ಬ್ರೇಕಿಂಗ್ ನ್ಯೂಸ್
28-10-22 06:08 pm Bangalore Correspondent ಕ್ರೈಂ
ಬೆಂಗಳೂರು, ಅ.28 : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ಕು ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು 98 ಲಕ್ಷ ಮೌಲ್ಯದ ಒಂದು ಕೆಜಿ 985 ಗ್ರಾಂ ಚಿನ್ನದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಮಹಮ್ಮದ್ ಸದ್ದಾಂ(36), ಸಯ್ಯದ್ ತರಬೇಜ್ ಪಾಷಾ(32) ಮತ್ತು ಅಬೀದ್ ಅಜಂ(31) ಮತ್ತು ರಂಜಿತ್ ಸಿಂಗ್ ಬಂಧಿತರು. ಆರೋಪಿಗಳ ಬಂಧನದಿಂದ ಬೆಂಗಳೂರು, ಮೈಸೂರು ಮತ್ತು ಹಾಸನ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳ 12 ಪ್ರಕರಣಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಸುಮಾರು ಐದಾರು ವರ್ಷಗಳಿಂದ ಮೂವರು ಆರೋಪಿಗಳು ಕಳ್ಳತನ ಪ್ರವೃತ್ತಿಯಲ್ಲಿ ತೊಡಗಿ ಬೆಂಗಳೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಹಗಲು ವೇಳೆ ಮನೆ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಮಹಮ್ಮದ್ ಸದ್ದಾಂ, ಸಯ್ಯದ್ ತರಬೇಜ್ ಪಾಷಾ ಮತ್ತು ಅಬೀದ್ ಅಜಂ ಈ ಮೂವರು ಆರೋಪಿಗಳು ಈ ಹಿಂದೆ ಸಿಟಿ ಮಾರ್ಕೆಟ್, ಡಿಜೆ ಹಳ್ಳಿ ಮತ್ತು ಹಾಸನ ಟೌನ್ ಪೊಲೀಸ್ ಠಾಣೆಯ ಕಳ್ಳತನ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದು, ಜೈಲಿನಿಂದ ಬಿಡುಗಡೆಯಾದ ನಂತರವೂ ಮತ್ತೆ ಕಳವು ಪ್ರಕರಣದಲ್ಲಿ ತೊಡಗಿರುವುದು ವಿಚಾರಣೆಯಲ್ಲಿ ಕಂಡುಬಂದಿದೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಾನು ಕೆಲಸ ಮಾಡುತ್ತಿದ್ದ ಅಂಗಡಿಯ ಕಪಾಟಿನ ನಕಲಿ ಕೀ ಮಾಡಿಟ್ಟುಕೊಂಡು ಮಾಲೀಕರಿಗೆ ತಿಳಿಯದೆ ಕಳೆದ ಐದಾರು ವರ್ಷಗಳಿಂದ ಕಳ್ಳತನ ಮಾಡುತ್ತಿದ್ದ ಆರೋಪಿ ರಂಜಿತ್ ಸಿಂಗ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅಂಗಡಿಯಲ್ಲಿ ಕಳ್ಳತನವಾಗಿರುವ ಬಗ್ಗೆ ಮಾಲೀಕರಿಗೆ ಅನುಮಾನ ಬಂದಿದ್ದರಿಂದ ಆರೋಪಿ ಕೆಲಸ ಬಿಟ್ಟು ರಾಜಸ್ತಾನದಲ್ಲಿ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿತ್ತು. ಆರೋಪಿಗಳಿಂದ ಸುಮಾರು 98 ಲಕ್ಷ ರೂ. ಬೆಲೆ ಬಾಳುವ ಒಂದು ಕೆಜಿ 980 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುತ್ತಾರೆ.
Four notorious robbers having 12 cases arrested in Bangalore by CCB.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm