ಬ್ರೇಕಿಂಗ್ ನ್ಯೂಸ್
27-10-22 09:18 pm HK News Desk ಕ್ರೈಂ
ಹೈದರಾಬಾದ್, ಅ.27: ತೆಲಂಗಾಣದಲ್ಲಿ ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿರುವ ಬಗ್ಗೆ ಆರೋಪ ಕೇಳಿಬಂದಿದ್ದು, ಟಿಆರ್ಎಸ್ ಪಕ್ಷದ ನಾಲ್ವರು ಶಾಸಕರಿಗೆ ನೂರು ಕೋಟಿ ಹಣ ಕೊಟ್ಟು ಸೆಳೆಯಲು ನಡೆಸಿದ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದು ಭಾರೀ ಸುದ್ದಿಯಾಗಿದೆ.
ಟಿಆರ್ಎಸ್ನ ನಾಲ್ವರು ಶಾಸಕರಿಗೆ ಪಕ್ಷ ಬಿಡುವಂತೆ ಬಿಜೆಪಿ 100 ಕೋಟಿ ರೂ. ಆಫರ್ ಕೊಟ್ಟಿತ್ತು ಎಂಬ ಆರೋಪ ಕೇಳಿಬಂದಿದ್ದು, ಶಾಸಕರಿಗೆ ಲಂಚ ನೀಡಲು ಪ್ರಯತ್ನಿಸಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ತೆಲಂಗಾಣ ಬಿಜೆಪಿ ಘಟಕ ಈ ಆರೋಪಗಳನ್ನು ನಿರಾಕರಿಸಿದೆ. ನಲಗೊಂಡ ಜಿಲ್ಲೆಯ ಮುನುಗೊಂಡ ಕ್ಷೇತ್ರದ ಉಪ ಚುನಾವಣೆ ಪ್ರಚಾರದ ನಡುವೆಯೇ ಬಿಜೆಪಿ ವಿರುದ್ಧ ಆಡಳಿತಾರೂಢ ಟಿಆರ್ಎಸ್ ಆಪರೇಷನ್ ಕಮಲದ ಆರೋಪ ಮಾಡಿದೆ.
ತೆಲಂಗಾಣದ ಅಚಂಪೇಟೆ ಶಾಸಕ ಗುವ್ವಲ ಬಾಲರಾಜ್, ತಂಡೂರ್ ಶಾಸಕ ರೋಹಿತ್ ರೆಡ್ಡಿ, ಕೊಲ್ಲಾಪುರ ಶಾಸಕ ಹರ್ಷವರ್ಧನ್ ರೆಡ್ಡಿ ಹಾಗೂ ಪಿನಪಾಕ ಕ್ಷೇತ್ರದ ಶಾಸಕ ರೇಗಾ ಕಾಂತಾ ರಾವ್ ಅವರಿಗೆ ಪಕ್ಷಾಂತರ ಮಾಡಲು 100 ಕೋಟಿ ರೂ. ಆಫರ್ ನೀಡಲಾಗಿದೆ ಎಂಬುದು ಟಿಆರ್ಎಸ್ ಆರೋಪ. ಪ್ರಕರಣಕ್ಕೆ ಸಂಬಂಧಿಸಿ ಸೈಬರಾಬಾದ್ ಪೊಲೀಸರು ಮೂವರನ್ನು ಬಂಧಿಸಿದ್ದು, ಭಾರೀ ಪ್ರಮಾಣದಲ್ಲಿ ಹಣ ಸಾಗಣೆ ಮಾಡುತ್ತಿದ್ದ ಕಾರನ್ನು ವಶಪಡಿಸಿದ್ದಾಗಿ ಮಾಹಿತಿ ನೀಡಿದ್ದಾರೆ. ಆದರೆ ಈ ಹಣ ಟಿಆರ್ಎಸ್ ಶಾಸಕರಿಗೆ ನೀಡಲು ಒಯ್ಯಲಾಗುತ್ತಿತ್ತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸೈದರಬಾದ್ ಎಸ್ಪಿ ಸ್ಟೀಫನ್ ರವೀಂದ್ರ, ಶಾಸಕರಿಗೆ ಹಣದ ಆಮಿಷ ನೀಡಿರುವ ಬಗ್ಗೆ ದೂರು ನೀಡಿದ್ದರು. ಬಾಲರಾಜ್ ಅವರ ರೆಸಾರ್ಟ್ ನಲ್ಲಿ ದಾಳಿ ನಡೆಸಿದ ಸಂದರ್ಭದಲ್ಲಿ ಮೂವರು ಪತ್ತೆಯಾಗಿದ್ದಾರೆ. ಇನ್ನಷ್ಟು ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
The political war between the ruling Telangana Rashtra Samithi (TRS) and Bharatiya Janata Party has intensified ahead of the Munugode by-polls after TRS leaders alleged that BJP lured its four MLAs by offering 100 crores each. According to the reports, the police registered a case against three persons after receiving a complaint from TRS MLA Pilot Rohit Reddy.
22-06-25 12:36 pm
HK News Desk
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
22-06-25 10:58 am
HK News Desk
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
Couple Caught at Jaipur Hotel, Video: ಹೋಟೆಲ್...
20-06-25 10:19 pm
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm