ಬ್ರೇಕಿಂಗ್ ನ್ಯೂಸ್
22-10-22 11:28 am Mangalore Correspondent ಕ್ರೈಂ
ಪುತ್ತೂರು, ಅ.21: ಬೆಡ್ ಶೀಟ್ ಮಾರಾಟದ ನೆಪದಲ್ಲಿ ಮನೆಗೆ ಬಂದಿದ್ದ ಇಬ್ಬರು ಯುವಕರು ಮಹಿಳೆಯ ಜೊತೆ ಸಲುಗೆ ಮಾತನಾಡಿದ್ದಲ್ಲದೆ, ಜೊತೆಗೆ ಮಲಗಲು ಅವಕಾಶ ನೀಡಿದರೆ ಪುಕ್ಕಟೆಯಾಗಿ ಬೆಡ್ ಶೀಟ್ ಕೊಡುತ್ತೇವೆಂದು ಹೇಳಿ, ಮಾನಭಂಗಕ್ಕೆ ಯತ್ನಿಸಿದ ಘಟನೆ ಕಡಬ ತಾಲೂಕಿನ ದೋಲ್ಪಾಡಿ ಗ್ರಾಮದ ಕಾಯರ್ ಮನೆ ಎಂಬಲ್ಲಿ ನಡೆದಿದೆ.
ನೀಲಿ ಬಣ್ಣದ ಕಾರಿನಲ್ಲಿ ಬಂದಿದ್ದ ರಫೀಕ್ ಮತ್ತು ರಮಿಯುದ್ದೀನ್ ಎಂಬ ಯುವಕರು ಈ ಕೃತ್ಯ ಎಸಗಿದ್ದಾರೆ ಎಂದು ಮಹಿಳೆ ಕಡಬ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಡ್ ಶೀಟ್ ರೇಟ್ ಹೇಳುವಂತೆ ಹೇಳಿದ ಮಹಿಳೆಯರಿಗೆ, ಬೆಡ್ ಶೀಟ್ ನಿಮಗೆ ಕಡಿಮೆ ದರಕ್ಕೆ ಕೊಡುತ್ತೇವೆ ಎನ್ನುತ್ತಾ ಮನೆಯೊಳಗೆ ಬಂದಿದ್ದಾರೆ. ಬೆಡ್ ಶೀಟ್ ರೇಟ್ ಹೇಳದೆ, ನಿಮ್ಮಲ್ಲಿ ಹಣ ಇಲ್ಲದಿದ್ದರೆ ಪರ್ವಾಗಿಲ್ಲ. ನಮ್ಮ ಜೊತೆ ಮಲಗಲು ಅವಕಾಶ ನೀಡಿದರೆ ಬೆಟ್ ಶೀಟ್ ಫ್ರೀ ಕೊಡುತ್ತೇವೆ. ಜೊತೆಗೆ ಒಂದಷ್ಟು ಹಣವನ್ನೂ ಕೊಡುತ್ತೇವೆ ಎಂದು ಪುಸಲಾಯಿಸಿದ್ದಾರೆ. ನೀವು ಮನೆಯಿಂದ ಹೋಗಿ ಎಂದು ಮಹಿಳೆಯರು ಬೈದಾಗ, ಕೈಯನ್ನು ಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾರೆಂದು ದೂರಲಾಗಿದೆ. ಬಳಿಕ ಮಹಿಳೆ ಜೋರು ಬೊಬ್ಬೆ ಹೊಡೆದಾಗ ಅವರು ಓಡಿ ಹೋಗಿದ್ದಾರೆ. ಘಟನೆ ಸಂಬಂಧಿಸಿ ಎಸ್ಸಿ-ಎಸ್ಟಿ ಏಕ್ಟ್ ಅಡಿ ಪ್ರಕರಣ ದಾಖಲಾಗಿದೆ.
ಇದೇ ವಿಚಾರದಲ್ಲಿ ಬೆಳ್ಳಾರೆ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. ರಫೀಕ್ ಮತ್ತು ರಮಿಯುದ್ದೀನ್ ದೋಲ್ಪಾಡಿಯ ಘಟನೆಯ ಬಳಿಕ ಕಾಣಿಯೂರು ಗ್ರಾಮಕ್ಕೆ ತಲುಪಿದಾಗ ಕೆಲವು ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ. ರಸ್ತೆಗೆ ಪಿಕಪ್ ಅಡ್ಡ ಇಟ್ಟು ಯುವಕರಿದ್ದ ಕಾರನ್ನು ನಿಲ್ಲಿಸಿ, ಅವರಿಗೆ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು. ಕಾರು ಜಖಂಗೊಳಿಸಿ, ಬೆಡ್ ಶೀಟ್ ಗಳನ್ನು ಹಾಳುಗೆಡವಿದ್ದಾರೆಂದು ರಫೀಕ್ ಮತ್ತು ರಮಿಯುದ್ದೀನ್ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
Mangalore Sexual assault in the name of selling blankets, two held at Kadaba.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm