ಬ್ರೇಕಿಂಗ್ ನ್ಯೂಸ್
22-10-22 11:28 am Mangalore Correspondent ಕ್ರೈಂ
ಪುತ್ತೂರು, ಅ.21: ಬೆಡ್ ಶೀಟ್ ಮಾರಾಟದ ನೆಪದಲ್ಲಿ ಮನೆಗೆ ಬಂದಿದ್ದ ಇಬ್ಬರು ಯುವಕರು ಮಹಿಳೆಯ ಜೊತೆ ಸಲುಗೆ ಮಾತನಾಡಿದ್ದಲ್ಲದೆ, ಜೊತೆಗೆ ಮಲಗಲು ಅವಕಾಶ ನೀಡಿದರೆ ಪುಕ್ಕಟೆಯಾಗಿ ಬೆಡ್ ಶೀಟ್ ಕೊಡುತ್ತೇವೆಂದು ಹೇಳಿ, ಮಾನಭಂಗಕ್ಕೆ ಯತ್ನಿಸಿದ ಘಟನೆ ಕಡಬ ತಾಲೂಕಿನ ದೋಲ್ಪಾಡಿ ಗ್ರಾಮದ ಕಾಯರ್ ಮನೆ ಎಂಬಲ್ಲಿ ನಡೆದಿದೆ.
ನೀಲಿ ಬಣ್ಣದ ಕಾರಿನಲ್ಲಿ ಬಂದಿದ್ದ ರಫೀಕ್ ಮತ್ತು ರಮಿಯುದ್ದೀನ್ ಎಂಬ ಯುವಕರು ಈ ಕೃತ್ಯ ಎಸಗಿದ್ದಾರೆ ಎಂದು ಮಹಿಳೆ ಕಡಬ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಡ್ ಶೀಟ್ ರೇಟ್ ಹೇಳುವಂತೆ ಹೇಳಿದ ಮಹಿಳೆಯರಿಗೆ, ಬೆಡ್ ಶೀಟ್ ನಿಮಗೆ ಕಡಿಮೆ ದರಕ್ಕೆ ಕೊಡುತ್ತೇವೆ ಎನ್ನುತ್ತಾ ಮನೆಯೊಳಗೆ ಬಂದಿದ್ದಾರೆ. ಬೆಡ್ ಶೀಟ್ ರೇಟ್ ಹೇಳದೆ, ನಿಮ್ಮಲ್ಲಿ ಹಣ ಇಲ್ಲದಿದ್ದರೆ ಪರ್ವಾಗಿಲ್ಲ. ನಮ್ಮ ಜೊತೆ ಮಲಗಲು ಅವಕಾಶ ನೀಡಿದರೆ ಬೆಟ್ ಶೀಟ್ ಫ್ರೀ ಕೊಡುತ್ತೇವೆ. ಜೊತೆಗೆ ಒಂದಷ್ಟು ಹಣವನ್ನೂ ಕೊಡುತ್ತೇವೆ ಎಂದು ಪುಸಲಾಯಿಸಿದ್ದಾರೆ. ನೀವು ಮನೆಯಿಂದ ಹೋಗಿ ಎಂದು ಮಹಿಳೆಯರು ಬೈದಾಗ, ಕೈಯನ್ನು ಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾರೆಂದು ದೂರಲಾಗಿದೆ. ಬಳಿಕ ಮಹಿಳೆ ಜೋರು ಬೊಬ್ಬೆ ಹೊಡೆದಾಗ ಅವರು ಓಡಿ ಹೋಗಿದ್ದಾರೆ. ಘಟನೆ ಸಂಬಂಧಿಸಿ ಎಸ್ಸಿ-ಎಸ್ಟಿ ಏಕ್ಟ್ ಅಡಿ ಪ್ರಕರಣ ದಾಖಲಾಗಿದೆ.
ಇದೇ ವಿಚಾರದಲ್ಲಿ ಬೆಳ್ಳಾರೆ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. ರಫೀಕ್ ಮತ್ತು ರಮಿಯುದ್ದೀನ್ ದೋಲ್ಪಾಡಿಯ ಘಟನೆಯ ಬಳಿಕ ಕಾಣಿಯೂರು ಗ್ರಾಮಕ್ಕೆ ತಲುಪಿದಾಗ ಕೆಲವು ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ. ರಸ್ತೆಗೆ ಪಿಕಪ್ ಅಡ್ಡ ಇಟ್ಟು ಯುವಕರಿದ್ದ ಕಾರನ್ನು ನಿಲ್ಲಿಸಿ, ಅವರಿಗೆ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು. ಕಾರು ಜಖಂಗೊಳಿಸಿ, ಬೆಡ್ ಶೀಟ್ ಗಳನ್ನು ಹಾಳುಗೆಡವಿದ್ದಾರೆಂದು ರಫೀಕ್ ಮತ್ತು ರಮಿಯುದ್ದೀನ್ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
Mangalore Sexual assault in the name of selling blankets, two held at Kadaba.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm