ಬ್ರೇಕಿಂಗ್ ನ್ಯೂಸ್
04-08-20 04:01 am Headline Karnataka News Network ಕ್ರೈಂ
ಮಂಗಳೂರು, ಆಗಸ್ಟ್ 4: ತನಗೆ ಮದುವೆ ಮಾಡಿಸಿಲ್ಲ ಎಂದು ಕೋಪಗೊಂಡ ಯುವಕನೊಬ್ಬ ತನ್ನ 4 ಮಂದಿ ರಕ್ತ ಸಂಬಂಧಿಗಳನ್ನೇ ಕೊಡಲಿಯಿಂದ ಕಡಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಡಿಜಿಲ್ಲೆ ಕಾಸರಗೋಡಿನಲ್ಲಿ ನಿನ್ನೆ ರಾತ್ರಿ ನಡಿದಿದೆ.
ಕಾಸರಗೋಡಿನ ಬಾಯಾರು ಸಮೀಪದ ಕನಿಯಾಲ ಗುರುಕುಮೇರಿ ಎಂಬಲ್ಲಿ ಈ ದಾರುಣ ಘಟನೆ ನಡೆದಿದ್ದು , ಕೃಷಿ ಕೂಲಿ ಕಾರ್ಮಿಕ ಸಹೋದರರಾದ ಬಾಬು(65), ವಿಠಲ್ (60), ಸದಾಶಿವ (55) ಹಾಗು ಸೋದರಿ ದೇವಕಿ (58) ಮೃತಪಟ್ಟಿದ್ದಾರೆ. ಮೃತಪಟ್ಟವರ ಪೈಕಿ ದೇವಕಿ ಕೊಲೆ ಆರೋಪಿ ಉದಯನ ಚಿಕ್ಕಮ್ಮ ಹಾಗು ಉಳಿದ ಮೂವರು ಆರೋಪಿಯ ಮಾವಂದಿರಾಗಿದ್ದಾರೆ.
ಆರೋಪಿ ಉದಯ ಅವಿವಾಹಿತನಾಗಿದ್ದು ಕಳೆದ ಕೆಲ ವರ್ಷಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ತನಗೆ ಮದುವೆ ಮಾಡಿಸಿಲ್ಲ ಎಂದು ತನ್ನ ಸಂಬಂಧಿಗಳೊಂದಿಗೆ ಆಗಾಗ ಆರೋಪಿ ಉದಯ ಜಗಳ ಮಾಡುತ್ತಿದ್ದ. ಕೆಲವು ದಿನಗಳ ಹಿಂದೆ ಆರೋಪಿ ಉದಯ ಎಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆಯನ್ನೂ ಹಾಕಿದ್ದ. ನಿನ್ನೆ ರಾತ್ರಿ ಮನೆಗೆ ಬಂದ ಆರೋಪಿ ಉದಯ, ಮನೆಯಲ್ಲಿದ್ದ ಕೊಡಲಿಯನ್ನು ಹಿಡಿದು ಮನೆಯಲ್ಲಿದ್ದವರ ಮೇಲೆ ದಾಳಿ ಮಾಡಿದ್ದಾನೆ. ಆತನ ಏಟಿಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಬಳಿಕ ತನ್ನ ತಾಯಿಯನ್ನೂ ಕೊಲೆ ಮಾಡಲು ಆರೋಪಿ ತೆರಳಿದ್ದು ಅದೃಷ್ಟವಶಾತ್ ಅವರು ನೆರೆಮನೆಗೆ ಓಡಿಹೋಗಿ ತಪ್ಪಿಕೊಂಡಿದ್ದಾರೆ.

ನೆರೆಮನೆಯವರು ಆಗಮಿಸುವಷ್ಟರಲ್ಲಿ ಆರೋಪಿ ಸುಮಾರು ಅರ್ಧ ಕಿ.ಮೀ. ದೂರ ಓಡಿ ಪರಾರಿಯಾಗಲು ಯತ್ನಿಸಿದ್ದಾನೆ. ಸ್ಥಳೀಯರು ಬಳಿಕ ಸನಿಹದ ಕಟ್ಟತ್ತಾರಿನಿಂದ ಆತನನ್ನು ಹಿಡಿದು ರಿಕ್ಷಾದಲ್ಲಿ ಮನೆಗೆ ಕರೆ ತಂದಿದ್ದಾರೆ. ಆದರೆ ಆತ ಮತ್ತೆ ಪರಾರಿಯಾಗಲೆತ್ನಿಸಿದಾಗ ಕಟ್ಟಿ ಹಾಕಿ ಪೊಲೀಸರಿಗೊಪ್ಪಿಸಿದ್ದಾರೆ.
ಕಾಸರಗೋಡಿನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 07:17 pm
HK News Staffer
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
14-06-26 02:37 pm
HK News Staffer
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
14-06-26 05:08 pm
HK News Staffer
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am