ಬ್ರೇಕಿಂಗ್ ನ್ಯೂಸ್
27-10-22 09:18 pm HK News Desk ಕ್ರೈಂ
ಹೈದರಾಬಾದ್, ಅ.27: ತೆಲಂಗಾಣದಲ್ಲಿ ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿರುವ ಬಗ್ಗೆ ಆರೋಪ ಕೇಳಿಬಂದಿದ್ದು, ಟಿಆರ್ಎಸ್ ಪಕ್ಷದ ನಾಲ್ವರು ಶಾಸಕರಿಗೆ ನೂರು ಕೋಟಿ ಹಣ ಕೊಟ್ಟು ಸೆಳೆಯಲು ನಡೆಸಿದ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದು ಭಾರೀ ಸುದ್ದಿಯಾಗಿದೆ.
ಟಿಆರ್ಎಸ್ನ ನಾಲ್ವರು ಶಾಸಕರಿಗೆ ಪಕ್ಷ ಬಿಡುವಂತೆ ಬಿಜೆಪಿ 100 ಕೋಟಿ ರೂ. ಆಫರ್ ಕೊಟ್ಟಿತ್ತು ಎಂಬ ಆರೋಪ ಕೇಳಿಬಂದಿದ್ದು, ಶಾಸಕರಿಗೆ ಲಂಚ ನೀಡಲು ಪ್ರಯತ್ನಿಸಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ತೆಲಂಗಾಣ ಬಿಜೆಪಿ ಘಟಕ ಈ ಆರೋಪಗಳನ್ನು ನಿರಾಕರಿಸಿದೆ. ನಲಗೊಂಡ ಜಿಲ್ಲೆಯ ಮುನುಗೊಂಡ ಕ್ಷೇತ್ರದ ಉಪ ಚುನಾವಣೆ ಪ್ರಚಾರದ ನಡುವೆಯೇ ಬಿಜೆಪಿ ವಿರುದ್ಧ ಆಡಳಿತಾರೂಢ ಟಿಆರ್ಎಸ್ ಆಪರೇಷನ್ ಕಮಲದ ಆರೋಪ ಮಾಡಿದೆ.


ತೆಲಂಗಾಣದ ಅಚಂಪೇಟೆ ಶಾಸಕ ಗುವ್ವಲ ಬಾಲರಾಜ್, ತಂಡೂರ್ ಶಾಸಕ ರೋಹಿತ್ ರೆಡ್ಡಿ, ಕೊಲ್ಲಾಪುರ ಶಾಸಕ ಹರ್ಷವರ್ಧನ್ ರೆಡ್ಡಿ ಹಾಗೂ ಪಿನಪಾಕ ಕ್ಷೇತ್ರದ ಶಾಸಕ ರೇಗಾ ಕಾಂತಾ ರಾವ್ ಅವರಿಗೆ ಪಕ್ಷಾಂತರ ಮಾಡಲು 100 ಕೋಟಿ ರೂ. ಆಫರ್ ನೀಡಲಾಗಿದೆ ಎಂಬುದು ಟಿಆರ್ಎಸ್ ಆರೋಪ. ಪ್ರಕರಣಕ್ಕೆ ಸಂಬಂಧಿಸಿ ಸೈಬರಾಬಾದ್ ಪೊಲೀಸರು ಮೂವರನ್ನು ಬಂಧಿಸಿದ್ದು, ಭಾರೀ ಪ್ರಮಾಣದಲ್ಲಿ ಹಣ ಸಾಗಣೆ ಮಾಡುತ್ತಿದ್ದ ಕಾರನ್ನು ವಶಪಡಿಸಿದ್ದಾಗಿ ಮಾಹಿತಿ ನೀಡಿದ್ದಾರೆ. ಆದರೆ ಈ ಹಣ ಟಿಆರ್ಎಸ್ ಶಾಸಕರಿಗೆ ನೀಡಲು ಒಯ್ಯಲಾಗುತ್ತಿತ್ತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸೈದರಬಾದ್ ಎಸ್ಪಿ ಸ್ಟೀಫನ್ ರವೀಂದ್ರ, ಶಾಸಕರಿಗೆ ಹಣದ ಆಮಿಷ ನೀಡಿರುವ ಬಗ್ಗೆ ದೂರು ನೀಡಿದ್ದರು. ಬಾಲರಾಜ್ ಅವರ ರೆಸಾರ್ಟ್ ನಲ್ಲಿ ದಾಳಿ ನಡೆಸಿದ ಸಂದರ್ಭದಲ್ಲಿ ಮೂವರು ಪತ್ತೆಯಾಗಿದ್ದಾರೆ. ಇನ್ನಷ್ಟು ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
The political war between the ruling Telangana Rashtra Samithi (TRS) and Bharatiya Janata Party has intensified ahead of the Munugode by-polls after TRS leaders alleged that BJP lured its four MLAs by offering 100 crores each. According to the reports, the police registered a case against three persons after receiving a complaint from TRS MLA Pilot Rohit Reddy.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm