಮೂಲಗಳಿಂದ ಮಾಹಿತಿ ಕೇಳಿದಾಗ, ಯಾವುದೇ ರೀತಿಯ ಮರ ಸಾಗಿಸುವುದಕ್ಕೂ ಪರವಾನಗಿ ಬೇಕಂತೆ. ಇಲ್ಲಿ ಯಾವ ರೀತಿಯ ಲೋಪ ಆಗಿದ್ದರಿಂದ ಒಮ್ಮೆಗೆ ವಶಕ್ಕೆ ಪಡೆಯಲಾಗಿತ್ತು. ಆನಂತರ, ಯಾವ ಕಾರಣಕ್ಕೆ ಹಾಗೆಯೇ ಬಿಟ್ಟು ಕಳಿಸಲಾಗಿದೆ ಎನ್ನೋದು ಸಹಜ ಪ್ರಶ್ನೆ ಮತ್ತು ಇವರ ಕಾರ್ಯಾಚರಣೆ ಬಗ್ಗೆ ಸಂಶಯ ಮೂಡಿಸುವ ಸಂಗತಿ. ಅರಣ್ಯಾಧಿಕಾರಿಗಳು ತಮ್ಮ ಕರ್ತವ್ಯ ಬಿಟ್ಟು ಉಳಿದೆಲ್ಲವನ್ನೂ ಮಾಡುತ್ತಾರೆ ಎಂಬ ಆರೋಪ ಕೇಳಿಬಂದಿದ್ದು ಇದೇ ಕಾರಣಕ್ಕಿರಬೇಕು.
Mid night raid by Forest officers in Ullal, stop loaded truck but leave them within hours in Mangalore.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am