ಬ್ರೇಕಿಂಗ್ ನ್ಯೂಸ್
27-10-22 04:18 pm Mangalore Correspondent ಕ್ರೈಂ
ಮಂಗಳೂರು, ಅ.27 : ಉತ್ತರ ಪ್ರದೇಶದ ಯೋಗಿ ಸರ್ಕಾರದ ಮಾದರಿಯಲ್ಲೇ ಗೋಹತ್ಯೆ ನಡೆಸುವ ಅಕ್ರಮ ದಂಧೆಕೋರರಿಗೆ ರಾಜ್ಯದಲ್ಲೂ ಆಸ್ತಿ ಮುಟ್ಟುಗೋಲಿನ ಶಾಕ್ ನೀಡಲಾಗಿದೆ.
ಗೋ ಹಂತಕರ ವಿರುದ್ಧ ರಾಜ್ಯದಲ್ಲೇ ಮೊದಲ ಬಾರಿಗೆ ಕಠಿಣ ಕ್ರಮಕ್ಕೆ ಸರಕಾರ ಮುಂದಾಗಿದ್ದು, ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರದ ಮೂರು ಕಡೆಗಳಲ್ಲಿ ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದ ಕಟ್ಟಡಗಳನ್ನು ಕಂದಾಯ ಇಲಾಖೆ ಕಾನೂನು ಪ್ರಕಾರ ಮುಟ್ಟುಗೋಲು ಹಾಕಿಕೊಂಡಿದೆ.
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ರ ಕಲಂ 8 (4) ಅಡಿಯಲ್ಲಿ ಮುಟ್ಟುಗೋಲು ಕ್ರಮ ಕೈಗೊಳ್ಳಲಾಗಿದೆ. ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದ ಕಟ್ಟಡ, ಅಲ್ಲಿನ ಜಾಗಗಳನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಜಾಗ ವಶಕ್ಕೆ ಪಡೆದಿದ್ದಲ್ಲದೆ, ಸರ್ಕಾರದ ಹೆಸರಲ್ಲಿ ಆರ್.ಟಿ.ಸಿ ನೋಂದಣಿ ಮಾಡಲಾಗಿದೆ. ಕಾಟಿಪಳ್ಳ, ಅರ್ಕುಳ ಮತ್ತು ಗಂಜಿಮಠದಲ್ಲಿ ಈ ರೀತಿಯ ಆಸ್ತಿ ಮುಟ್ಟುಗೋಲು ಪ್ರಕ್ರಿಯೆ ನಡೆಸಲಾಗಿದೆ.

ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಸೂಚನೆಯಂತೆ ಸಹಾಯಕ ಆಯುಕ್ತ ಮದನ್ ಮೋಹನ್ ಕ್ರಮ ಜರುಗಿಸಿದ್ದಾರೆ. ಪೊಲೀಸ್ ಠಾಣೆಗಳ ವರದಿ ಆಧರಿಸಿ ಜಾಗ ಮಾರಾಟ, ಬಾಡಿಗೆ ಹಾಗೂ ಅಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ಮುಟ್ಟುಗೋಲು ಹಾಕಲಾಗಿದೆ. ಎರಡು ವರ್ಷಗಳ ಹಿಂದೆ ಕಾಯ್ದೆ ಜಾರಿ ಬೆನ್ನಲ್ಲೇ ಪರಿಣಾಮಕಾರಿ ಅನುಷ್ಠಾನಕ್ಕೆ ಶಾಸಕ ಭರತ್ ಶೆಟ್ಟಿ ಸೂಚಿಸಿದ್ದರು.

ಶಾಸಕರ ಸೂಚನೆ ಬೆನ್ನಲ್ಲೇ ಫೀಲ್ಡಿಗಿಳಿದಿದ್ದ ಪೊಲೀಸರು, ಮಂಗಳೂರು ಉತ್ತರ ಕ್ಷೇತ್ರದ ವಿವಿಧ ಕಡೆ ಅಕ್ರಮ ಕಸಾಯಿಖಾನೆಗಳ ಮೇಲೆ ದಾಳಿ ನಡೆಸಿದ್ದರು. ದಾಳಿ ನಡೆಸಿ ಜಾಗ ಮತ್ತು ವಸ್ತುಗಳನ್ನು ವಶಕ್ಕೆ ಪಡೆದು ಮಂಗಳೂರು ವಿಭಾಗದ ಸಹಾಯಕ ಆಯುಕ್ತರಿಗೆ ವರದಿ ಸಲ್ಲಿಸಿದ್ದರು. ಗಂಜಿಮಠದ ಯೂಸೂಫ್, ಅರ್ಕುಳದ ಬಾತೀಶ್, ಕಾಟಿಪಳ್ಳದ ಹಕೀಂ ಎಂಬವರಿಗೆ ಸೇರಿದ ಜಾಗ ಮುಟ್ಟುಗೋಲು ಹಾಕಲಾಗಿದ್ದು, ಬಜಪೆ, ಸುರತ್ಕಲ್ ಹಾಗೂ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಅಕ್ರಮ ಕಸಾಯಿಖಾನೆಗಳು ಇದ್ದವು.
Three slaughterhouses seized at MLA Bharath Shetty behest in Mangalore at Surathkal. The revenue department has seized three abattoirs in Mangaluru north constituency under the Karnataka Prevention of Slaughter and Preservation of Cattle Act 2020, Act 8 (4). The government has taken into possession slaughterhouses at Katipalla, Arkula and Ganjimath run illegally.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm