ಬ್ರೇಕಿಂಗ್ ನ್ಯೂಸ್
11-10-22 12:42 pm Mangalore Correspondent ಕ್ರೈಂ
ಉಳ್ಳಾಲ, ಅ.11: ಗಣಿ ಇಲಾಖೆಯವರು ಜಪ್ತಿ ಪಡಿಸಿದ್ದ ಮರಳನ್ನು ಮಧ್ಯರಾತ್ರಿ ದಂಧೆಕೋರರೇ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಸಂಗ ಬೆಳಕಿಗೆ ಬಂದಿದ್ದು ಇದನ್ನ ಪ್ರಶ್ನಿಸಲು ಹೋದ ವ್ಯಕ್ತಿಯನ್ನು ಟಿಪ್ಪರ್ ಡಿಕ್ಕಿಯಾಗಿಸಿ ಕೊಲೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.
ಮರಳು ದಂಧೆಕೋರರ ವಿರುದ್ಧ ರೊಚ್ಚಿಗೆದ್ದ ಸ್ಥಳೀಯರು ರಾತ್ರಿಯೇ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮರಳು ಸಾಗಾಟದ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಉಚ್ಚಿಲ ನಿವಾಸಿ ಕಿಶೋರ್(52) ಗಂಭೀರ ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಉಚ್ಚಿಲದ ಬಟ್ಟಂಪಾಡಿ ಎಂಬಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಮರಳನ್ನು ಇತ್ತೀಚೆಗೆ ಗಣಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದರು. ಆದರೆ ಜಪ್ತಿಗೊಳಿಸಿದ್ದ ಮರಳನ್ನೇ ರಾತ್ರಿ ವೇಳೆ ಸದ್ದಿಲ್ಲದೆ ಬೇರೆಡೆ ಸಾಗಿಸಲಾಗುತ್ತಿದ್ದು ಪ್ರಶ್ನಿಸಲು ಹೋದವರಿಗೆ ಇಲಾಖೆಯ ಆದೇಶವಿದೆ ಎಂದು ದಂಧೆಕೋರರು ಬೆದರಿಸಿ, ಹಲ್ಲೆ ಮಾಡಲು ಮುಂದಾಗುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.


ಉಚ್ಚಿಲದ ರೈಲ್ವೇ ಗೇಟ್ ಬಳಿ ನಿನ್ನೆ ರಾತ್ರಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರನ್ನ ಕಿಶೋರ್ ಅವರು ತನ್ನ ಸ್ಕೂಟರಲ್ಲಿ ಬೆನ್ನಟ್ಟಿದ್ದು, ಇದನ್ನ ಗಮನಿಸಿದ ಟಿಪ್ಪರ್ ಚಾಲಕ ಹಠತ್ತಾಗಿ ಬ್ರೇಕ್ ಹೊಡೆದು ಅಪಘಾತ ನಡೆಸಿದ್ದಾನೆ. ತಕ್ಷಣ ಸ್ಥಳೀಯರು ಜಮಾಯಿಸಿದ್ದು ಟಿಪ್ಪರನ್ನ ತಡೆದು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಠಾಣಾ ಪಿಎಸ್ಸೈ ಪ್ರದೀಪ್ ಟಿ.ಆರ್ ಮರಳು ದಂಧೆಕೋರರ ಪರ ಬ್ಯಾಟಿಂಗ್ ನಡೆಸಿದ್ದು, ಉದ್ರಿಕ್ತ ಸ್ಥಳೀಯರು ಪಿಎಸ್ಸೈಯನ್ನ ತರಾಟೆಗೆ ತೆಗೆದಿದ್ದಾರೆ. ಜನರ ಆಕ್ರೋಶಕ್ಕೆ ಬಗ್ಗಿದ ಪೊಲೀಸರು ಅಪಘಾತಕ್ಕೆ ಕಾರಣವಾದ ಟಿಪ್ಪರ್ ಮತ್ತು ಚಾಲಕನನ್ನ ವಶಕ್ಕೆ ಪಡೆದಿದ್ದಾರೆ.
ಪೋಲೀಸರು, ಅಧಿಕಾರಿಗಳು ಅಕ್ರಮ ಮರಳು ಸಾಗಾಟದ ಪರ ವಹಿಸಿದ್ದು, ರಾತ್ರಿಯಿಂದ ಬೆಳಗ್ಗಿನ ವರೆಗೂ ಅಕ್ರಮ ಮರಳು ಸಾಗಾಟವಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
Mangalore Illegal sand mining in Ullal, seized sand robbed, truck rams two wheeler that hinders, people protest.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm