ಬ್ರೇಕಿಂಗ್ ನ್ಯೂಸ್
08-10-22 05:07 pm HK News Desk ಕ್ರೈಂ
ಕೊಚ್ಚಿ, ಅ.8: ಅಫ್ಘಾನಿಸ್ತಾನದಲ್ಲಿ ತಯಾರಿಸಿದ ಅಂದಾಜು 1200 ಕೋಟಿ ರೂಪಾಯಿ ಮೌಲ್ಯದ 200 ಕೆಜಿ ಹೆರಾಯಿನ್ ಅನ್ನು ಭಾರತದ ನೌಕಾಪಡೆ ಹಾಗೂ ಮಾದಕ ದ್ರವ್ಯ ನಿಯಂತ್ರಣ ಸಂಸ್ಥೆ (ಎನ್ಸಿಬಿ) ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ವಶಕ್ಕೆ ಪಡೆದುಕೊಂಡಿದೆ
ಇರಾನ್ ಹಡಗಿನಲ್ಲಿ ಹೆರಾಯಿನ್ ತುಂಬಿಕೊಂಡು ಪಾಕಿಸ್ತಾನ ಮಾರ್ಗವಾಗಿ ಭಾರತಕ್ಕೆ ತರಲಾಗುತ್ತಿತ್ತು. ಹೆರಾಯಿನ್ ಅನ್ನು ಭಾರತ ಮತ್ತು ಶ್ರೀಲಂಕಾದಲ್ಲಿ ಮಾರಾಟ ಮಾಡುವ ಪ್ರಯತ್ನ ನಡೆದಿತ್ತು. ಸದ್ಯ ಅಷ್ಟೂ ಡ್ರಗ್ಸ್ ಅನ್ನು ಸೀಜ್ ಮಾಡಿರುವ ಅಧಿಕಾರಿಗಳು 6 ಇರಾನ್ ಪ್ರಜೆಗಳನ್ನು ಬಂಧಿಸಿದ್ದಾರೆ.

ಡ್ರಗ್ಸ್ ಅನ್ನು ಜಲನಿರೋಧಕ, ಏಳು ಪದರದ ಪ್ಯಾಕೇಜಿಂಗ್ನಲ್ಲಿ ಇರಾನಿನ ಹಡಗಿನಲ್ಲಿ ಸಾಗಿಸಿ, ಅದನ್ನು ಶ್ರೀಲಂಕಾದ ಹಡಗಿಗೆ ವರ್ಗಾಯಿಸಲು ಮುಂದಾಗಿದ್ದರು. ಆದರೆ, ಗುರುವಾರ ಕೇರಳದ ಕೊಚ್ಚಿಯಲ್ಲಿ ನೌಕಾಪಡೆ ಮತ್ತು ಎನ್ಸಿಬಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ದೊಡ್ಡ ಡ್ರಗ್ಸ್ ಜಾಲವೇ ಸಿಕ್ಕಿಬಿದ್ದಿದೆ ಎಂದು ಎನ್ಸಿಬಿಯ ಹಿರಿಯ ಅಧಿಕಾರಿ ಸಂಜಯ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಡ್ರಗ್ಸ್ ಪ್ಯಾಕೆಟ್ಗಳು ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಕಾರ್ಟೆಲ್ಗಳಿಗೆ ವಿಶಿಷ್ಟವಾದ ಗುರುತುಗಳು ಮತ್ತು ಪ್ಯಾಕಿಂಗ್ ವಿಶೇಷತೆಗಳನ್ನು ಹೊಂದಿವೆ ಎಂದು ಅಧಿಕಾರಿ ಹೇಳಿದರು. ಕೆಲವು ಡ್ರಗ್ ಪ್ಯಾಕೆಟ್ಗಳ 'ಚೇಳು' ಸೀಲ್ ಗುರುತುಗಳನ್ನು ಹೊಂದಿದ್ದರೆ, ಇತರವುಗಳು 'ಡ್ರ್ಯಾಗನ್' ಸೀಲ್ ಗುರುತುಗಳನ್ನು ಹೊಂದಿದ್ದವು ಎಂದು ತಿಳಿಸಿದರು.
ಬಹುಶಃ ಹೆರಾಯಿನ್ ಅನ್ನು ಮೊದಲು ಪಾಕಿಸ್ತಾನದಿಂದ ದೋಣಿಯಲ್ಲಿ ಕಳುಹಿಸಲಾಗಿದೆ. ಇದಾದ ಬಳಿಕ ಮಾರ್ಗ ಮಧ್ಯೆ ಇರಾನ್ ಹಡಗಿಗೆ ಡ್ರಗ್ಸ್ ವಿನಿಮಯ ಮಾಡಲಾಗಿದೆ. ನಂತರ ಶ್ರೀಲಂಕಾದ ಹಡಗಿಗೆ ವಿನಿಮಯ ಮಾಡಿಕೊಳ್ಳುವಷ್ಟರಲ್ಲಿ ಭಾರತೀಯ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೆ. ಅಲ್ಲದೆ, ಇರಾನ್ ಹಡಗಿನಲ್ಲಿದ್ದ ವ್ಯಕ್ತಿಗಳು ಸಮುದ್ರಕ್ಕೆ ಹಾರಿ ತಪ್ಪಿಸಿಕೊಳ್ಳಲು ಮತ್ತು ಹೆರಾಯಿನ್ ಅನ್ನು ನೀರಿನಲ್ಲಿ ಎಸೆಯಲು ಪ್ರಯತ್ನಿಸಿದರು ಎಂದು ಎನ್ಸಿಬಿ ಅಧಿಕಾರಿ ಸಿಂಗ್ ಹೇಳಿದ್ದಾರೆ.
In a joint operation with the Indian Navy, the Narcotics Control Bureau intercepted an Iranian fishing vessel off the coast of Kochi and seized 200 kg of Afghan-origin heroin, worth about 1200 crore rupees in the international market. Six crew members of the boat, all Iranian nationals, have been taken into custody and are being interrogated.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm