ಬ್ರೇಕಿಂಗ್ ನ್ಯೂಸ್
28-10-22 10:55 pm HK News Desk ಕ್ರೈಂ
ಲಕ್ನೋ, ಅ.28 : ತಮ್ಮ ರೀತಿಯಲ್ಲೇ ಆತ ಕೂಡ ನಪುಂಸಕನಾಗಬೇಕು ಎನ್ನುವ ಉದ್ದೇಶದಲ್ಲಿ ಉತ್ತರ ಪ್ರದೇಶದಲ್ಲಿ ಇಬ್ಬರು ತೃತೀಯ ಲಿಂಗಿಗಳು ತಮ್ಮೊಂದಿಗೆ ಹೆಚ್ಚು ಕಾಲ ಕಳೆಯುತ್ತಿದ್ದ ವ್ಯಕ್ತಿಯೊಬ್ಬನ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ಬೆಳಕಿಗೆ ಬಂದಿದೆ. ಬಟ್ಟೆ ಖರೀದಿಸುವ ನೆಪದಲ್ಲಿ ಶಾಮ್ಲಿ ಜಿಲ್ಲೆಯ ಗರ್ಹಿ ಪುಖ್ತಾದಲ್ಲಿ ವಾಸಿಸುತ್ತಿದ್ದ ತೃತೀಯ ಲಿಂಗಿಗಳಾದ ಪಿಂಕಿ ಹಾಗೂ ರೇಷ್ಮಾ ಎಂಬವರು ಟೈಲರ್ ಆಗಿರುವ ಜಬ್ಬಾರ್ ಎಂಬವರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾರೆ.
ಕಾರಿನಲ್ಲಿ ಕರೆದೊಯ್ಯುವ ಮಾರ್ಗಮಧ್ಯೆ ಜಬ್ಬಾರ್ಗೆ ಚಹಾದಲ್ಲಿ ಅಮಲು ಬರುವ ಪದಾರ್ಥ ನೀಡಲಾಗಿತ್ತು. ಮೂರ್ಛೆ ತಪ್ಪಿದಾಗ ಮರ್ಮಾಂಗವನ್ನು ಕತ್ತರಿಸಿ ಶುಗರ್ ಮಿಲ್ ಬಳಿಯಲ್ಲಿ ಎಸೆದು ಹೋಗಿದ್ದಾರೆ. ಜಬ್ಬಾರ್ ಶಾಮ್ಲಿ ಪ್ರದೇಶದ ಸೊಂತಾ ರಸೂಲ್ಪುರ ಗ್ರಾಮದ ನಿವಾಸಿಯಾಗಿದ್ದು ಮದುವೆಯಾಗಿದ್ದರೂ, ತೃತೀಯಲಿಂಗಿಗಳ ಜೊತೆ ಕಾಲ ಕಳೆಯುತ್ತಿದ್ದರು ಎನ್ನಲಾಗಿದೆ.
ಠಾಣಾ ಭವನ ಮತ್ತು ಗರ್ಹಿ ಗುಪ್ತಾದಲ್ಲಿ ವಾಸ ಮಾಡುತ್ತಿರುವ ಇಬ್ಬರು ತೃತೀಯ ಲಿಂಗಿಗಳ ಜೊತೆ ಸ್ನೇಹ ಸಂಬಂಧ ಇಟ್ಟುಕೊಂಡಿದ್ದೆ. ಯಾವುದೋ ಕೆಲಸದ ನಿಮಿತ್ತ ಠಾಣಾಭವನಕ್ಕೆ ಹೋಗಿದ್ದೆ, ಅಲ್ಲಿ ಪಿಂಕಿ ಮತ್ತು ರೇಷ್ಮಾ ಸಿಕ್ಕಿದ್ದು ಶಾಮ್ಲಿಯಿಂದ ಬಟ್ಟೆ ಖರೀದಿಸುವ ನೆಪದಲ್ಲಿ ಕಾರಿನಲ್ಲಿ ಜೊತೆಗೆ ಬಂದಿದ್ದರು. ಕಾರಿನಲ್ಲಿ ಹೋಗುತ್ತಿದ್ದ ವೇಳೆ ನನಗೆ ಚಹಾ ನೀಡಿದ್ದು ಬಳಿಕ ನನಗೆ ಪ್ರಜ್ಞೆ ತಪ್ಪಿತ್ತು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಜಬ್ಬಾರ್ ಪ್ರಜ್ಞೆ ಬಂದ ಕೂಡಲೇ ಮನೆಯವರಿಗೆ ಕರೆ ಮಾಡಿದ್ದಾರೆ. ಮನೆಯವರು ಬಂದು ತಕ್ಷಣ ಆಸ್ಪತ್ರೆಗೆ ಒಯ್ದಿದ್ದಾರೆ.
Couple cuts genitals of man for not cooperating for sex with them.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am