ಬ್ರೇಕಿಂಗ್ ನ್ಯೂಸ್
18-10-22 11:13 pm Udupi Correspondent ಕ್ರೈಂ
ಉಡುಪಿ, ಅ.18 : ಕೇರಳದಲ್ಲಿ ಬಾಲಕಿಯ ಅತ್ಯಾಚಾರಗೈದು ಕೊಲೆ ನಡೆಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿ ಜೈಲಿನಿಂದ ತಪ್ಪಿಸಿಕೊಂಡಿದ್ದ. ಎರಡು ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ನಾಪತ್ತೆಯಾಗಿದ್ದ ಆರೋಪಿ ಈಗ ಬ್ರಹ್ಮಾವರದಲ್ಲಿ ಪತ್ತೆಯಾಗಿದ್ದು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಕೇರಳ ರಾಜಧಾನಿ ತಿರುವಂತಪುರಂ ಜಿಲ್ಲೆಯ ರಾಜೇಶ (39) ಬಂಧಿತ. ರಾಜೇಶ್ 2012ರಲ್ಲಿ ತಿರುವಂತಪುರಂ ಗ್ರಾಮಾಂತರ ಜಿಲ್ಲೆಯ ವಾಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದನು. ಈ ಬಗ್ಗೆ ನ್ಯಾಯಾಲಯವು ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ 2013ರಲ್ಲಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು, ನಂತರ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಮಾರ್ಪಾಡು ಮಾಡಲಾಗಿತ್ತು.
ತಿರುವಂತಪುರಂ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯನ್ನು ನಂತರ ನೆಟ್ಟುಕತಾರಿ ಜೈಲಿಗೆ ವರ್ಗಾಯಿಸಲಾಗಿತ್ತು. 2020ರ ಡಿ.23 ರಂದು ಜೈಲಿ ನಿಂದ ತಪ್ಪಿಸಿಕೊಂಡಿದ್ದ. ಈ ಬಗ್ಗೆ ನೇಯಾರ್ ಡ್ಯಾಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿತ್ತು. ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೈದಿ ಉಡುಪಿಯಲ್ಲಿ ವಾಸವಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬ್ರಹ್ಮಾವರ ಪೊಲೀಸರು ಕೇರಳ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬ್ರಹ್ಮಾವರ ತಾಲ್ಲೂಕಿನ ಬಿಲ್ಲಾಡಿ ಗ್ರಾಮದ ಕಬ್ಬಿನ ಹಿತ್ಲು ಎಂಬಲ್ಲಿ ವಶಕ್ಕೆ ಪಡೆದು ಕೇರಳ ಪೊಲೀಸರಿಗೆ ಮಾಹಿತಿ ನೀಡಿತ್ತು. ಕೇರಳ ಪೊಲೀಸರು ಮಂಗಳವಾರ ಆರೋಪಿ ರಾಜೇಶನನ್ನು ವಶಕ್ಕೆ ಪಡೆದು ಕುಂದಾಪುರ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಕೇರಳಕ್ಕೆ ಕರೆದುಕೊಂಡು ಹೋಗಿದ್ದಾರೆ.
Rape accused escaped from Kerala jail found in Udupi.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm